<p>ಕೆ.ಆರ್.ಪೇಟೆ: ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.</p>.<p>ಪಟ್ಟಣದ ಪ್ರವಾಸಿಮಂದಿರ ಆವರಣದಿಂದ ಹೊರಟ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹೊತ್ತ ಮೆರವಣಿಗೆ ಮುಖ್ಯರಸ್ತೆಯ ಮೂಲಕ ಹಾದು ಕೆ.ಪಿ.ಎಸ್ ಶಾಲೆಯ ಆವರಣದ ಸಮಾರಂಭದ ವೇದಿಕೆಗೆ ಆಗಮಿಸಿತು.</p>.<p>ಮೆರವಣಿಗೆಯಲ್ಲಿ ತಾಲ್ಲೂಕಿನ ವಿವಿದೆಡೆಯಿಂದ ಆಗಮಿಸಿದ್ದ ವಿವಿಧ ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಅಂಬೇಡ್ಕರ್ ಅವರಿಗೆ ಜೈಕಾರ ಹಾಕಿದರಲ್ಲದೆ ತಮಟೆಯ ನಾದಕ್ಕೆ ಹೆಜ್ಜೆಹಾಕಿದರು. ಶಾಸಕ ಎಚ್.ಟಿ.ಮಂಜು ಅವರು ತಮಟೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮ ಹೆಚ್ಚಿಸಿದರು.</p>.<p>ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಎಚ್.ಟಿ.ಮಂಜು ಮಾತನಾಡಿ, ದೇಶಕ್ಕೆ ಸಂವಿಧಾನ ರಚಿಸಿ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನೊದಗಿಸಿದ ಶ್ರೇಷ್ಠರಾಗಿದ್ದು, ಶೋಷಿತ ಸಮುದಾಯದ ಕಣ್ಮಣಿಯಾಗಿದ್ದಾರೆ’ ಎಂದರು.</p>.<p>ಉಪನ್ಯಾಸಕ ಕರುಣಾನಿಧಿ ಅವರು ‘ಅಂಬೇಡ್ಕರರ ಬದುಕು ಮತ್ತು ಹೋರಾಟ’ ಕುರಿತು ಪ್ರದಾನ ಭಾಷಣ ಮಾಡಿದರು. ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್ ಮಾತನಾಡಿದರು.</p>.<p>ಪ್ರಮುಖರಾದ ಆರ್ಟಿಒ ಮಲ್ಲಿಕಾರ್ಜುನ್, ಡಿ.ಪ್ರೇಮ್ ಕುಮಾರ್, ರಾಜಯ್ಯ, ಬಸ್ತಿರಂಗಪ್ಪ, ಕೃಷ್ಣಮೂರ್ತಿ, ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು. ಶ್ರೇಷ್ಠ ಸಾಧಕರನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-40-835104754</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪೇಟೆ: ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.</p>.<p>ಪಟ್ಟಣದ ಪ್ರವಾಸಿಮಂದಿರ ಆವರಣದಿಂದ ಹೊರಟ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹೊತ್ತ ಮೆರವಣಿಗೆ ಮುಖ್ಯರಸ್ತೆಯ ಮೂಲಕ ಹಾದು ಕೆ.ಪಿ.ಎಸ್ ಶಾಲೆಯ ಆವರಣದ ಸಮಾರಂಭದ ವೇದಿಕೆಗೆ ಆಗಮಿಸಿತು.</p>.<p>ಮೆರವಣಿಗೆಯಲ್ಲಿ ತಾಲ್ಲೂಕಿನ ವಿವಿದೆಡೆಯಿಂದ ಆಗಮಿಸಿದ್ದ ವಿವಿಧ ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಅಂಬೇಡ್ಕರ್ ಅವರಿಗೆ ಜೈಕಾರ ಹಾಕಿದರಲ್ಲದೆ ತಮಟೆಯ ನಾದಕ್ಕೆ ಹೆಜ್ಜೆಹಾಕಿದರು. ಶಾಸಕ ಎಚ್.ಟಿ.ಮಂಜು ಅವರು ತಮಟೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮ ಹೆಚ್ಚಿಸಿದರು.</p>.<p>ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಎಚ್.ಟಿ.ಮಂಜು ಮಾತನಾಡಿ, ದೇಶಕ್ಕೆ ಸಂವಿಧಾನ ರಚಿಸಿ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನೊದಗಿಸಿದ ಶ್ರೇಷ್ಠರಾಗಿದ್ದು, ಶೋಷಿತ ಸಮುದಾಯದ ಕಣ್ಮಣಿಯಾಗಿದ್ದಾರೆ’ ಎಂದರು.</p>.<p>ಉಪನ್ಯಾಸಕ ಕರುಣಾನಿಧಿ ಅವರು ‘ಅಂಬೇಡ್ಕರರ ಬದುಕು ಮತ್ತು ಹೋರಾಟ’ ಕುರಿತು ಪ್ರದಾನ ಭಾಷಣ ಮಾಡಿದರು. ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್ ಮಾತನಾಡಿದರು.</p>.<p>ಪ್ರಮುಖರಾದ ಆರ್ಟಿಒ ಮಲ್ಲಿಕಾರ್ಜುನ್, ಡಿ.ಪ್ರೇಮ್ ಕುಮಾರ್, ರಾಜಯ್ಯ, ಬಸ್ತಿರಂಗಪ್ಪ, ಕೃಷ್ಣಮೂರ್ತಿ, ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು. ಶ್ರೇಷ್ಠ ಸಾಧಕರನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-40-835104754</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>