‘ಅಲ್ಲಲ್ಲಿ ಕಸದ ರಾಶಿ, ಕಳೆಗಿಡಗಳಿಂದಾಗಿ ಶವಾಗಾರದತ್ತ ಕಾಲಿಡದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸದಾಗಿ ಆಸ್ಪತ್ರೆ ಕಟ್ಟಡವನ್ನು ನಿರ್ಮಾಣ ಮಾಡಿದ್ದರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಬೀದಿ ನಾಯಿಗಳು, ಬೀಡಾಡಿ ದನಗಳು ಆಸ್ಪತ್ರೆಯ ಆವರಣದಲ್ಲಿ ಆಶ್ರಯ ಪಡೆಯುತ್ತಿವೆ. ಆಸ್ಪತ್ರೆ ಸುತ್ತ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳ ರಾಶಿ ಬಿದ್ದಿವೆ. ಸ್ವಚ್ಛತೆ ಇಲ್ಲಿ ಮರೀಚಿಕೆ ಆಗಿದೆ’ ಎಂದು ಪ್ರದೀಪ್ ಕುಮಾರ್ ಬೇಸರ ವ್ಯಕ್ತಪಡಿಸಿದರು.