<p><strong>ಮಂಡ್ಯ: ‘</strong>ಸಮಾಜದ ಎಲ್ಲ ವರ್ಗದವರಿಗೂ ಕಾನೂನಿನ ಅರಿವು ಮೂಡಿಸುವ ಕಾರ್ಯಾಗಾರ ಅಗತ್ಯವಿದ್ದು, ಕಾನೂನಿನ ಅರಿವು ಇದ್ದಾಗ ಮಾತ್ರ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ನಗರದ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ ) ಅಧಿನಿಯಮ 1989 (ತಿದ್ದುಪಡಿ) ಅಧಿನಿಯಮ 2015 ಮತ್ತು ನಿಯಮಗಳು 1995 (ತಿದ್ದುಪಡಿ) ನಿಯಮಗಳು ಮತ್ತು ನಾಗರಿಕ ಹಕ್ಕು ರಕ್ಷಣಾ ಕಾಯ್ದೆ 1955ರನ್ವಯ ಆಯೋಜಿಸಿದ್ದ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. </p>.<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರತಿಬಂಧ ಕಾಯ್ದೆಯ ಸದಸ್ಯರು ಮುತುವರ್ಜಿ ವಹಿಸಿ ಪ್ರಯತ್ನ ಪಟ್ಟರೆ ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಬಸಹುದು. ಸದರಿ ಕಾಯ್ದೆಯಡಿ ನ್ಯಾಯಾಲಯಗಳಿಗೆ ಸಾಕ್ಷಿ ಹೇಳಲು ಬರುವ ಸಾಕ್ಷಿದಾರರಿಗೆ ಧೈರ್ಯ ತುಂಬುವ ಕೆಲಸವಾಗಬೇಕು ಎಂದರು.</p>.<p>ಎಲ್ಲಾ ದೌರ್ಜನ್ಯ ಪ್ರಕರಣಗಳನ್ನು ಕಾನೂನಿನ ಮೂಲಕವೇ ಪರಿಹರಿಸುತ್ತೇವೆ ಎಂದರೆ ಪ್ರಯೋಜನವಿಲ್ಲ ಸಮಾಜದಲ್ಲಿ ಮನಪರಿವರ್ತನೆ ಆಗಬೇಕು. ಜನರಿಗೆ ಅರಿವು ಹೆಚ್ಚಾಗಬೇಕು. ಹೀಗಿದ್ದಾಗ ಮಾತ್ರ ಸಮಾಜದಿಂದ ಅಸ್ಪೃಶ್ಯತೆ ಹೋಗಲಾಡಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯಪಟ್ಟರು.</p>.<p>ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ. ಶ್ರೀನಿವಾಸ್, ಮಂಡ್ಯ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ರಾಜೇಶ್ ಎಚ್.ಸಿ. ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.</p>.<div><blockquote>ಎಸ್ಸಿ–ಎಸ್ಟಿ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಆಗುತ್ತಿದೆ. ನ್ಯಾಯಾಲಯದಲ್ಲಿ ಸಾಕ್ಷಿಗಳ ಕೊರತೆ ಇದ್ದು ಈ ಕಾಯ್ದೆಯ ಕುರಿತು ಜನರಿಗೆ ಅರಿವು ಮೂಡಿಸಬೇಕು </blockquote><span class="attribution">ಆನಂದ್ ಎಂ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: ‘</strong>ಸಮಾಜದ ಎಲ್ಲ ವರ್ಗದವರಿಗೂ ಕಾನೂನಿನ ಅರಿವು ಮೂಡಿಸುವ ಕಾರ್ಯಾಗಾರ ಅಗತ್ಯವಿದ್ದು, ಕಾನೂನಿನ ಅರಿವು ಇದ್ದಾಗ ಮಾತ್ರ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ನಗರದ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ ) ಅಧಿನಿಯಮ 1989 (ತಿದ್ದುಪಡಿ) ಅಧಿನಿಯಮ 2015 ಮತ್ತು ನಿಯಮಗಳು 1995 (ತಿದ್ದುಪಡಿ) ನಿಯಮಗಳು ಮತ್ತು ನಾಗರಿಕ ಹಕ್ಕು ರಕ್ಷಣಾ ಕಾಯ್ದೆ 1955ರನ್ವಯ ಆಯೋಜಿಸಿದ್ದ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. </p>.<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರತಿಬಂಧ ಕಾಯ್ದೆಯ ಸದಸ್ಯರು ಮುತುವರ್ಜಿ ವಹಿಸಿ ಪ್ರಯತ್ನ ಪಟ್ಟರೆ ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಬಸಹುದು. ಸದರಿ ಕಾಯ್ದೆಯಡಿ ನ್ಯಾಯಾಲಯಗಳಿಗೆ ಸಾಕ್ಷಿ ಹೇಳಲು ಬರುವ ಸಾಕ್ಷಿದಾರರಿಗೆ ಧೈರ್ಯ ತುಂಬುವ ಕೆಲಸವಾಗಬೇಕು ಎಂದರು.</p>.<p>ಎಲ್ಲಾ ದೌರ್ಜನ್ಯ ಪ್ರಕರಣಗಳನ್ನು ಕಾನೂನಿನ ಮೂಲಕವೇ ಪರಿಹರಿಸುತ್ತೇವೆ ಎಂದರೆ ಪ್ರಯೋಜನವಿಲ್ಲ ಸಮಾಜದಲ್ಲಿ ಮನಪರಿವರ್ತನೆ ಆಗಬೇಕು. ಜನರಿಗೆ ಅರಿವು ಹೆಚ್ಚಾಗಬೇಕು. ಹೀಗಿದ್ದಾಗ ಮಾತ್ರ ಸಮಾಜದಿಂದ ಅಸ್ಪೃಶ್ಯತೆ ಹೋಗಲಾಡಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯಪಟ್ಟರು.</p>.<p>ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ. ಶ್ರೀನಿವಾಸ್, ಮಂಡ್ಯ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ರಾಜೇಶ್ ಎಚ್.ಸಿ. ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.</p>.<div><blockquote>ಎಸ್ಸಿ–ಎಸ್ಟಿ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಆಗುತ್ತಿದೆ. ನ್ಯಾಯಾಲಯದಲ್ಲಿ ಸಾಕ್ಷಿಗಳ ಕೊರತೆ ಇದ್ದು ಈ ಕಾಯ್ದೆಯ ಕುರಿತು ಜನರಿಗೆ ಅರಿವು ಮೂಡಿಸಬೇಕು </blockquote><span class="attribution">ಆನಂದ್ ಎಂ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>