<p><strong>ಮದ್ದೂರು</strong>: ‘ತಾಲ್ಲೂಕಿನ ದೇಶಹಳ್ಳಿಯ ಮದ್ದೂರಮ್ಮನವರ ಕೆರೆಯ ಅಚ್ಚುಕಟ್ಟು ವ್ಯಾಪ್ತಿಯ ಕೆಮ್ಮಣ್ಣು ನಾಲೆಯ ಆಧುನೀಕರಣ ಕಾಮಗಾರಿಯನ್ನು 4 ತಿಂಗಳಿನಲ್ಲಿ ಪೂರ್ಣಗೊಳಿಸಲು ರೈತರು ಸಹಕರಿಸಬೇಕು’ ಎಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮದ್ದೂರಮ್ಮ ಕೆರೆಯ ಅಚ್ಚುಕಟ್ಟು ವ್ಯಾಪ್ತಿಯ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಮುಂದಿನ ನಾಲ್ಕು ತಿಂಗಳಲ್ಲಿ ಬೆಳೆ ಬೆಳೆಯಲು ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡು ಕೆಮ್ಮಣ್ಣು ನಾಲೆಯ ಆಧುನೀಕರಣ ಮಾಡಲಾಗುವುದು. ಇದಕ್ಕೆ ರೈತರು ಅಗತ್ಯ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು. ಅದಕ್ಕೆ ರೈತರು ಸಮ್ಮತಿ ಸೂಚಿಸಿದರು.</p>.<p>‘ಕೆಮ್ಮಣ್ಣು ನಾಲೆಯ ಆಧುನೀಕರಣ ಮಾಡಲು ಸರ್ಕಾರ ₹90 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಿದ್ದು, ಟೆಂಡರ್ ಹಂತದಲ್ಲಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಂಡು ಕೆಮ್ಮಣ್ಣು ನಾಲೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ’ ಎಂದರು.</p>.<p>‘ಮದ್ದೂರಮ್ಮನ ಕೆರೆ ನೀರನ್ನು 17 ಗ್ರಾಮಗಳ ಜನರು ಆಶ್ರಯಿಸಿದ್ದಾರೆ. ಕೆಮ್ಮಣ್ಣು ನಾಲೆಗೆ ತ್ಯಾಜ್ಯ ಹಾಕುವುದು, ಒಳಚರಂಡಿ ನೀರು ಹರಿಯುವುದು ಸೇರಿದಂತೆ ಅನೇಕ ಕಾರಣದಿಂದ ನಾಲೆಯ ಕೊನೇ ಭಾಗಕ್ಕೆ ನೀರು ಹರಿಯದೆ ರೈತರಿಗೆ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನ ಸೆಳೆದಿದ್ದರಿಂದ ಅನುದಾನಕ್ಕೆ ಅನುಮೋದನೆ ಸಿಕ್ಕಿದೆ’ ಎಂದು ಹೇಳಿದರು.</p>.<p>‘ಕೆಮ್ಮಣ್ಣು ನಾಲೆಗೆ ಪಟ್ಟಣದ ವ್ಯಾಪ್ತಿಯಲ್ಲಿ ಕವರ್ ಡೆಕ್, ನಾಲೆಯ ಎರಡು ಬದಿ ಸಿಸಿ ಚರಂಡಿ, ಪೈಪ್ಲೈನ್, ರಕ್ಷಣಾ ತಡೆಗೋಡೆ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುವುದು’ ಎಂದರು.</p>.<p>‘ಪಟ್ಟಣದ ವ್ಯಾಪ್ತಿಯಲ್ಲಿ ಒಳಚರಂಡಿ ಸಮಸ್ಯೆ ಸರಿಪಡಿಸಲು ₹16.50 ಕೋಟಿ ಬಿಡುಗಡೆಯಾಗಿದ್ದು, ಆದರ ಕಾಮಗಾರಿಯು ಶೀಘ್ರವಾಗಿ ಆರಂಭಗೊಳ್ಳಲಿದೆ’ ಎಂದು ತಿಳಿಸಿದರು.</p>.<p>ಕಾವೇರಿ ನೀರಾವರಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ನಂಜುಂಡೇಗೌಡ, ಸಹಾಯಕ ಕಾರ್ಯಪಾಲಕ ನಾಗರಾಜು, ಉಪ ತಹಶೀಲ್ದಾರ್ ಸೋಮಶೇಖರಯ್ಯ, ರೈತ ಮುಖಂಡರಾದ ದೇಶಹಳ್ಳಿ ಮೋಹನ್ ಕುಮಾರ್, ನ.ಲಿ. ಕೃಷ್ಣ, ಲಕ್ಷ್ಮಣ್ ಚನ್ನಸಂದ್ರ, ರಾಮಯ್ಯ, ಮಹೇಶ್, ಅಜ್ಜಹಳ್ಳಿ ರಾಮಕೃಷ್ಣ, ಎಂ.ಬಿ.ಸಚಿನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ‘ತಾಲ್ಲೂಕಿನ ದೇಶಹಳ್ಳಿಯ ಮದ್ದೂರಮ್ಮನವರ ಕೆರೆಯ ಅಚ್ಚುಕಟ್ಟು ವ್ಯಾಪ್ತಿಯ ಕೆಮ್ಮಣ್ಣು ನಾಲೆಯ ಆಧುನೀಕರಣ ಕಾಮಗಾರಿಯನ್ನು 4 ತಿಂಗಳಿನಲ್ಲಿ ಪೂರ್ಣಗೊಳಿಸಲು ರೈತರು ಸಹಕರಿಸಬೇಕು’ ಎಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮದ್ದೂರಮ್ಮ ಕೆರೆಯ ಅಚ್ಚುಕಟ್ಟು ವ್ಯಾಪ್ತಿಯ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಮುಂದಿನ ನಾಲ್ಕು ತಿಂಗಳಲ್ಲಿ ಬೆಳೆ ಬೆಳೆಯಲು ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡು ಕೆಮ್ಮಣ್ಣು ನಾಲೆಯ ಆಧುನೀಕರಣ ಮಾಡಲಾಗುವುದು. ಇದಕ್ಕೆ ರೈತರು ಅಗತ್ಯ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು. ಅದಕ್ಕೆ ರೈತರು ಸಮ್ಮತಿ ಸೂಚಿಸಿದರು.</p>.<p>‘ಕೆಮ್ಮಣ್ಣು ನಾಲೆಯ ಆಧುನೀಕರಣ ಮಾಡಲು ಸರ್ಕಾರ ₹90 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಿದ್ದು, ಟೆಂಡರ್ ಹಂತದಲ್ಲಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಂಡು ಕೆಮ್ಮಣ್ಣು ನಾಲೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ’ ಎಂದರು.</p>.<p>‘ಮದ್ದೂರಮ್ಮನ ಕೆರೆ ನೀರನ್ನು 17 ಗ್ರಾಮಗಳ ಜನರು ಆಶ್ರಯಿಸಿದ್ದಾರೆ. ಕೆಮ್ಮಣ್ಣು ನಾಲೆಗೆ ತ್ಯಾಜ್ಯ ಹಾಕುವುದು, ಒಳಚರಂಡಿ ನೀರು ಹರಿಯುವುದು ಸೇರಿದಂತೆ ಅನೇಕ ಕಾರಣದಿಂದ ನಾಲೆಯ ಕೊನೇ ಭಾಗಕ್ಕೆ ನೀರು ಹರಿಯದೆ ರೈತರಿಗೆ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನ ಸೆಳೆದಿದ್ದರಿಂದ ಅನುದಾನಕ್ಕೆ ಅನುಮೋದನೆ ಸಿಕ್ಕಿದೆ’ ಎಂದು ಹೇಳಿದರು.</p>.<p>‘ಕೆಮ್ಮಣ್ಣು ನಾಲೆಗೆ ಪಟ್ಟಣದ ವ್ಯಾಪ್ತಿಯಲ್ಲಿ ಕವರ್ ಡೆಕ್, ನಾಲೆಯ ಎರಡು ಬದಿ ಸಿಸಿ ಚರಂಡಿ, ಪೈಪ್ಲೈನ್, ರಕ್ಷಣಾ ತಡೆಗೋಡೆ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುವುದು’ ಎಂದರು.</p>.<p>‘ಪಟ್ಟಣದ ವ್ಯಾಪ್ತಿಯಲ್ಲಿ ಒಳಚರಂಡಿ ಸಮಸ್ಯೆ ಸರಿಪಡಿಸಲು ₹16.50 ಕೋಟಿ ಬಿಡುಗಡೆಯಾಗಿದ್ದು, ಆದರ ಕಾಮಗಾರಿಯು ಶೀಘ್ರವಾಗಿ ಆರಂಭಗೊಳ್ಳಲಿದೆ’ ಎಂದು ತಿಳಿಸಿದರು.</p>.<p>ಕಾವೇರಿ ನೀರಾವರಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ನಂಜುಂಡೇಗೌಡ, ಸಹಾಯಕ ಕಾರ್ಯಪಾಲಕ ನಾಗರಾಜು, ಉಪ ತಹಶೀಲ್ದಾರ್ ಸೋಮಶೇಖರಯ್ಯ, ರೈತ ಮುಖಂಡರಾದ ದೇಶಹಳ್ಳಿ ಮೋಹನ್ ಕುಮಾರ್, ನ.ಲಿ. ಕೃಷ್ಣ, ಲಕ್ಷ್ಮಣ್ ಚನ್ನಸಂದ್ರ, ರಾಮಯ್ಯ, ಮಹೇಶ್, ಅಜ್ಜಹಳ್ಳಿ ರಾಮಕೃಷ್ಣ, ಎಂ.ಬಿ.ಸಚಿನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>