ತಹಶೀಲ್ದಾರ್ ಕೆ.ಎನ್.ಲೋಕೇಶ್, ತಾ.ಪಂ.ಇಒ ರಾಮಲಿಂಗಯ್ಯ, ಪುರಸಭೆ ಮುಖ್ಯಾಧಿಕಾರಿ ಎಂ.ಎಸ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜೆ.ದೇವರಾಜು, ಎಸ್.ಪಿ.ಸುಂದರ್ ರಾಜ್, ಟಿಎಪಿಸಿಎಂಎಸ್ ಅಧ್ಯಕ್ಷ ಕೆ.ಎಸ್.ದ್ಯಾಪೇಗೌಡ, ಜಿ.ಪಂ.ಮಾಜಿ ಸದಸ್ಯರಾದ ಆರ್.ಎನ್.ವಿಶ್ವಾಸ್, ಸುಜಾತಾ ಕೆ.ಎಂ.ಪುಟ್ಟು, ಸುಷ್ಮಾ ರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ಮುಖಂಡರಾದ ದೊಡ್ಡಯ್ಯ, ಸಿ.ಮಾಧು, ಚಿಕ್ಕರಾಜು, ಪುಟ್ಟಸ್ವಾಮಿ, ಸುಂದರೇಶ್, ನಾಗೇಶ್, ಸವಿತಾ, ಎಂ.ಬಿ.ಮಲ್ಲಯ್ಯ, ಬಂಕ್ ಮಹದೇವು, ಪ್ರಮೀಳಾ, ಶಿವಮಾದೇಗೌಡ, ರೋಹಿತ್ ಇದ್ದರು.
‘ಜಾನಪದ ತರಬೇತಿ ಕೇಂದ್ರ’
ಜನಪದ ಕಲಾವಿದ ಮಳವಳ್ಳಿ ಡಾ.ಮಹದೇವಸ್ವಾಮಿ ಮಾತನಾಡಿ ಜನಪದ ಕಲೆಯನ್ನು ಉಳಿಸಿ ಬೆಳೆಸುವ ಅನಿವಾರ್ಯತೆ ಇದೆ. ಹೀಗಾಗಿ ಶಾಸಕರು ತಾಲ್ಲೂಕಿನಲ್ಲಿ ಎಲ್ಲಿಯಾದರೂ ಜಾಗ ನೀಡಿದರೆ ಜಾನಪದ ತರಬೇತಿ ಕೇಂದ್ರ ಪ್ರಾರಂಭಿಸಿ ನಶಿಸುತ್ತಿರುವ ಗ್ರಾಮೀಣ ಕಲೆಯನ್ನು ಇಂದಿನ ಯುವಪೀಳಿಗೆ ಧಾರೆ ಎರೆಯಲಾಗುವುದು ಎಂದು ಹೇಳಿದರು.