ಗ್ರಾಮದ ಹೊರ ಭಾಗದ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಜೋಳದ ತೆನೆಯನ್ನು ಕಾಯಲು ಗುರುವಾರ ರಾತ್ರಿ ತಂದೆ ವೆಂಕಟಯ್ಯ ಜತೆ ಚರಣ್ ಮಲಗಿದ್ದರು. ಮಧ್ಯರಾತ್ರಿ ಚಿರತೆಯೊಂದು ಚರಣ್ ಮೇಲೆ ದಾಳಿ ಮಾಡಿದೆ. ಕೂಡಲೇ ವೆಂಕಟಯ್ಯ ಮತ್ತು ಚರಣ್ ಪ್ರತಿರೋಧ ತೋರಿದಾಗ ಚಿರತೆ ಪರಾರಿಯಾಗಿದೆ. ಚರಣ್ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೀವಕ್ಕೆ ಏನು ಅಪಾಯವಿಲ್ಲ ಎಂದು ವೈದ್ಯಾಧಿಕಾರಿ ಡಾ.ವರ್ಣಿತ ತಿಳಿಸಿದ್ದಾರೆ.