<p><strong>ಮಂಡ್ಯ</strong>: ತಾಲ್ಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಚಿರತೆ ದಾಳಿಗೆ ಕರು ಬಲಿಯಾಗಿದೆ.</p>.<p>ರೈತ ಗುರುದರ್ಶನ್ ಎಂಬುವರಿಗೆ ಸೇರಿದ ಮಿಶ್ರತಳಿ ಹಸುವಿನ ಕರುವನ್ನು ಮನೆ ಮುಂದೆ ಕಟ್ಟಿ ಹಾಕಲಾಗಿತ್ತು. ಸಮೀಪದ ಕಬ್ಬಿನ ಗದ್ದೆಗೆ ಎಳೆದೊಯ್ದಿರುವ ಚಿರತೆಯು, ಕರುವನ್ನು ಕೊಂದು ಮಾಂಸ ತಿಂದು ಕಳೆಬರವನ್ನು ಅಲ್ಲೇ ಬಿಟ್ಟು ಹೋಗಿದೆ.</p>.<p>ಮಧ್ಯರಾತ್ರಿ ಸಮಯದಲ್ಲಿ ಮನೆಯ ಹೊರಗೆ ಕರುವಿನ ಕಿರುಚಾಟದ ಶಬ್ದವನ್ನು ಕೇಳಿದ ಮಾಲೀಕರು ಭಯ ಮತ್ತು ಗಾಬರಿಯಿಂದ ಹೊರಗೆ ಬಂದಿಲ್ಲ.</p>.<p>ಕೆಲವು ದಿನಗಳ ಹಿಂದೆ ರೈತ ಗುರುದರ್ಶನ್ ಅವರಿಗೆ ಸೇರಿದ ಒಂದು ನಾಯಿ ಸೇರಿದಂತೆ ಒಟ್ಟು ಎರಡು ನಾಯಿಗಳು ಚಿರತೆ ದಾಳಿಗೆ ಬಲಿಯಾಗಿದ್ದವು. ಚಿರತೆ ಹಾವಳಿಯನ್ನು ನಿಯಂತ್ರಿಸಬೇಕು ಮತ್ತು ಸೂಕ್ತ ಪರಿಹಾರ ಕೊಡಬೇಕು ಎಂದು ಗುರುದರ್ಶನ್ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ತಾಲ್ಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಚಿರತೆ ದಾಳಿಗೆ ಕರು ಬಲಿಯಾಗಿದೆ.</p>.<p>ರೈತ ಗುರುದರ್ಶನ್ ಎಂಬುವರಿಗೆ ಸೇರಿದ ಮಿಶ್ರತಳಿ ಹಸುವಿನ ಕರುವನ್ನು ಮನೆ ಮುಂದೆ ಕಟ್ಟಿ ಹಾಕಲಾಗಿತ್ತು. ಸಮೀಪದ ಕಬ್ಬಿನ ಗದ್ದೆಗೆ ಎಳೆದೊಯ್ದಿರುವ ಚಿರತೆಯು, ಕರುವನ್ನು ಕೊಂದು ಮಾಂಸ ತಿಂದು ಕಳೆಬರವನ್ನು ಅಲ್ಲೇ ಬಿಟ್ಟು ಹೋಗಿದೆ.</p>.<p>ಮಧ್ಯರಾತ್ರಿ ಸಮಯದಲ್ಲಿ ಮನೆಯ ಹೊರಗೆ ಕರುವಿನ ಕಿರುಚಾಟದ ಶಬ್ದವನ್ನು ಕೇಳಿದ ಮಾಲೀಕರು ಭಯ ಮತ್ತು ಗಾಬರಿಯಿಂದ ಹೊರಗೆ ಬಂದಿಲ್ಲ.</p>.<p>ಕೆಲವು ದಿನಗಳ ಹಿಂದೆ ರೈತ ಗುರುದರ್ಶನ್ ಅವರಿಗೆ ಸೇರಿದ ಒಂದು ನಾಯಿ ಸೇರಿದಂತೆ ಒಟ್ಟು ಎರಡು ನಾಯಿಗಳು ಚಿರತೆ ದಾಳಿಗೆ ಬಲಿಯಾಗಿದ್ದವು. ಚಿರತೆ ಹಾವಳಿಯನ್ನು ನಿಯಂತ್ರಿಸಬೇಕು ಮತ್ತು ಸೂಕ್ತ ಪರಿಹಾರ ಕೊಡಬೇಕು ಎಂದು ಗುರುದರ್ಶನ್ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>