<p><strong>ಶ್ರೀರಂಗಪಟ್ಟಣ</strong>: ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಯ ಆಸುಪಾಸಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.</p><p>ಅಣೆಕಟ್ಟೆಯ ದಕ್ಷಿಣ ದ್ವಾರ, ಉತ್ತರ ದ್ವಾರ, ಬೃಂದಾವನ ಪ್ರವೇಶ ದ್ವಾರ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅಣೆಕಟ್ಟೆ ನಾಲ್ಕೂ ದಿಕ್ಕುಗಳಲ್ಲಿ ಕರ್ನಾಟ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಸ್ಎಫ್)ನ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಕಾವಲಿಗೆ ಇರಿಸಲಾಗಿದೆ.</p><p>‘ಅಣೆಕಟ್ಟೆ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಮೇಲಧಿಕಾರಿಗಳಿಂದ ಆದೇಶ ಬಂದಿದೆ. ಹಾಗಾಗಿ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಚಲನ ವಲನಗಳ ಬಗ್ಗೆ ನಿಗಾ ಇಡಲಾಗಿದೆ’ ಎಂದು ಕೆಎಸ್ಐಎಸ್ಎಫ್ ಕಮಾಂಡೆಂಟ್ ಪ್ರಮೋದ್ ತಿಳಿಸಿದ್ದಾರೆ.</p><p>‘ಕೆಆರ್ಎಸ್ ಅಣೆಕಟ್ಟೆ ಭದ್ರತೆಗೆ ಪ್ರತ್ಯೇಕವಾಗಿ ಕೈಗಾರಿಕಾ ಭದ್ರತಾ ಪಡೆಯೇ ಇದೆ. ಹಾಗಾಗಿ ಸಿವಿಲ್ ಪೊಲೀಸರನ್ನು ನಿಯೋಜನೆ ಮಾಡಿಲ್ಲ. ದೆಹಲಿ ಸ್ಫೋಟ ಘಟನೆಯ ನಂತರ ಕೆಆರ್ಎಸ್ಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿಲ್ಲ’ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಯ ಆಸುಪಾಸಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.</p><p>ಅಣೆಕಟ್ಟೆಯ ದಕ್ಷಿಣ ದ್ವಾರ, ಉತ್ತರ ದ್ವಾರ, ಬೃಂದಾವನ ಪ್ರವೇಶ ದ್ವಾರ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅಣೆಕಟ್ಟೆ ನಾಲ್ಕೂ ದಿಕ್ಕುಗಳಲ್ಲಿ ಕರ್ನಾಟ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಸ್ಎಫ್)ನ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಕಾವಲಿಗೆ ಇರಿಸಲಾಗಿದೆ.</p><p>‘ಅಣೆಕಟ್ಟೆ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಮೇಲಧಿಕಾರಿಗಳಿಂದ ಆದೇಶ ಬಂದಿದೆ. ಹಾಗಾಗಿ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಚಲನ ವಲನಗಳ ಬಗ್ಗೆ ನಿಗಾ ಇಡಲಾಗಿದೆ’ ಎಂದು ಕೆಎಸ್ಐಎಸ್ಎಫ್ ಕಮಾಂಡೆಂಟ್ ಪ್ರಮೋದ್ ತಿಳಿಸಿದ್ದಾರೆ.</p><p>‘ಕೆಆರ್ಎಸ್ ಅಣೆಕಟ್ಟೆ ಭದ್ರತೆಗೆ ಪ್ರತ್ಯೇಕವಾಗಿ ಕೈಗಾರಿಕಾ ಭದ್ರತಾ ಪಡೆಯೇ ಇದೆ. ಹಾಗಾಗಿ ಸಿವಿಲ್ ಪೊಲೀಸರನ್ನು ನಿಯೋಜನೆ ಮಾಡಿಲ್ಲ. ದೆಹಲಿ ಸ್ಫೋಟ ಘಟನೆಯ ನಂತರ ಕೆಆರ್ಎಸ್ಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿಲ್ಲ’ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>