ಮಲ್ಲೇನಹಳ್ಳಿ ಗ್ರಾಮದಿಂದ ಸ್ವಗ್ರಾಮಕ್ಕೆ ವಾಪಾಸಾಗುವಾಗ ಸಾರಂಗಿ ಸಮೀಪ ಇರುವ ಮೇಲುಸೇತುವೆ ಬಳಿಯ ಹಳ್ಳ ದಾಟುವ ವೇಳೆ ನೀರಿನ ರಭಸಕ್ಕೆ ಬಿದ್ದಿದ್ದಾರೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಟ ನಡೆಸಿದ್ದಾರೆ. ಶನಿವಾರ ಬೆಳಿಗ್ಗೆ ಅಗ್ನಿಶಾಮಕ ಠಾಣೆಗೆ ಕರೆಮಾಡಿ ವಿಷಯ ತಿಳಿಸಿದ್ದಾರೆ. ಕಾರ್ಯಾಚರಣೆ ಪ್ರಾರಂಭಿಸಿದಾಗ ಉದಯಶಂಕರ್ ಅವರ ಸ್ಕೂಟರ್ ಸೇತುವೆಯಿಂದ ನೂರು ಮೀಟರ್ ದೂರದಲ್ಲಿ ನೀರಿನಲ್ಲಿ ಪತ್ತೆಯಾಗಿದೆ.