ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ಪೇಟೆ| ತೋಟದ ಮನೆಗೆ ನುಗ್ಗಿದ ಚಿರತೆ

Last Updated 9 ಫೆಬ್ರುವರಿ 2023, 8:31 IST
ಅಕ್ಷರ ಗಾತ್ರ

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ‌ ತೋಟದ ಮನೆಯೊಂದಕ್ಕೆ ಬುಧವಾರ ರಾತ್ರಿ ಚಿರತೆ ನುಗ್ಗಿದೆ.

ಗ್ರಾಮದ ರೈತ ನಿಂಗೇಗೌಡರು ಜಾನುವಾರು ಕಟ್ಟುವ ಉದ್ದೇಶದಿಂದ ತೋಟದ ಮನೆ ಮಾಡಿಕೊಂಡಿದ್ದರು.

ಗುರುವಾರ ಬೆಳಿಗ್ಗೆ ಮನೆಗೆ ಬಂದ ನಿಂಗೇಗೌಡರು ಮನೆಯೊಳಗೆ ಶಬ್ದವಾಗುತ್ತಿರುವುದನ್ನು ಕೇಳಿಸಿಕೊಂಡಿದ್ದಾರೆ. ಕಿಟಕಿ ತೆರದು ನೋಡಿದಾಗ ಚಿರತೆ ಇರುವುದನ್ನು ಗಮನಿಸಿದ್ದಾರೆ.

ಗ್ರಾಮಸ್ಥರ ನೆರವು ಪಡೆದು ಅವರು ಮನೆಯ ಎರಡೂ ಬಾಗಿಲು ಮುಚ್ಚಿಸಿ ಚಿರತೆಯನ್ನು ಕೂಡಿಹಾಕಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳ ಬರುವಿಕೆಗಾಗಿ ಗ್ರಾಮಸ್ಥರು ಕಾಯುತ್ತಿದ್ದಾರೆ.

ಚಿರತೆ ಒಳಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT