ಕಂದಾಯ ಅದಾಲತ್ ಪಿಂಚಿಣಿ ಅದಾಲತ್ ಜನತಾ ದರ್ಶನದಂತಹ ಕಾರ್ಯಕ್ರಮಗಳು ಸರಿಯಾಗಿ ನಡೆಯುತ್ತಿಲ್ಲ. ಕೆ.ಆರ್. ಪೇಟೆ ಪುರಸಭೆಯಲ್ಲಿ ಜನರು ಕೊಟ್ಟ ಮನವಿಗಳನ್ನು ಶೀಘ್ರ ವಿಲೇವಾರಿ ಮಾಡುತ್ತಿಲ್ಲ.ಮಂಜುನಾಥ್ ಪುರಸಭೆ ಸದಸ್ಯ ಕೆ.ಆರ್. ಪೇಟೆ
ಜನಸ್ನೇಹಿ ಆಗಬೇಕಾದ ಸರ್ಕಾರಿ ಇಲಾಖೆಗಳು ಜನರಿಂದ ದೂರ ಸರಿದು ಕಾರ್ಯ ನಿರ್ವಹಿಸುತ್ತಿವೆ. ಜನಸಾಮಾನ್ಯರ ಸಮಸ್ಯೆ ನಿವಾರಣೆಗಾಗಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ಮುಂದೆ ಅಂಗಲಾಚಿ ಕೇಳಿಕೊಳ್ಳುವ ಪರಿಸ್ಥಿತಿ ಹೆಚ್ಚಾಗಿದೆಬಸವೇಗೌಡ ಅಧ್ಯಕ್ಷ ನಾಗರೀಕ ಹಿತರಕ್ಷಣಾ ವೇದಿಕೆ ಕೆ.ಆರ್. ಪೇಟೆ
ಶ್ರೀರಂಗಪಟ್ಟಣ ಮಿನಿ ವಿಧಾನಸೌಧದ ಎರಡನೇ ಮಹಡಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಇದ್ದು ಅಂಗವಿಕಲರು ವೃದ್ದರಿಗೆ ಹತ್ತಿ ಇಳಿಯಲು ಕಷ್ಟವಾಗಿದೆ. ಈ ಕಚೇರಿಯನ್ನು ಕೆಳಕ್ಕೆ ಸ್ಥಳಾಂತರಿಸಬೇಕು. ಸಾರ್ವಜನಿಕರಿಗೆ ಶೌಚಾಲಯ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕುಅಪ್ಪಾಜಿ ಗ್ರಾ.ಪಂ. ಸದಸ್ಯ ಕೆ.ಶೆಟ್ಟಹಳ್ಳಿ ಶ್ರೀರಂಗಪಟ್ಟಣ ತಾಲ್ಲೂಕು
ಸರ್ಕಾರಿ ಕಚೇರಿಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಜಾರಿಗೆ ತಂದರೂ ಇನ್ನೂ ಕೆಲ ಸುಧಾರಣೆಯಾಗಬೇಕು. ಮಹಿಳೆಯರಿಗೆ ತ್ವರಿತಗತಿಯಲ್ಲಿ ಸೇವೆ ಸಿಗುವಂತಾಗಬೇಕುನಂದಿನಿ ಮಳವಳ್ಳಿ
ತಾಲ್ಲೂಕು ಕಚೇರಿಯಲ್ಲಿನ ಕಡತಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಕಚೇರಿಯಲ್ಲಿ ಸಾರ್ವಜನಿಕರ ಯಾವುದೇ ಅರ್ಜಿಗಳು ಬಾಕಿ ಉಳಿಯದಂತೆ ಕ್ರಮ ವಹಿಸಿದ್ದೇವೆ. ತಾಲ್ಲೂಕು ಆಡಳಿತ ಸೌಧ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿದೆಜಿ.ಎಸ್. ಶ್ರೇಯಸ್ ತಹಶೀಲ್ದಾರ್ ಪಾಂಡವಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.