<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ಮದ್ದೂರು ಡಿಪೋಗೆ ವರ್ಗಾಯಿಸಿದ್ದರಿಂದ ಬೇಸರಗೊಂಡ ಇಲ್ಲಿನ ಸಾರಿಗೆ ಸಂಸ್ಥೆ ಬಸ್ ಚಾಲಕ ಎಚ್.ಆರ್.ಜಗದೀಶ್ ಅವರು ಪಟ್ಟಣದ ಬಸ್ ಡಿಪೊ ಎದುರು ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ‘ವರ್ಗಾವಣೆಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಾರಣ’ ಎಂದು ಅವರು ಡೆತ್ ನೋಟ್ ಬರೆದಿದ್ದಾರೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/news/karnataka-news/ksrtc-staff-attempted-to-suicide-bjp-protests-in-assembly-for-chaluvarayaswamy-resignation-assembly-proceedings-adjournment-2373164">ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಧರಣಿ: ವಿಧಾನಸಭೆ ಕಲಾಪ ಮುಂದೂಡಿಕೆ</a></p>.<p>ಅವರನ್ನು ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>‘ನನ್ನ ವರ್ಗಾವಣೆಗೆ ಸಚಿವ ಎನ್.ಚಲುವರಾಯಸ್ವಾಮಿ ಅವರೇ ಕಾರಣ. ರಾಜಕೀಯ ದ್ವೇಷದಿಂದ ಒತ್ತಡ ತಂದು ನನ್ನನ್ನು ವರ್ಗಾವಣೆ ಮಾಡಿಸಿದ್ದಾರೆ. ಆದರೆ, ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣ ನೀಡಿ ಅಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ. ನಾನು ಯಾರೊಂದಿಗೂ ಅನುಚಿತವಾಗಿ ವರ್ತಿಸಿಲ್ಲ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಚಲುವರಾಯಸ್ವಾಮಿ ಅವರು ವರ್ಗಾವಣೆ ಮಾಡಿಸಿದ್ದಾರೆ‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.</p>.<p>‘ವರ್ಗಾವಣೆಗೆ ಒತ್ತಡ ಹಾಕಿಲ್ಲ. ವಾರದ ಹಿಂದೆ ಆತನ ವಿರುದ್ಧ ಅನುಚಿತ ವರ್ತನೆಯ ದೂರು ಬಂದಿತ್ತು, ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದಿದ್ದೆ. ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾಗಿದೆ‘ ಎಂದು ಸಚಿವ ಎನ್.ಚಲುವರಾಯಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ಮದ್ದೂರು ಡಿಪೋಗೆ ವರ್ಗಾಯಿಸಿದ್ದರಿಂದ ಬೇಸರಗೊಂಡ ಇಲ್ಲಿನ ಸಾರಿಗೆ ಸಂಸ್ಥೆ ಬಸ್ ಚಾಲಕ ಎಚ್.ಆರ್.ಜಗದೀಶ್ ಅವರು ಪಟ್ಟಣದ ಬಸ್ ಡಿಪೊ ಎದುರು ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ‘ವರ್ಗಾವಣೆಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಾರಣ’ ಎಂದು ಅವರು ಡೆತ್ ನೋಟ್ ಬರೆದಿದ್ದಾರೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/news/karnataka-news/ksrtc-staff-attempted-to-suicide-bjp-protests-in-assembly-for-chaluvarayaswamy-resignation-assembly-proceedings-adjournment-2373164">ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಧರಣಿ: ವಿಧಾನಸಭೆ ಕಲಾಪ ಮುಂದೂಡಿಕೆ</a></p>.<p>ಅವರನ್ನು ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>‘ನನ್ನ ವರ್ಗಾವಣೆಗೆ ಸಚಿವ ಎನ್.ಚಲುವರಾಯಸ್ವಾಮಿ ಅವರೇ ಕಾರಣ. ರಾಜಕೀಯ ದ್ವೇಷದಿಂದ ಒತ್ತಡ ತಂದು ನನ್ನನ್ನು ವರ್ಗಾವಣೆ ಮಾಡಿಸಿದ್ದಾರೆ. ಆದರೆ, ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣ ನೀಡಿ ಅಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ. ನಾನು ಯಾರೊಂದಿಗೂ ಅನುಚಿತವಾಗಿ ವರ್ತಿಸಿಲ್ಲ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಚಲುವರಾಯಸ್ವಾಮಿ ಅವರು ವರ್ಗಾವಣೆ ಮಾಡಿಸಿದ್ದಾರೆ‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.</p>.<p>‘ವರ್ಗಾವಣೆಗೆ ಒತ್ತಡ ಹಾಕಿಲ್ಲ. ವಾರದ ಹಿಂದೆ ಆತನ ವಿರುದ್ಧ ಅನುಚಿತ ವರ್ತನೆಯ ದೂರು ಬಂದಿತ್ತು, ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದಿದ್ದೆ. ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾಗಿದೆ‘ ಎಂದು ಸಚಿವ ಎನ್.ಚಲುವರಾಯಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>