<p><strong>ಕೆ.ಆರ್.ಪೇಟೆ:</strong> ‘ರಾಜ್ಯ ಸರ್ಕಾರ ಕೃಷಿ ಪಂಪಸೆಟ್ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಮುಂದಾಗಿರುವುದನ್ನು ಕೈಬಿಡಬೇಕು. ಅಕ್ರಮ-ಸಕ್ರಮ ಯೋಜನೆಯಡಿ ವಿದ್ಯುತ್ ಕೃಷಿ ಪಂಪ್ಸೆಟ್ಗಳನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು ಬಂದ್ ಮಾಡಬಾರದು’ ಎಂದು ಶಾಸಕ ಎಚ್.ಟಿ.ಮಂಜು ಒತ್ತಾಯಿಸಿದರು.</p>.<p>ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮಡುವಿನಕೋಡಿ ಗ್ರಾಮದಲ್ಲಿ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. </p>.<p>‘ಉಚಿತ ವಿದ್ಯುತ್ ಬಂದ್ ಮಾಡಿದರೆ ರೈತರು ಕೊಳವೆ ಬಾವಿ ಆಶ್ರಿತ ನೀರಾವರಿ ಯೋಜನೆ ಬಂದ್ ಆಗಲಿದೆ. ಅದರಿಂದ ಆಹಾರ ಧಾನ್ಯ ಉತ್ಪಾದನೆ ಕುಂಠಿತಗೊಂಡು ಆಹಾರ ಸಮಸ್ಯೆ ಹೆಚ್ಚಾಗಲಿದೆ. ಆಹಾರ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗಲಿದೆ’ ಎಂದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯನ್ನು ಹೋಗಲಾಡಿಸಿದ ಕೀರ್ತಿ ಜೆಡಿಎಸ್ ಪಕ್ಷಕ್ಕೆ ಸಲ್ಲಬೇಕು’ ಎಂದರು.</p>.<p>ಸೆಸ್ಕ್ ಕಾರ್ಯ ನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ, ಕಿರಿಯ ಎಂಜಿನಿಯರ್ ಫಾಜಿಲ್, ಗ್ರಾ.ಪಂ.ಅಧ್ಯಕ್ಷೆ ಪ್ರೀತಿ ಭೈರನಾಯಕ್, ಉಪಾಧ್ಯಕ್ಷ ನಾಗರಾಜು, ಪಿಡಿಒ ಮಹೇಶ್, ಜೆಡಿಎಸ್ ಪಕ್ಷದ ಮುಖಂಡರು ಗ್ರಾ.ಪಂ.ಸದಸ್ಯರು ಮತ್ತು ಡೇರಿ ನಿರ್ದೇಶಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ‘ರಾಜ್ಯ ಸರ್ಕಾರ ಕೃಷಿ ಪಂಪಸೆಟ್ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಮುಂದಾಗಿರುವುದನ್ನು ಕೈಬಿಡಬೇಕು. ಅಕ್ರಮ-ಸಕ್ರಮ ಯೋಜನೆಯಡಿ ವಿದ್ಯುತ್ ಕೃಷಿ ಪಂಪ್ಸೆಟ್ಗಳನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು ಬಂದ್ ಮಾಡಬಾರದು’ ಎಂದು ಶಾಸಕ ಎಚ್.ಟಿ.ಮಂಜು ಒತ್ತಾಯಿಸಿದರು.</p>.<p>ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮಡುವಿನಕೋಡಿ ಗ್ರಾಮದಲ್ಲಿ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. </p>.<p>‘ಉಚಿತ ವಿದ್ಯುತ್ ಬಂದ್ ಮಾಡಿದರೆ ರೈತರು ಕೊಳವೆ ಬಾವಿ ಆಶ್ರಿತ ನೀರಾವರಿ ಯೋಜನೆ ಬಂದ್ ಆಗಲಿದೆ. ಅದರಿಂದ ಆಹಾರ ಧಾನ್ಯ ಉತ್ಪಾದನೆ ಕುಂಠಿತಗೊಂಡು ಆಹಾರ ಸಮಸ್ಯೆ ಹೆಚ್ಚಾಗಲಿದೆ. ಆಹಾರ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗಲಿದೆ’ ಎಂದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯನ್ನು ಹೋಗಲಾಡಿಸಿದ ಕೀರ್ತಿ ಜೆಡಿಎಸ್ ಪಕ್ಷಕ್ಕೆ ಸಲ್ಲಬೇಕು’ ಎಂದರು.</p>.<p>ಸೆಸ್ಕ್ ಕಾರ್ಯ ನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ, ಕಿರಿಯ ಎಂಜಿನಿಯರ್ ಫಾಜಿಲ್, ಗ್ರಾ.ಪಂ.ಅಧ್ಯಕ್ಷೆ ಪ್ರೀತಿ ಭೈರನಾಯಕ್, ಉಪಾಧ್ಯಕ್ಷ ನಾಗರಾಜು, ಪಿಡಿಒ ಮಹೇಶ್, ಜೆಡಿಎಸ್ ಪಕ್ಷದ ಮುಖಂಡರು ಗ್ರಾ.ಪಂ.ಸದಸ್ಯರು ಮತ್ತು ಡೇರಿ ನಿರ್ದೇಶಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>