ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ನಾಗರಾಜ್ (47) ಆತ್ಮಹತ್ಯೆ ಮಾಡಿಕೊಂಡ ಕೈದಿ. ಮಂಗಳವಾರ ಬೆಳಿಗ್ಗೆ ತಾನು ತೊಟ್ಟಿದ್ದ ಪ್ಯಾಂಟ್ ದಾರದ ಸಹಾಯದಿಂದ ಜೈಲು ಕೊಠಡಿಯ ದೊಡ್ಡ ಮೊಳೆಗೆ ನೇಣು ಹಾಕಿಕೊಂಡಿದ್ದಾನೆ. ಉಸಿರುಗಟ್ಟಿ ಒದ್ದಾಡುತ್ತಿದ್ದಾಗ ಇತರ ಕೈದಿಗಳು ಗಮನಿಸಿ ತಕ್ಷಣ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಆತನನ್ನು ಕೆಳಗಿಳಿಸಿ ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.