ಬೆಂಗಳೂರು ಸುತ್ತಮುತ್ತ 5 ಸಾವಿರ ಎಕರೆಯಷ್ಟು ಕೃಷಿ ಭೂಮಿಯನ್ನು ಸಹಕಾರಿ ಸಂಸ್ಥೆಗಳ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಕಂಪನಿಗಳು ಖರೀದಿಸಿವೆ. ಮೂರು ದಶಕಗಳಲ್ಲಿ ಕಂದಾಯ ಅಧಿಕಾರಿಗಳು ಭ್ರಷ್ಟಾಚಾರ ಎಸಗಿ ರೈತರನ್ನು ವಂಚಿಸಿದ್ದಾರೆ. ಈ ದಿಸೆಯಲ್ಲಿ ಸರ್ಕಾರದ ಉದ್ದೇಶಿತ ತಿದ್ದುಪಡಿ ಅಗತ್ಯ ಇದೆ. ಇದರಿಂದ ಅಕ್ರಮ ತಡೆಗೆ ಕಡಿವಾಣ ಹಾಕಲೂ ಅವಕಾಶವಿದೆ. ಆದರೆ, ಸಣ್ಣ ಹಿಡುವಳಿದಾರರಿಗೆ ತೊಂದರೆಯಾಗುವ ಅಪಾಯವೂ ಇದೆ. ಹಾಗಾಗಿ ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಸಲಹೆ ನೀಡಿದರು.