ಮಂಡ್ಯ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ, ಕೃಷಿ ಪದವೀಧರರ ಸಂಘದ ಸಂಸ್ಥಾಪಕ ಅಧ್ಯಕ್ಷ ಕೆ.ಟಿ.ಶಿವಶಂಕರ್ (80) ಸೋಮವಾರ ನಿಧನರಾದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಒಡನಾಡಿಯಾಗಿದ್ದ ಶಿವಶಂಕರ್ ಸಚಿವ ಕೆ.ವಿ. ಶಂಕರಗೌಡ ಅವರ ಸಹೋದರನ ಪುತ್ರ. ಮೂಡಿಗೆರೆಯ ಕೃಷಿ ಮಹಾವಿದ್ಯಾಲಯದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರಿಗೆ ಪುತ್ರ, ಪುತ್ರಿ ಇದ್ದಾರೆ.