<p><strong>ಹಲಗೂರು</strong>: ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡುವಲ್ಲಿ ಸಂವಿಧಾನದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜಾತಿ, ಧರ್ಮ, ಭಾಷೆ, ಮತ್ತು ಆಚರಣೆಗಳಲ್ಲಿ ವೈವಿಧ್ಯ ಇದ್ದರೂ ದೇಶವನ್ನು ಒಂದಾಗಿ ಕಟ್ಟುವ ಶಕ್ತಿ ನಮ್ಮ ಸಂವಿಧಾನದಲ್ಲಿದೆ ಎಂದು ಪಿಎಸ್ಐ ಲೋಕೇಶ್ ತಿಳಿಸಿದರು.</p>.<p>ಸಮೀಪದ ಕೊನ್ನಾಪುರ ಗ್ರಾಮದಲ್ಲಿ ಭಾನುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತ್ಯುತ್ಸವ ಮತ್ತು ಅಂಬೇಡ್ಕರ್ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಂಬೇಡ್ಕರ್ ರಚಿಸಿದ ಸಂವಿಧಾನವು ದೇಶದ ಸರ್ವರಿಗೂ ಹಕ್ಕು, ಅಧಿಕಾರಗಳ ಜೊತೆಗೆ ಸಮಾನ ಅವಕಾಶಗಳನ್ನು ನೀಡಿದ್ದು, ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ನಡೆಸಿ ಎಂದರು.</p>.<p>ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಾದ ಚಿರಾಗ್ ಎಸ್.ಮೂರ್ತಿ, ಡಿ.ಪೂಜಾಶ್ರೀ, ಸುಕೃತಾ, ಹೇಮಾವತಿ, ಪಲ್ಲವಿ, ಕೆ.ಎಸ್.ಮೊಹೀತ್, ಕೆ.ಜಿ.ಪ್ರೀತಮ್, ಆರ್.ಪ್ರೀತಮ್ ಗೌಡ, ಕೆ.ಆರ್.ಸುಶಾಂತ್, ಎ.ಅಮೃತ ಅವರನ್ನು ಸನ್ಮಾನಿಸಲಾಯಿತು.</p>.<p>ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್.ಆರ್. ಸಿದ್ದರಾಜು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶಿವಲಿಂಗೇಗೌಡ, ಮಂಗಳಮ್ಮ, ಗ್ರಾಮಸ್ಥರಾದ ಕೆ.ಬಿ.ಜಯಶಂಕರ್, ಕೆ.ಬಿ.ಆನಂದಕುಮಾರ್, ಕೆ.ಜಿ.ಸಿದ್ದಲಿಂಗಮೂರ್ತಿ, ಕೆ.ಟಿ.ಗಿರೀಶ್, ಕೆ.ಎಸ್.ಮನೋಜ್ ಕುಮಾರ್, ವಸಂತಕುಮಾರ, ಮಧುಸೂಧನ್, ದೇವರಾಜು, ಕೆ.ಎನ್.ಗಿರೀಶ್ ಕುಮಾರ್, ಮುದ್ದಯ್ಯ, ನಾಗಸಿದ್ದಯ್ಯ, ಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-40-1607167915</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡುವಲ್ಲಿ ಸಂವಿಧಾನದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜಾತಿ, ಧರ್ಮ, ಭಾಷೆ, ಮತ್ತು ಆಚರಣೆಗಳಲ್ಲಿ ವೈವಿಧ್ಯ ಇದ್ದರೂ ದೇಶವನ್ನು ಒಂದಾಗಿ ಕಟ್ಟುವ ಶಕ್ತಿ ನಮ್ಮ ಸಂವಿಧಾನದಲ್ಲಿದೆ ಎಂದು ಪಿಎಸ್ಐ ಲೋಕೇಶ್ ತಿಳಿಸಿದರು.</p>.<p>ಸಮೀಪದ ಕೊನ್ನಾಪುರ ಗ್ರಾಮದಲ್ಲಿ ಭಾನುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತ್ಯುತ್ಸವ ಮತ್ತು ಅಂಬೇಡ್ಕರ್ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಂಬೇಡ್ಕರ್ ರಚಿಸಿದ ಸಂವಿಧಾನವು ದೇಶದ ಸರ್ವರಿಗೂ ಹಕ್ಕು, ಅಧಿಕಾರಗಳ ಜೊತೆಗೆ ಸಮಾನ ಅವಕಾಶಗಳನ್ನು ನೀಡಿದ್ದು, ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ನಡೆಸಿ ಎಂದರು.</p>.<p>ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಾದ ಚಿರಾಗ್ ಎಸ್.ಮೂರ್ತಿ, ಡಿ.ಪೂಜಾಶ್ರೀ, ಸುಕೃತಾ, ಹೇಮಾವತಿ, ಪಲ್ಲವಿ, ಕೆ.ಎಸ್.ಮೊಹೀತ್, ಕೆ.ಜಿ.ಪ್ರೀತಮ್, ಆರ್.ಪ್ರೀತಮ್ ಗೌಡ, ಕೆ.ಆರ್.ಸುಶಾಂತ್, ಎ.ಅಮೃತ ಅವರನ್ನು ಸನ್ಮಾನಿಸಲಾಯಿತು.</p>.<p>ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್.ಆರ್. ಸಿದ್ದರಾಜು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶಿವಲಿಂಗೇಗೌಡ, ಮಂಗಳಮ್ಮ, ಗ್ರಾಮಸ್ಥರಾದ ಕೆ.ಬಿ.ಜಯಶಂಕರ್, ಕೆ.ಬಿ.ಆನಂದಕುಮಾರ್, ಕೆ.ಜಿ.ಸಿದ್ದಲಿಂಗಮೂರ್ತಿ, ಕೆ.ಟಿ.ಗಿರೀಶ್, ಕೆ.ಎಸ್.ಮನೋಜ್ ಕುಮಾರ್, ವಸಂತಕುಮಾರ, ಮಧುಸೂಧನ್, ದೇವರಾಜು, ಕೆ.ಎನ್.ಗಿರೀಶ್ ಕುಮಾರ್, ಮುದ್ದಯ್ಯ, ನಾಗಸಿದ್ದಯ್ಯ, ಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-40-1607167915</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>