<p><strong>ಮಂಡ್ಯ:</strong> ‘ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ₹14,488 ಕೋಟಿಯನ್ನು ಮುಂಬರುವ ಬಜೆಟ್ನಲ್ಲಿ ಮತ್ತೆ ದುರ್ಬಳಕೆ ಮಾಡಲು ರಾಜ್ಯ ಸರ್ಕಾರ ಹೊಂಚು ಹಾಕಿದೆ. ಗ್ಯಾರಂಟಿ ಯೋಜನೆಗಳಿಗಾಗಿ ‘ದಲಿತರ ಮೀಸಲು ನಿಧಿ’ಯನ್ನು ಬಳಸಿಕೊಳ್ಳುವುದನ್ನು ಖಂಡಿಸಿ ಪ್ರತಿ ಜಿಲ್ಲೆಯಲ್ಲೂ ‘ಜನಾಂದೋಲನ’ ಹಮ್ಮಿಕೊಂಡಿದ್ದೇವೆ’ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. </p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸರ್ಕಾರದ ದಲಿತ ವಿರೋಧಿ ನೀತಿಯನ್ನು ಒಪ್ಪುವುದಿಲ್ಲ. ಸದನದ ಹೊರಗೆ ಮತ್ತು ಒಳಗೆ ಹೋರಾಟ ತೀವ್ರಗೊಳಿಸುತ್ತೇವೆ. ಜನರು ಪ್ರತಿ ತಾಲ್ಲೂಕಿನಲ್ಲೂ ಬೀದಿಗಿಳಿದು ಪ್ರತಿಭಟಿಸಲಿದ್ದಾರೆ’ ಎಂದರು.</p>.<p>‘2023 ಮತ್ತು 2024ರಲ್ಲಿ ‘ಎಸ್ಸಿಎಸ್ಪಿ ಮತ್ತು ಟಿಎಸ್ಪಿ’ಯಿಂದ ₹14,282 ಕೋಟಿಯನ್ನು ಗ್ಯಾರಂಟಿ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಅಲ್ಪಸಂಖ್ಯಾತರಿಗೆಂದೇ ಬಜೆಟ್ನಲ್ಲಿ ಪ್ರತ್ಯೇಕವಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಆದರೆ, ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಆ ಹಣ ಮುಟ್ಟುವುದಿಲ್ಲ. ದಲಿತರ ಕಾಲೊನಿಗಳಿಗೆ, ಆದಿವಾಸಿ ಹಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಿಲ್ಲ. ಈ ಸರ್ಕಾರ ದಲಿತ ದ್ರೋಹಿ ಅಲ್ಲದೆ ಮತ್ತೇನು? ಎಂದು ಕೇಳಿದರು.</p>.<p>‘ಅಂಬೇಡ್ಕರ್, ಆದಿಜಾಂಬವ, ತಾಂಡಾ, ಬೋವಿ, ವಾಲ್ಮೀಕಿ ಹಾಗೂ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳು ಸರ್ಕಾರದ ಹಣಕಾಸಿನ ನೆರವಿಲ್ಲದೆ ಸೊರಗಿವೆ. ಸಾರಿಗೆ–ಸಂಬಳಕ್ಕೂ ಕಾಸಿಲ್ಲದೆ ದಿವಾಳಿ ಸ್ಥಿತಿಯಲ್ಲಿವೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ₹14,488 ಕೋಟಿಯನ್ನು ಮುಂಬರುವ ಬಜೆಟ್ನಲ್ಲಿ ಮತ್ತೆ ದುರ್ಬಳಕೆ ಮಾಡಲು ರಾಜ್ಯ ಸರ್ಕಾರ ಹೊಂಚು ಹಾಕಿದೆ. ಗ್ಯಾರಂಟಿ ಯೋಜನೆಗಳಿಗಾಗಿ ‘ದಲಿತರ ಮೀಸಲು ನಿಧಿ’ಯನ್ನು ಬಳಸಿಕೊಳ್ಳುವುದನ್ನು ಖಂಡಿಸಿ ಪ್ರತಿ ಜಿಲ್ಲೆಯಲ್ಲೂ ‘ಜನಾಂದೋಲನ’ ಹಮ್ಮಿಕೊಂಡಿದ್ದೇವೆ’ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. </p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸರ್ಕಾರದ ದಲಿತ ವಿರೋಧಿ ನೀತಿಯನ್ನು ಒಪ್ಪುವುದಿಲ್ಲ. ಸದನದ ಹೊರಗೆ ಮತ್ತು ಒಳಗೆ ಹೋರಾಟ ತೀವ್ರಗೊಳಿಸುತ್ತೇವೆ. ಜನರು ಪ್ರತಿ ತಾಲ್ಲೂಕಿನಲ್ಲೂ ಬೀದಿಗಿಳಿದು ಪ್ರತಿಭಟಿಸಲಿದ್ದಾರೆ’ ಎಂದರು.</p>.<p>‘2023 ಮತ್ತು 2024ರಲ್ಲಿ ‘ಎಸ್ಸಿಎಸ್ಪಿ ಮತ್ತು ಟಿಎಸ್ಪಿ’ಯಿಂದ ₹14,282 ಕೋಟಿಯನ್ನು ಗ್ಯಾರಂಟಿ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಅಲ್ಪಸಂಖ್ಯಾತರಿಗೆಂದೇ ಬಜೆಟ್ನಲ್ಲಿ ಪ್ರತ್ಯೇಕವಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಆದರೆ, ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಆ ಹಣ ಮುಟ್ಟುವುದಿಲ್ಲ. ದಲಿತರ ಕಾಲೊನಿಗಳಿಗೆ, ಆದಿವಾಸಿ ಹಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಿಲ್ಲ. ಈ ಸರ್ಕಾರ ದಲಿತ ದ್ರೋಹಿ ಅಲ್ಲದೆ ಮತ್ತೇನು? ಎಂದು ಕೇಳಿದರು.</p>.<p>‘ಅಂಬೇಡ್ಕರ್, ಆದಿಜಾಂಬವ, ತಾಂಡಾ, ಬೋವಿ, ವಾಲ್ಮೀಕಿ ಹಾಗೂ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳು ಸರ್ಕಾರದ ಹಣಕಾಸಿನ ನೆರವಿಲ್ಲದೆ ಸೊರಗಿವೆ. ಸಾರಿಗೆ–ಸಂಬಳಕ್ಕೂ ಕಾಸಿಲ್ಲದೆ ದಿವಾಳಿ ಸ್ಥಿತಿಯಲ್ಲಿವೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>