<p><strong>ಮದ್ದೂರು</strong>: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)ದಲ್ಲಿ ನಡೆದಿರುವ ಹಾಲಿಗೆ ನೀರು ಬೆರಸುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ತಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಬೇಕು ಎಂದು ಸಂಸದೆ ಸುಮಲತಾ ಆಗ್ರಹಿಸಿದರು.</p>.<p>ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ನಿರ್ದೇಶಕರೊಂದಿಗೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಹಾಲಿಗೆ ನೀರು ಬೆರೆಸುವ ಅಕ್ರಮ ಚಟುವಟಿಕೆ ಹಿಂದಿನಿಂದಲೂ ನಡೆಯುತ್ತಿತ್ತು ಎಂಬ ಸಂದೇಹ ಇದೆ. ಆದರೆ, ಇದು ಹಿಂದೆ ಏಕೆ ಗೊತ್ತಾಗಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ. ಸಿಬಿಐ ಅಥವಾ ಸಿಐಡಿ ಸೇರಿದಂತೆ ಯಾವುದೇ ತನಿಖೆ ನಡೆಸಲಿ. ಆದರೆ ಸತ್ಯ ಹೊರ ಬರಬೇಕು. ಆ ಮೂಲಕ ಜಿಲ್ಲೆಯ ಹಾಲು ಉತ್ಪಾದಕರಿಗೆ ನ್ಯಾಯ ಸಿಗಬೇಕು. ಜುಲೈ 5ರಂದು ಮುಖ್ಯಮಂತ್ರಿ ಜತೆ ಸಭೆ ಇದ್ದು, ಈ ವಿಷಯ ಚರ್ಚಿಸುವುದಾಗಿ ತಿಳಿಸಿದರು.</p>.<p>ಕೆಆರ್ಎಸ್ ಅಣೆಕಟ್ಟೆ ಬಿರುಕು ಬಿಟ್ಟಿದಿಯೋ ಇಲ್ಲವೋ ಗೊತ್ತಿಲ್ಲ. ಆದರೆ ಆ ಬಗ್ಗೆ ಶಂಕೆ ಇದೆ. ಕೆಆರ್ಎಸ್ ಉಳಿಸುವುದಷ್ಟೇ ನನ್ನ ಉದ್ದೇಶವಾಗಿದ್ದು, ಇದಕ್ಕೆ ಜಿಲ್ಲೆಯ ಎಲ್ಲರೂ ಹೋರಾಟ ಮಾಡಬೇಕು. ಮುಂದಿನ ದಿನಗಳಲ್ಲಿ ಕೆಆರ್ಎಸ್ ರಕ್ಷಿಸಿ ಎಂಬ ಹ್ಯಾಷ್ ಟ್ಯಾಗ್ ಬಳಸುವುದಾಗಿ ತಿಳಿಸಿದರು.</p>.<p>ಮನ್ಮುಲ್ ಅಧ್ಯಕ್ಷ ರಾಮಚಂದ್ರು, ಉಪಾಧ್ಯಕ್ಷ ರಘುನಂದನ್, ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಮನ್ಮುಲ್ ನಿರ್ದೇಶಕರು, ಅಧಿಕಾರಿಗಳು ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)ದಲ್ಲಿ ನಡೆದಿರುವ ಹಾಲಿಗೆ ನೀರು ಬೆರಸುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ತಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಬೇಕು ಎಂದು ಸಂಸದೆ ಸುಮಲತಾ ಆಗ್ರಹಿಸಿದರು.</p>.<p>ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ನಿರ್ದೇಶಕರೊಂದಿಗೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಹಾಲಿಗೆ ನೀರು ಬೆರೆಸುವ ಅಕ್ರಮ ಚಟುವಟಿಕೆ ಹಿಂದಿನಿಂದಲೂ ನಡೆಯುತ್ತಿತ್ತು ಎಂಬ ಸಂದೇಹ ಇದೆ. ಆದರೆ, ಇದು ಹಿಂದೆ ಏಕೆ ಗೊತ್ತಾಗಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ. ಸಿಬಿಐ ಅಥವಾ ಸಿಐಡಿ ಸೇರಿದಂತೆ ಯಾವುದೇ ತನಿಖೆ ನಡೆಸಲಿ. ಆದರೆ ಸತ್ಯ ಹೊರ ಬರಬೇಕು. ಆ ಮೂಲಕ ಜಿಲ್ಲೆಯ ಹಾಲು ಉತ್ಪಾದಕರಿಗೆ ನ್ಯಾಯ ಸಿಗಬೇಕು. ಜುಲೈ 5ರಂದು ಮುಖ್ಯಮಂತ್ರಿ ಜತೆ ಸಭೆ ಇದ್ದು, ಈ ವಿಷಯ ಚರ್ಚಿಸುವುದಾಗಿ ತಿಳಿಸಿದರು.</p>.<p>ಕೆಆರ್ಎಸ್ ಅಣೆಕಟ್ಟೆ ಬಿರುಕು ಬಿಟ್ಟಿದಿಯೋ ಇಲ್ಲವೋ ಗೊತ್ತಿಲ್ಲ. ಆದರೆ ಆ ಬಗ್ಗೆ ಶಂಕೆ ಇದೆ. ಕೆಆರ್ಎಸ್ ಉಳಿಸುವುದಷ್ಟೇ ನನ್ನ ಉದ್ದೇಶವಾಗಿದ್ದು, ಇದಕ್ಕೆ ಜಿಲ್ಲೆಯ ಎಲ್ಲರೂ ಹೋರಾಟ ಮಾಡಬೇಕು. ಮುಂದಿನ ದಿನಗಳಲ್ಲಿ ಕೆಆರ್ಎಸ್ ರಕ್ಷಿಸಿ ಎಂಬ ಹ್ಯಾಷ್ ಟ್ಯಾಗ್ ಬಳಸುವುದಾಗಿ ತಿಳಿಸಿದರು.</p>.<p>ಮನ್ಮುಲ್ ಅಧ್ಯಕ್ಷ ರಾಮಚಂದ್ರು, ಉಪಾಧ್ಯಕ್ಷ ರಘುನಂದನ್, ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಮನ್ಮುಲ್ ನಿರ್ದೇಶಕರು, ಅಧಿಕಾರಿಗಳು ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>