‘ಕಾಂಗ್ರೆಸ್ನವರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ರಾಜ್ಯಕ್ಕೆ ₹ 1.30 ಲಕ್ಷ ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಕೇಂದ್ರದ ಅನುದಾನವನ್ನು ಕಾಂಗ್ರೆಸ್ ಏನು ಮಾಡಿದೆ ಎಂಬುದರ ಬಗ್ಗೆ ಲೆಕ್ಕ ನೀಡಿ. ನಾಲ್ಕು ವರ್ಷದಲ್ಲಿ ₹ 79 ಸಾವಿರ ಕೋಟಿ ಅನುದಾನವನ್ನು ವಿವಿಧ ಯೋಜನೆಗಳಡಿ ಬಿಡುಗಡೆ ಮಾಡಲಾಗಿದೆ. ಆದರೆ, ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿದ್ದರಾಮಯ್ಯನವರು ಕೇಂದ್ರದ ಯೋಜನೆಗಳನ್ನು ಏಕೆ ಅನುಷ್ಠಾನಗೊಳಿಸಿಲ್ಲ? ಇದನ್ನು ನೀವು ಪ್ರಶ್ನಿಸಬೇಕು’ ಎಂದು ಹೇಳಿದರು.