ವಕೀಲನಾಗಿ 30 ವರ್ಷ ಸೇವೆ ಸಲ್ಲಿಸಿದ್ದೇನೆ. ಬಡಜನರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ್ದೇನೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗಿ ಜನಪರ ಕೆಲಸ ಮಾಡಿದ್ದೇನೆ. ಟಿಎಪಿಸಿಎಂಎಸ್ ಅಧ್ಯಕ್ಷನಾಗಿ ಕೇವಲ 2 ವರ್ಷದಲ್ಲಿ ಆದಾಯವನ್ನು ₹ 2 ಲಕ್ಷದಿಂದ ₹ 40 ಲಕ್ಷಕ್ಕೇರಿಸಿದ್ದೇನೆ. ಪೆಟ್ರೋಲ್ ಬಂಕ್, ವಾಣಿಜ್ಯ ಸಂಕೀರ್ಣ ನಿರ್ಮಿಸಿದ್ದೇನೆ. ಕಲ್ಯಾಣ ಮಂಟಪದಲ್ಲಿ ಬಡವರು ಕೇವಲ ₹ 15 ಸಾವಿರಕ್ಕೆ ಮದುವೆ ಮಾಡುತ್ತಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ್ದೇನೆ.