<p><strong>ಕೆ.ಆರ್.ಪೇಟೆ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಬುಧವಾರ ರಾತ್ರಿ ಭಾರಿ ಮಳೆ ಸುರಿಯಿತು.</p>.<p>ರಾತ್ರಿ 11 ಗಂಟೆ ಸುಮಾರಿಗೆ ಆರಂಭವಾದ ಮಳೆ ಬೆಳಗಿನ ಜಾವದವರೆವಿಗೂ ಸುರಿಯಿತು. ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ನಿಲ್ದಾಣದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಅಗ್ನಿಶಾಮಕ ಸಿಬ್ಬಂದಿ ದೋಣಿ ಮೂಲಕ ಹೊರಗೆ ತಂದರು.</p>.<p>ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿದ್ದ 20ಕ್ಕೂ ಹೆಚ್ಚು ಬೈಕ್ಗಳು ನೀರಿನಿಂದ ಮುಳುಗಡೆಯಾದವು. ಅಂಗಡಿ, ಹೋಟೆಲ್, ಮಳಿಗೆಗಳಿಗೆ ನೀರು ನುಗ್ಗಿ ವಸ್ತುಗಳು ಹಾಳಾದವು.</p>.<p>ಬಸ್ ನಿಲ್ದಾಣ ಇರುವ ಜಾಗದಲ್ಲಿ ಹಿಂದೆ ಚೆನ್ನಪ್ಪನ ಕೆರೆ ಇತ್ತು. ಅದನ್ನು ಮುಚ್ಚಿ ನಿಲ್ದಾಣ ನಿರ್ಮಿಸಿದ ಪರಿಣಾಮ ಮಳೆಗಾಲದಲ್ಲಿ ಈ ಜಾಗ ಕೆರೆಯಂತಾಗುತ್ತಿದೆ.</p>.<p>ಪಟ್ಟಣದ ವಿವಿಧೆಡೆ ಚರಂಡಿ ನೀರು ಮನೆಗಳಿಗೆ ನುಗ್ಗಿದ್ದು, ನೀರನ್ನು ಹೊರಗೆ ಹಾಕಲು ನಿವಾಸಿಗಳು ಪರದಾಡಿದರು.</p>.<p>‘ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸಿರುವುದರಿಂದ ಈ ಸಮಸ್ಯೆ ಉಂಟಾಗುತ್ತಿದೆ. ಪುರಸಭೆ ಅಧಿಕಾರಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಬುಧವಾರ ರಾತ್ರಿ ಭಾರಿ ಮಳೆ ಸುರಿಯಿತು.</p>.<p>ರಾತ್ರಿ 11 ಗಂಟೆ ಸುಮಾರಿಗೆ ಆರಂಭವಾದ ಮಳೆ ಬೆಳಗಿನ ಜಾವದವರೆವಿಗೂ ಸುರಿಯಿತು. ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ನಿಲ್ದಾಣದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಅಗ್ನಿಶಾಮಕ ಸಿಬ್ಬಂದಿ ದೋಣಿ ಮೂಲಕ ಹೊರಗೆ ತಂದರು.</p>.<p>ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿದ್ದ 20ಕ್ಕೂ ಹೆಚ್ಚು ಬೈಕ್ಗಳು ನೀರಿನಿಂದ ಮುಳುಗಡೆಯಾದವು. ಅಂಗಡಿ, ಹೋಟೆಲ್, ಮಳಿಗೆಗಳಿಗೆ ನೀರು ನುಗ್ಗಿ ವಸ್ತುಗಳು ಹಾಳಾದವು.</p>.<p>ಬಸ್ ನಿಲ್ದಾಣ ಇರುವ ಜಾಗದಲ್ಲಿ ಹಿಂದೆ ಚೆನ್ನಪ್ಪನ ಕೆರೆ ಇತ್ತು. ಅದನ್ನು ಮುಚ್ಚಿ ನಿಲ್ದಾಣ ನಿರ್ಮಿಸಿದ ಪರಿಣಾಮ ಮಳೆಗಾಲದಲ್ಲಿ ಈ ಜಾಗ ಕೆರೆಯಂತಾಗುತ್ತಿದೆ.</p>.<p>ಪಟ್ಟಣದ ವಿವಿಧೆಡೆ ಚರಂಡಿ ನೀರು ಮನೆಗಳಿಗೆ ನುಗ್ಗಿದ್ದು, ನೀರನ್ನು ಹೊರಗೆ ಹಾಕಲು ನಿವಾಸಿಗಳು ಪರದಾಡಿದರು.</p>.<p>‘ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸಿರುವುದರಿಂದ ಈ ಸಮಸ್ಯೆ ಉಂಟಾಗುತ್ತಿದೆ. ಪುರಸಭೆ ಅಧಿಕಾರಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>