<p><strong>ಮಂಡ್ಯ:</strong> ‘ಸರಳವಾಗಿ ಪೂಜೆ ಸಲ್ಲಿಸುವ ಮೂಲಕ ಆ.21ರಂದು ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ’ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಶನಿವಾರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಗೌರಿ ಹಬ್ಬದ ಶುಭ ಸಂದರ್ಭದಂದು ಬಾಗಿನ ಅರ್ಪಿಸಲಾಗುವುದು. ಕೋವಿಡ್ ಸಂಕಷ್ಟ ಸಮಯದಲ್ಲಿ ಆಡಂಬರದ ಸಮಾರಂಭ ಇರುವುದಿಲ್ಲ. ಕಾವೇರಿ ಮಾತೆ ಶಕ್ತಿ ತುಂಬಿದ್ದು ಮೈಸೂರು, ಬೆಂಗಳೂರು ಜನರಿಗೆ ಕುಡಿಯುವ ನೀರು, ರೈತರ ಕೃಷಿಗೆ ತೊಂದರೆ ಇರುವುದಿಲ್ಲ’ ಎಂದರು.</p>.<p><strong>ಭರ್ತಿಯತ್ತ ಜಲಾಶಯ: </strong>ಭರ್ತಿಯತ್ತ ಸಾಗುತ್ತಿರುವ ಕೆಆರ್ಎಸ್ ಜಲಾಶಯ ಶನಿವಾರ ಸಂಜೆಯ ವೇಳೆಗೆ 124.50 ಅಡಿಗೆ ತಲುಪಿದೆ. ಗರಿಷ್ಠ ಮಟ್ಟ (124.80) ತಲುಪಲು 0.30 ಅಡಿ ಬಾಕಿ ಇದೆ. 8,838 ಕ್ಯುಸೆಕ್ ಒಳಹರಿವು, 5,317 ಕ್ಯುಸೆಕ್ ಹೊರಹರಿವು ದಾಖಲಾಗಿದೆ.</p>.<p>‘ಜಿಲ್ಲಾಡಳಿತದ ನಿರ್ದೇಶನದಂತೆ ಬಾಗಿನ ಸಮಾರಂಭ ಆಯೋಜನೆ ಮಾಡಲಾಗುವುದು. ಕೋವಿಡ್ ಕಾರಣದಿಂದ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶ ಬಂದ್ ಮಾಡಲಾಗಿದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ವಿಜಯಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಸರಳವಾಗಿ ಪೂಜೆ ಸಲ್ಲಿಸುವ ಮೂಲಕ ಆ.21ರಂದು ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ’ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಶನಿವಾರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಗೌರಿ ಹಬ್ಬದ ಶುಭ ಸಂದರ್ಭದಂದು ಬಾಗಿನ ಅರ್ಪಿಸಲಾಗುವುದು. ಕೋವಿಡ್ ಸಂಕಷ್ಟ ಸಮಯದಲ್ಲಿ ಆಡಂಬರದ ಸಮಾರಂಭ ಇರುವುದಿಲ್ಲ. ಕಾವೇರಿ ಮಾತೆ ಶಕ್ತಿ ತುಂಬಿದ್ದು ಮೈಸೂರು, ಬೆಂಗಳೂರು ಜನರಿಗೆ ಕುಡಿಯುವ ನೀರು, ರೈತರ ಕೃಷಿಗೆ ತೊಂದರೆ ಇರುವುದಿಲ್ಲ’ ಎಂದರು.</p>.<p><strong>ಭರ್ತಿಯತ್ತ ಜಲಾಶಯ: </strong>ಭರ್ತಿಯತ್ತ ಸಾಗುತ್ತಿರುವ ಕೆಆರ್ಎಸ್ ಜಲಾಶಯ ಶನಿವಾರ ಸಂಜೆಯ ವೇಳೆಗೆ 124.50 ಅಡಿಗೆ ತಲುಪಿದೆ. ಗರಿಷ್ಠ ಮಟ್ಟ (124.80) ತಲುಪಲು 0.30 ಅಡಿ ಬಾಕಿ ಇದೆ. 8,838 ಕ್ಯುಸೆಕ್ ಒಳಹರಿವು, 5,317 ಕ್ಯುಸೆಕ್ ಹೊರಹರಿವು ದಾಖಲಾಗಿದೆ.</p>.<p>‘ಜಿಲ್ಲಾಡಳಿತದ ನಿರ್ದೇಶನದಂತೆ ಬಾಗಿನ ಸಮಾರಂಭ ಆಯೋಜನೆ ಮಾಡಲಾಗುವುದು. ಕೋವಿಡ್ ಕಾರಣದಿಂದ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶ ಬಂದ್ ಮಾಡಲಾಗಿದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ವಿಜಯಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>