ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಯುವಕ- ಯುವತಿಯರು ತಮಟೆಯ ಸದ್ದಿಗೆ ಕುಣಿದು ಕುಪ್ಪಳಿಸಿದರು. ನಂತರ ಶ್ರೀರಾಮ ಮಂದಿರದ ಒಳಗೆ ನೂತನ ಕೆಂಚಣ್ಣ ಮತ್ತು ಕರಿಯಣ್ಣ ಹರಿಗೆಯನ್ನು ಪ್ರವೇಶ ಮಾಡಲಾಯಿತು. ಅಶೋಕನಗರದ ಎಲ್ಲ ದಾಸಪ್ಪಂದಿರು, ಗುಡ್ಡಪ್ಪಂದಿರು, ಶಂಖ, ಜಾಗಟೆ ಸಮೇತರಾಗಿ ಉತ್ಸವದಲ್ಲಿ ಭಾಗಿಯಾಗಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.