ವಿವಿಧೆಡೆ ಕೃಷ್ಣ ಜನ್ಮಾಷ್ಟಮಿ: ಪೂರ್ಣ ವಿಕಾಸ ಸೇವಾ ಟ್ರಸ್ಟ್, ಧರ್ಮ ಜಾಗರಣ ಸಮನ್ವಯ ಸಮಿತಿ, ಭಜರಂಗಸೇನೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮಕ್ಕಳು ಕೃಷ್ಣನ ವೇಷ ತೊಟ್ಟು ಗಮನ ಸೆಳೆದರು. ಭಾವಸಾರ ಕ್ಷತ್ರಿಯ ಸಮಾಜ, ಭಾವಸಾರ ಕ್ಷತ್ರಿಯ ವಿದ್ಯಾಭಿವೃದ್ಧಿ ಸಮಿತಿ ವತಿಯಿಂದ ನಗರದ ವಿಠಲ ಸಮುದಾಯ ಭವನದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು.