<p><strong>ಕೆ.ಆರ್.ಪೇಟೆ:</strong> ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು 2.70 ಲಕ್ಷ ಜನಸಂಖ್ಯೆ ಹೊಂದಿದ್ದು ದೊಡ್ಡ ತಾಲ್ಲೂಕು ಎನಿಸಿದೆ. ಆದರೆ, ಮೂಲಸೌಕರ್ಯ ಮತ್ತು ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ ಎಂಬ ಆರೋಪ ಇಲ್ಲಿನ ಜನರದ್ದು. </p>.<p>ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 35 ಸಾವಿರಕ್ಕೂ ಅಧಿಕ ಜನ ವಾಸವಿದ್ದರೂ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ಮಾತ್ರ ಹಿಂದೆ ಬಿದ್ದಿದ್ದು, ದೊಡ್ಡ ಹಳ್ಳಿಯಂತೆಯೇ ಕಾಣುತ್ತಿರುವುದು ಮಾತ್ರ ವಿಪರ್ಯಾಸ. </p>.<p>ಪಟ್ಟಣದಲ್ಲಿರುವ ಬಹುತೇಕ ಬಡಾವಣೆಗಳ ರಸ್ತೆಗಳು ಕಿರಿದಾಗಿರುವುದು ಮಾತ್ರವಲ್ಲ ಡಾಂಬರು ಇಲ್ಲದೆ ಹಳ್ಳಿಯ ರಸ್ತೆಗಳಿಗಿಂತಲೂ ಕಡೆಯಾಗಿವೆ. ರಸ್ತೆಗಳು ಹೊಂಡ– ಗುಂಡಿಗಳಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. </p>.<p>ಒಳಚರಂಡಿ ವ್ಯವಸ್ಥೆ ಹದಗೆಟ್ಟಿದ್ದು, ಮ್ಯಾನ್ ಹೋಲ್ಗಳು ಬಾಯಿ ತೆರೆದಿವೆ. ಚರಂಡಿಯಲ್ಲಿ ಹೂಳು ತುಂಬಿಕೊಂಡ ಪರಿಣಾಮ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿವೆ. ಕುಡಿಯುವ ನೀರಿನ ಪೈಪ್ಗಳು ಒಡೆದು ನೀರು ರಸ್ತೆಯಲೆಲ್ಲಾ ಹರಿದು ಜನರ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿದೆ. </p>.<p><strong>ಉದ್ಯಾನಗಳ ಕೊರತೆ: </strong>ಇಡೀ ಪಟ್ಟಣಕ್ಕೆ ಹೇಳಿಕೊಳ್ಳುವಂತಹ ಒಂದೇ ಒಂದು ಉದ್ಯಾನ ಇಲ್ಲ. ವಿಶ್ರಮಿಸಲು ಜಾಗವಿಲ್ಲ. ಮುಂಜಾನೆ, ಸಂಜೆ ವಾಕ್ ಮಾಡಲು ಹೆದ್ದಾರಿ, ಶಾಲಾ– ಕಾಲೇಜು ಮೈದಾನವನ್ನೇ ನಾಗರಿಕರು ಅವಲಂಬಿಸಿದ್ದಾರೆ.</p>.<p>ಪಟ್ಟಣದಲ್ಲಿ ಹಾದುಹೋಗುವ ಮೈಸೂರು– ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿಯೇ ಎಪಿಎಂಸಿ ಮಾರುಕಟ್ಟೆ, ಶಾಲಾ ಕಾಲೇಜುಗಳು, ಆಸ್ಪತ್ರೆ, ಬ್ಯಾಂಕ್, ನ್ಯಾಯಾಲಯ ಸಂಕೀರ್ಣಗಳು ಇದ್ದು ಈ ರಸ್ತೆ ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ.</p>.<p><strong>ರಸ್ತೆ ದಾಟುವುದೇ ಕಷ್ಟ: </strong>ಗ್ರಾಮಭಾರತಿ ಶಾಲೆ ವೃತ್ತದಿಂದ ಪ್ರವಾಸಿಮಂದಿರ ವೃತ್ತದವರೆವಿಗೆ ಪಾದಚಾರಿಗಳು ಮತ್ತು ಬೈಕ್ ಸವಾರರು ಸಂಚರಿಸಲು ಕಷ್ಟವಾಗಿದೆ. ಆ ಬದಿಯಿಂದ ಈ ಬದಿಗೆ ರಸ್ತೆ ದಾಟಲು ಹರಸಾಹಸ ಪಡಬೇಕಿದೆ. ಚನ್ನರಾಯಪಟ್ಟಣ - ಮೈಸೂರು ರಾಜ್ಯ ಹೆದ್ದಾರಿಯನ್ನು ಮನ್ಮುಲ್ ಹಾಲು ಸಂಗ್ರಹಣಾ ಕೇಂದ್ರದಿಂದ ಟೌನ್ ಕ್ಲಬ್ ವೃತ್ತ ಬಳಸಿ ಪುರ ಗೇಟ್ವರೆವಿಗೆ ಚತುಷ್ಪಥ ರಸ್ತೆ ಮಾಡಬೇಕು ಎಂಬ ಸಾರ್ವಜನಿಕರ ಆಗ್ರಹ ಅರಣ್ಯರೋದನವಾಗಿದೆ.</p>.<p>ಪಟ್ಟಣದ ಪ್ರವಾಸಿಮಂದಿರ ವೃತ್ತದಿಂದ ದುರ್ಗಾಭವನ್ ವೃತ್ತದವರೆವಿಗೆ ಮುಖ್ಯ ರಸ್ತೆ, ಹೊಸ ಮತ್ತು ಹಳೇ ಕಿಕ್ಕೇರಿ ರಸ್ತೆಯಲ್ಲಿ ಫುಟ್ಪಾತ್ ನಿರ್ಮಾಣವಾಗಬೇಕು. ಬೀದಿ ಬದಿಯ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ನಿಗದಿಯಾಗಬೇಕೆಂದು ಪುರಸಭಾ ಸದಸ್ಯ ಎಚ್.ಆರ್. ಲೋಕೇಶ್ ಒತ್ತಾಯಿಸುತ್ತಾರೆ.</p>.<p>ಮಳೆ ಬಂದರೆ ಕೆರೆಯಂತಾಗುವ ಬಸ್ ನಿಲ್ದಾಣ ನಗರದ ಒಳರಸ್ತೆಗಳಲ್ಲಿ ಗುಂಡಿಗಳ ಕಾರುಬಾರು ಒಳಚರಂಡಿ ಅವ್ಯವಸ್ಥೆಯಿಂದ ದುರ್ನಾತ </p>.<p><strong>ರಸ್ತೆಗಳಿಗೆ ನಾಮಫಕಗಳೇ ಇಲ್ಲ! </strong></p><p>‘ಪಟ್ಟಣದಲ್ಲಿ ಬಡಾವಣೆಯ ರಸ್ತೆಗಳನ್ನು ಗುರುತಿಸಲು ಸರಿಯಾಗಿ ನಾಮಫಲಕಗಳೇ ಇಲ್ಲ. ಅಡ್ಡರಸ್ತೆ ಸಂಖ್ಯೆ ನಮೂದಿಸುವ ಬೋರ್ಡ್ಗಳಿಲ್ಲ ಕೊನೆಗೆ ಮನೆಗಳಿಗೆ ನಂಬರ್ ಕೊಡುವ ಕೆಲಸವನ್ನೂ ಪುರಸಭೆ ಮಾಡಿಲ್ಲ. ಹಾಗಾಗಿ ಹೊರಗಡೆಯಿಂದ ಬಂದವರಿಗೆ ಮನೆ ಹುಡುಕುವುದೇ ದೊಡ್ಡ ಸಮಸ್ಯೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪುರಸಭೆಯವರು ಗಮನಕ್ಕೆ ತೆಗೆದುಕೊಂಡಿಲ್ಲ. ಜನ ಹಿಡಿ ಶಾಪಹಾಕಿದರೂ ಎಚ್ಚೆತ್ತಂತೆ ಕಾಣುತ್ತಿಲ್ಲ’ ಎಂದು ನಯನಜ ಕ್ಷತ್ರಿಯ ಸಮಾಜದ ಅಧ್ಯಕ್ಷ ಕೆ.ಎಸ್. ಶಿವಪ್ಪ ದೂರಿದ್ದಾರೆ.</p>.<p><strong>‘ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಕೊರತೆ’</strong></p><p> ‘ಪಟ್ಟಣದ ಸಾರಿಗೆ ಬಸ್ ನಿಲ್ದಾಣ ದೊಡ್ಡ ಮಳೆ ಬಂದರೆ ಕೆರೆಯಾಗುತಿದ್ದು ಇದುವರೆಗೆ ಪರಿಹಾರ ಸಿಕ್ಕಿಲ್ಲ. ತಾಲ್ಲೂಕು ಕ್ರೀಡಾಂಗಣದ ಹೊರಾಂಗಣವನ್ನು ಹಚ್ಚಹಸಿರುಗೊಳಿಸುವ ಪ್ರಯತ್ನ ನಡೆದಿಲ್ಲ. ಜನಪ್ರತಿನಿಧಿಗಳಿಗೆ ರಾಜಕೀಯ ಇಚ್ಛಾಶಕ್ತಿ ಇಲ್ಲದಿರುವುದೇ ಕಾರಣ’ ಎಂದು ಪಟ್ಟಣದ ನಿವಾಸಿ ರೈತಸಂಘದ ಮುಖಂಡ ಮರುವನಹಳ್ಳಿ ಶಂಕರ್ ಆರೋಪಿಸಿದ್ದಾರೆ. </p>.<p><strong>₹25 ಕೋಟಿ ಅನುದಾನಕ್ಕೆ ಮನವಿ’</strong></p><p> ಪಟ್ಟಣದ ಸಮಗ್ರ ಅಭಿವೃದ್ಧಿಗೆ ಅನುದಾನದ ಕೊರತೆಯಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಹೇಳುತ್ತಾರೆ. ಪಟ್ಟಣದ ಬಡಾವಣೆಗಳ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ ₹25 ಕೋಟಿ ಅನುದಾನ ಒದಗಿಸುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದು ಸ್ಪಂದಿಸುವ ಭರವಸೆ ಇದೆ. ಅನುದಾನ ಬಂದರೆ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇನೆ’ ಎಂದು ಶಾಸಕ ಎಚ್.ಟಿ. ಮಂಜು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು 2.70 ಲಕ್ಷ ಜನಸಂಖ್ಯೆ ಹೊಂದಿದ್ದು ದೊಡ್ಡ ತಾಲ್ಲೂಕು ಎನಿಸಿದೆ. ಆದರೆ, ಮೂಲಸೌಕರ್ಯ ಮತ್ತು ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ ಎಂಬ ಆರೋಪ ಇಲ್ಲಿನ ಜನರದ್ದು. </p>.<p>ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 35 ಸಾವಿರಕ್ಕೂ ಅಧಿಕ ಜನ ವಾಸವಿದ್ದರೂ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ಮಾತ್ರ ಹಿಂದೆ ಬಿದ್ದಿದ್ದು, ದೊಡ್ಡ ಹಳ್ಳಿಯಂತೆಯೇ ಕಾಣುತ್ತಿರುವುದು ಮಾತ್ರ ವಿಪರ್ಯಾಸ. </p>.<p>ಪಟ್ಟಣದಲ್ಲಿರುವ ಬಹುತೇಕ ಬಡಾವಣೆಗಳ ರಸ್ತೆಗಳು ಕಿರಿದಾಗಿರುವುದು ಮಾತ್ರವಲ್ಲ ಡಾಂಬರು ಇಲ್ಲದೆ ಹಳ್ಳಿಯ ರಸ್ತೆಗಳಿಗಿಂತಲೂ ಕಡೆಯಾಗಿವೆ. ರಸ್ತೆಗಳು ಹೊಂಡ– ಗುಂಡಿಗಳಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. </p>.<p>ಒಳಚರಂಡಿ ವ್ಯವಸ್ಥೆ ಹದಗೆಟ್ಟಿದ್ದು, ಮ್ಯಾನ್ ಹೋಲ್ಗಳು ಬಾಯಿ ತೆರೆದಿವೆ. ಚರಂಡಿಯಲ್ಲಿ ಹೂಳು ತುಂಬಿಕೊಂಡ ಪರಿಣಾಮ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿವೆ. ಕುಡಿಯುವ ನೀರಿನ ಪೈಪ್ಗಳು ಒಡೆದು ನೀರು ರಸ್ತೆಯಲೆಲ್ಲಾ ಹರಿದು ಜನರ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿದೆ. </p>.<p><strong>ಉದ್ಯಾನಗಳ ಕೊರತೆ: </strong>ಇಡೀ ಪಟ್ಟಣಕ್ಕೆ ಹೇಳಿಕೊಳ್ಳುವಂತಹ ಒಂದೇ ಒಂದು ಉದ್ಯಾನ ಇಲ್ಲ. ವಿಶ್ರಮಿಸಲು ಜಾಗವಿಲ್ಲ. ಮುಂಜಾನೆ, ಸಂಜೆ ವಾಕ್ ಮಾಡಲು ಹೆದ್ದಾರಿ, ಶಾಲಾ– ಕಾಲೇಜು ಮೈದಾನವನ್ನೇ ನಾಗರಿಕರು ಅವಲಂಬಿಸಿದ್ದಾರೆ.</p>.<p>ಪಟ್ಟಣದಲ್ಲಿ ಹಾದುಹೋಗುವ ಮೈಸೂರು– ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿಯೇ ಎಪಿಎಂಸಿ ಮಾರುಕಟ್ಟೆ, ಶಾಲಾ ಕಾಲೇಜುಗಳು, ಆಸ್ಪತ್ರೆ, ಬ್ಯಾಂಕ್, ನ್ಯಾಯಾಲಯ ಸಂಕೀರ್ಣಗಳು ಇದ್ದು ಈ ರಸ್ತೆ ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ.</p>.<p><strong>ರಸ್ತೆ ದಾಟುವುದೇ ಕಷ್ಟ: </strong>ಗ್ರಾಮಭಾರತಿ ಶಾಲೆ ವೃತ್ತದಿಂದ ಪ್ರವಾಸಿಮಂದಿರ ವೃತ್ತದವರೆವಿಗೆ ಪಾದಚಾರಿಗಳು ಮತ್ತು ಬೈಕ್ ಸವಾರರು ಸಂಚರಿಸಲು ಕಷ್ಟವಾಗಿದೆ. ಆ ಬದಿಯಿಂದ ಈ ಬದಿಗೆ ರಸ್ತೆ ದಾಟಲು ಹರಸಾಹಸ ಪಡಬೇಕಿದೆ. ಚನ್ನರಾಯಪಟ್ಟಣ - ಮೈಸೂರು ರಾಜ್ಯ ಹೆದ್ದಾರಿಯನ್ನು ಮನ್ಮುಲ್ ಹಾಲು ಸಂಗ್ರಹಣಾ ಕೇಂದ್ರದಿಂದ ಟೌನ್ ಕ್ಲಬ್ ವೃತ್ತ ಬಳಸಿ ಪುರ ಗೇಟ್ವರೆವಿಗೆ ಚತುಷ್ಪಥ ರಸ್ತೆ ಮಾಡಬೇಕು ಎಂಬ ಸಾರ್ವಜನಿಕರ ಆಗ್ರಹ ಅರಣ್ಯರೋದನವಾಗಿದೆ.</p>.<p>ಪಟ್ಟಣದ ಪ್ರವಾಸಿಮಂದಿರ ವೃತ್ತದಿಂದ ದುರ್ಗಾಭವನ್ ವೃತ್ತದವರೆವಿಗೆ ಮುಖ್ಯ ರಸ್ತೆ, ಹೊಸ ಮತ್ತು ಹಳೇ ಕಿಕ್ಕೇರಿ ರಸ್ತೆಯಲ್ಲಿ ಫುಟ್ಪಾತ್ ನಿರ್ಮಾಣವಾಗಬೇಕು. ಬೀದಿ ಬದಿಯ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ನಿಗದಿಯಾಗಬೇಕೆಂದು ಪುರಸಭಾ ಸದಸ್ಯ ಎಚ್.ಆರ್. ಲೋಕೇಶ್ ಒತ್ತಾಯಿಸುತ್ತಾರೆ.</p>.<p>ಮಳೆ ಬಂದರೆ ಕೆರೆಯಂತಾಗುವ ಬಸ್ ನಿಲ್ದಾಣ ನಗರದ ಒಳರಸ್ತೆಗಳಲ್ಲಿ ಗುಂಡಿಗಳ ಕಾರುಬಾರು ಒಳಚರಂಡಿ ಅವ್ಯವಸ್ಥೆಯಿಂದ ದುರ್ನಾತ </p>.<p><strong>ರಸ್ತೆಗಳಿಗೆ ನಾಮಫಕಗಳೇ ಇಲ್ಲ! </strong></p><p>‘ಪಟ್ಟಣದಲ್ಲಿ ಬಡಾವಣೆಯ ರಸ್ತೆಗಳನ್ನು ಗುರುತಿಸಲು ಸರಿಯಾಗಿ ನಾಮಫಲಕಗಳೇ ಇಲ್ಲ. ಅಡ್ಡರಸ್ತೆ ಸಂಖ್ಯೆ ನಮೂದಿಸುವ ಬೋರ್ಡ್ಗಳಿಲ್ಲ ಕೊನೆಗೆ ಮನೆಗಳಿಗೆ ನಂಬರ್ ಕೊಡುವ ಕೆಲಸವನ್ನೂ ಪುರಸಭೆ ಮಾಡಿಲ್ಲ. ಹಾಗಾಗಿ ಹೊರಗಡೆಯಿಂದ ಬಂದವರಿಗೆ ಮನೆ ಹುಡುಕುವುದೇ ದೊಡ್ಡ ಸಮಸ್ಯೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪುರಸಭೆಯವರು ಗಮನಕ್ಕೆ ತೆಗೆದುಕೊಂಡಿಲ್ಲ. ಜನ ಹಿಡಿ ಶಾಪಹಾಕಿದರೂ ಎಚ್ಚೆತ್ತಂತೆ ಕಾಣುತ್ತಿಲ್ಲ’ ಎಂದು ನಯನಜ ಕ್ಷತ್ರಿಯ ಸಮಾಜದ ಅಧ್ಯಕ್ಷ ಕೆ.ಎಸ್. ಶಿವಪ್ಪ ದೂರಿದ್ದಾರೆ.</p>.<p><strong>‘ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಕೊರತೆ’</strong></p><p> ‘ಪಟ್ಟಣದ ಸಾರಿಗೆ ಬಸ್ ನಿಲ್ದಾಣ ದೊಡ್ಡ ಮಳೆ ಬಂದರೆ ಕೆರೆಯಾಗುತಿದ್ದು ಇದುವರೆಗೆ ಪರಿಹಾರ ಸಿಕ್ಕಿಲ್ಲ. ತಾಲ್ಲೂಕು ಕ್ರೀಡಾಂಗಣದ ಹೊರಾಂಗಣವನ್ನು ಹಚ್ಚಹಸಿರುಗೊಳಿಸುವ ಪ್ರಯತ್ನ ನಡೆದಿಲ್ಲ. ಜನಪ್ರತಿನಿಧಿಗಳಿಗೆ ರಾಜಕೀಯ ಇಚ್ಛಾಶಕ್ತಿ ಇಲ್ಲದಿರುವುದೇ ಕಾರಣ’ ಎಂದು ಪಟ್ಟಣದ ನಿವಾಸಿ ರೈತಸಂಘದ ಮುಖಂಡ ಮರುವನಹಳ್ಳಿ ಶಂಕರ್ ಆರೋಪಿಸಿದ್ದಾರೆ. </p>.<p><strong>₹25 ಕೋಟಿ ಅನುದಾನಕ್ಕೆ ಮನವಿ’</strong></p><p> ಪಟ್ಟಣದ ಸಮಗ್ರ ಅಭಿವೃದ್ಧಿಗೆ ಅನುದಾನದ ಕೊರತೆಯಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಹೇಳುತ್ತಾರೆ. ಪಟ್ಟಣದ ಬಡಾವಣೆಗಳ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ ₹25 ಕೋಟಿ ಅನುದಾನ ಒದಗಿಸುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದು ಸ್ಪಂದಿಸುವ ಭರವಸೆ ಇದೆ. ಅನುದಾನ ಬಂದರೆ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇನೆ’ ಎಂದು ಶಾಸಕ ಎಚ್.ಟಿ. ಮಂಜು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>