<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೆಆರ್ಎಸ್ ಬೃಂದಾವನದ ಸಂಗೀತ ನೃತ್ಯ ಕಾರಂಜಿಗೆ ಆಧುನಿಕ ಸ್ಪರ್ಶ ನೀಡಿದ್ದು ಉದ್ಘಾಟನೆಗೆ ಸಿದ್ಧಗೊಂಡಿದೆ. ಅ.15ರಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ.</p>.<p>ಬೃಂದಾವನದ ಉತ್ತರ ಭಾಗದಲ್ಲಿ ₹ 1.80 ಕೋಟಿ ವೆಚ್ಚದಲ್ಲಿ ಸಂಗೀತ ಕಾರಂಜಿಯನ್ನು ಪುನರುಜ್ಜೀವನ ಮಾಡಲಾಗಿದೆ. ಆಕರ್ಷಕ ವಿದ್ಯುತ್ ದೀಪಗಳ ಬೆಳಕಿನಲ್ಲಿ, ನೀರಿನ ಬುಗ್ಗೆಗಳ ಲಾಸ್ಯ ಮನಸೂರೆಗೊಳ್ಳುವಂತೆ ಸಂಗೀತ ಕಾರಂಜಿಯನ್ನು ರೂಪಿಸಲಾಗಿದೆ. ನೃತ್ಯಕ್ಕೆ ತಕ್ಕಂತೆ ಎಲ್ಲ ವಯೋಮಾನದವರಿಗೂ ಇಷ್ಟವಾಗುವ ಮಾದರಿಯ ಸಂಗೀತವನ್ನು ಅಳವಡಿಸಲಾಗಿದೆ.</p>.<p>ಸಂಗೀತ ನೃತ್ಯ ಕಾರಂಜಿ ಪ್ರದರ್ಶನ ಸೋಮವಾರದಿಂದ ಶನಿವಾರದವರೆಗೆ ಸಂಜೆ 7ರಿಂದ 8 ಗಂಟೆವರೆಗೆ ನಡೆಯಲಿದೆ. ಭಾನುವಾರ ಮತ್ತು ರಜೆ ದಿನಗಳಲ್ಲಿ ಸಂಜೆ 7ರಿಂದ 9 ಗಂಟೆವರೆಗೂ ಕಾರಂಜಿಯ ನೃತ್ಯ ವೀಕ್ಷಣೆ ಮಾಡಬಹುದಾಗಿದೆ. ಪ್ರತಿ ವ್ಯಕ್ತಿಗೆ ₹ 50 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ.</p>.<p>ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಕೆ. ರಘುರಾಮನ್, ಕಾರ್ಯಪಾಲಕ ಎಂಜಿನಿಯರ್ ಜಯಂತ್ ಕಾರಂಜಿಯ ಅಂತಿಮ ಹಂತದ ಸಿದ್ಧತೆಯನ್ನು ಶುಕ್ರವಾರ ಸಂಜೆ ಪರಿಶೀಲಿಸಿದರು.</p>.<p><strong>10 ದಿನ ದೀಪಾಲಂಕಾರ:</strong> ದಸರಾ ಉತ್ಸವದ ಹಿನ್ನೆಲೆಯಲ್ಲಿ ಕೆಆರ್ಎಸ್ ಅಣೆಕಟ್ಟೆಗೆ ಅ.15ರಿಂದ 10 ದಿನಗಳ ಕಾಲ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ. ಬೃಂದಾವನದಲ್ಲಿ ಅ.20ರಿಂದ 5 ದಿನಗಳ ಕಾಲ ರಸಮಂಜರಿ ಹಾಗೂ ಇತರ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೆಆರ್ಎಸ್ ಬೃಂದಾವನದ ಸಂಗೀತ ನೃತ್ಯ ಕಾರಂಜಿಗೆ ಆಧುನಿಕ ಸ್ಪರ್ಶ ನೀಡಿದ್ದು ಉದ್ಘಾಟನೆಗೆ ಸಿದ್ಧಗೊಂಡಿದೆ. ಅ.15ರಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ.</p>.<p>ಬೃಂದಾವನದ ಉತ್ತರ ಭಾಗದಲ್ಲಿ ₹ 1.80 ಕೋಟಿ ವೆಚ್ಚದಲ್ಲಿ ಸಂಗೀತ ಕಾರಂಜಿಯನ್ನು ಪುನರುಜ್ಜೀವನ ಮಾಡಲಾಗಿದೆ. ಆಕರ್ಷಕ ವಿದ್ಯುತ್ ದೀಪಗಳ ಬೆಳಕಿನಲ್ಲಿ, ನೀರಿನ ಬುಗ್ಗೆಗಳ ಲಾಸ್ಯ ಮನಸೂರೆಗೊಳ್ಳುವಂತೆ ಸಂಗೀತ ಕಾರಂಜಿಯನ್ನು ರೂಪಿಸಲಾಗಿದೆ. ನೃತ್ಯಕ್ಕೆ ತಕ್ಕಂತೆ ಎಲ್ಲ ವಯೋಮಾನದವರಿಗೂ ಇಷ್ಟವಾಗುವ ಮಾದರಿಯ ಸಂಗೀತವನ್ನು ಅಳವಡಿಸಲಾಗಿದೆ.</p>.<p>ಸಂಗೀತ ನೃತ್ಯ ಕಾರಂಜಿ ಪ್ರದರ್ಶನ ಸೋಮವಾರದಿಂದ ಶನಿವಾರದವರೆಗೆ ಸಂಜೆ 7ರಿಂದ 8 ಗಂಟೆವರೆಗೆ ನಡೆಯಲಿದೆ. ಭಾನುವಾರ ಮತ್ತು ರಜೆ ದಿನಗಳಲ್ಲಿ ಸಂಜೆ 7ರಿಂದ 9 ಗಂಟೆವರೆಗೂ ಕಾರಂಜಿಯ ನೃತ್ಯ ವೀಕ್ಷಣೆ ಮಾಡಬಹುದಾಗಿದೆ. ಪ್ರತಿ ವ್ಯಕ್ತಿಗೆ ₹ 50 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ.</p>.<p>ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಕೆ. ರಘುರಾಮನ್, ಕಾರ್ಯಪಾಲಕ ಎಂಜಿನಿಯರ್ ಜಯಂತ್ ಕಾರಂಜಿಯ ಅಂತಿಮ ಹಂತದ ಸಿದ್ಧತೆಯನ್ನು ಶುಕ್ರವಾರ ಸಂಜೆ ಪರಿಶೀಲಿಸಿದರು.</p>.<p><strong>10 ದಿನ ದೀಪಾಲಂಕಾರ:</strong> ದಸರಾ ಉತ್ಸವದ ಹಿನ್ನೆಲೆಯಲ್ಲಿ ಕೆಆರ್ಎಸ್ ಅಣೆಕಟ್ಟೆಗೆ ಅ.15ರಿಂದ 10 ದಿನಗಳ ಕಾಲ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ. ಬೃಂದಾವನದಲ್ಲಿ ಅ.20ರಿಂದ 5 ದಿನಗಳ ಕಾಲ ರಸಮಂಜರಿ ಹಾಗೂ ಇತರ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>