<p><strong>ಮಂಡ್ಯ</strong>: ನೀರು ನಿರ್ವಹಣೆಯ ಜವಾಬ್ದಾರಿ ಜೊತೆಗೆ, ಕೆಆರ್ಎಸ್ ಮತ್ತು ಹೇಮಾವತಿ ಜಲಾಶಯ ಯೋಜನಾ ಮಟ್ಟದ ಸಹಕಾರ ಸಂಘಗಳ ಚುನಾಯಿತರು, ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸುವ ಹೊಣೆಗಾರಿಕೆ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಹೇಳಿದರು.</p>.<p>ನಗರದ ಗಾಂಧಿ ಭವನದಲ್ಲಿ ಕೆಆರ್ಎಸ್ ಮತ್ತು ಹೇಮಾವತಿ ಜಲಾಶಯಗಳ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಲದ ವತಿಯಿಂದ ಬುಧವಾರ ನಡೆದ ನೀರು ಬಳಕೆದಾರರ ಸಂಘಗಳ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ಕಡೇ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲೆಂದೇ ಸರ್ಕಾರ ಸಂಘಗಳನ್ನು ರಚನೆ ಮಾಡಿ ಕೆಲವು ನಿಯಮಗಳನ್ನು ರೂಪಿಸಿದೆ. ಸಂಘಗಳು ಸರ್ಕಾರದ ಅನುದಾನ ಅವಲಂಬಿಸದೆ ನಿರ್ವಹಣಾ ವೆಚ್ಚವನ್ನು ರೈತರಿಂದಲೇ ಪಡೆದು ನಾಲೆಗಳ ಸ್ವಚ್ಛತೆಯಲ್ಲಿ ಮುಖ್ಯ ಪಾತ್ರ ವಹಿಸಿ’ ಎಂದು ಸಲಹೆ ನೀಡಿದರು.</p>.<p>ಕೆಆರ್ಎಸ್ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷ ಹಳುವಾಡಿ ಕೃಷ್ಣ ಮಾತನಾಡಿ, ನಾಲೆಗಳನ್ನ ದುರಸ್ತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿಕೊಂಡು ಹೋಗೋಣ ಎಂದು ಮನವಿ ಮಾಡಿದರು.</p>.<p>ಮಹಾಮಂಡಲದ ಸಲಹಾ ಸಮಿತಿ ಸದಸ್ಯ ನಂಜೇಗೌಡ, ಸಂಘದ ಅಧ್ಯಕ್ಷರಾದ ಆರ್.ಎ.ನಾಗಣ್ಣ, ಮಂಗಲ ಯೋಗೀಶ್, ಮಾಜಿ ಅಧ್ಯಕ್ಷ ಕೆ.ಎಲ್.ದೊಡ್ಡಲಿಂಗೇಗೌಡ, ಸಿಇಒ ಸುರೇಶ್ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ನೀರು ನಿರ್ವಹಣೆಯ ಜವಾಬ್ದಾರಿ ಜೊತೆಗೆ, ಕೆಆರ್ಎಸ್ ಮತ್ತು ಹೇಮಾವತಿ ಜಲಾಶಯ ಯೋಜನಾ ಮಟ್ಟದ ಸಹಕಾರ ಸಂಘಗಳ ಚುನಾಯಿತರು, ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸುವ ಹೊಣೆಗಾರಿಕೆ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಹೇಳಿದರು.</p>.<p>ನಗರದ ಗಾಂಧಿ ಭವನದಲ್ಲಿ ಕೆಆರ್ಎಸ್ ಮತ್ತು ಹೇಮಾವತಿ ಜಲಾಶಯಗಳ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಲದ ವತಿಯಿಂದ ಬುಧವಾರ ನಡೆದ ನೀರು ಬಳಕೆದಾರರ ಸಂಘಗಳ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ಕಡೇ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲೆಂದೇ ಸರ್ಕಾರ ಸಂಘಗಳನ್ನು ರಚನೆ ಮಾಡಿ ಕೆಲವು ನಿಯಮಗಳನ್ನು ರೂಪಿಸಿದೆ. ಸಂಘಗಳು ಸರ್ಕಾರದ ಅನುದಾನ ಅವಲಂಬಿಸದೆ ನಿರ್ವಹಣಾ ವೆಚ್ಚವನ್ನು ರೈತರಿಂದಲೇ ಪಡೆದು ನಾಲೆಗಳ ಸ್ವಚ್ಛತೆಯಲ್ಲಿ ಮುಖ್ಯ ಪಾತ್ರ ವಹಿಸಿ’ ಎಂದು ಸಲಹೆ ನೀಡಿದರು.</p>.<p>ಕೆಆರ್ಎಸ್ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷ ಹಳುವಾಡಿ ಕೃಷ್ಣ ಮಾತನಾಡಿ, ನಾಲೆಗಳನ್ನ ದುರಸ್ತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿಕೊಂಡು ಹೋಗೋಣ ಎಂದು ಮನವಿ ಮಾಡಿದರು.</p>.<p>ಮಹಾಮಂಡಲದ ಸಲಹಾ ಸಮಿತಿ ಸದಸ್ಯ ನಂಜೇಗೌಡ, ಸಂಘದ ಅಧ್ಯಕ್ಷರಾದ ಆರ್.ಎ.ನಾಗಣ್ಣ, ಮಂಗಲ ಯೋಗೀಶ್, ಮಾಜಿ ಅಧ್ಯಕ್ಷ ಕೆ.ಎಲ್.ದೊಡ್ಡಲಿಂಗೇಗೌಡ, ಸಿಇಒ ಸುರೇಶ್ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>