ನದಿ ಒಡ್ಡಿನ ನಾಲೆಗಳಾದ ವಿರಿಜಾ, ಸಿಡಿಎಸ್, ರಾಜಪರಮೇಶ್ವರಿ, ರಾಮಸ್ವಾಮಿ, ಮಾಧವಮಂತ್ರಿ ನಾಲೆಗಳಿಗೆ ಒಂದು ಸಾವಿರ ಕ್ಯುಸೆಕ್ ನೀರು ಹರಿಯುತ್ತಿದೆ. 4 ಸಾವಿರ ಕ್ಯುಸೆಕ್ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ. ಜಲಾಶಯದ ಮುಖ್ಯ ನಾಲೆಯಾದ ವಿಶ್ವೇಶ್ವರಯ್ಯ ನಾಲೆ, ಬಲದಂಡೆ (ಆರ್ಬಿಎಲ್ಎಲ್) ನಾಲೆ ಹಾಗೂ ಎಡದಂಡೆ (ಎಲ್ಬಿಎಲ್ಎಲ್) ನಾಲೆಗೆ ಉಳಿದ ನೀರು ಹರಿಸಲಾಗುತ್ತಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.