<p><strong>ಬೆಳಕವಾಡಿ:</strong> ಜಮೀನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಮಧ್ಯರಾತ್ರಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಬಿಜಿಪುರ ಹೋಬಳಿಯ ಉತ್ತೂರು ಗ್ರಾಮದಲ್ಲಿ ಗುರುವಾರ ನಡೆದಿದೆ.</p>.<p>ಗ್ರಾಮದ ಹೊರ ಭಾಗದ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಜೋಳದ ತೆನೆಯನ್ನು ಕಾಯಲು ಗುರುವಾರ ರಾತ್ರಿ ತಂದೆ ವೆಂಕಟಯ್ಯ ಜತೆ ಚರಣ್ ಮಲಗಿದ್ದರು. ಮಧ್ಯರಾತ್ರಿ ಚಿರತೆಯೊಂದು ಚರಣ್ ಮೇಲೆ ದಾಳಿ ಮಾಡಿದೆ. ಕೂಡಲೇ ವೆಂಕಟಯ್ಯ ಮತ್ತು ಚರಣ್ ಪ್ರತಿರೋಧ ತೋರಿದಾಗ ಚಿರತೆ ಪರಾರಿಯಾಗಿದೆ. ಚರಣ್ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೀವಕ್ಕೆ ಏನು ಅಪಾಯವಿಲ್ಲ ಎಂದು ವೈದ್ಯಾಧಿಕಾರಿ ಡಾ.ವರ್ಣಿತ ತಿಳಿಸಿದ್ದಾರೆ.</p>.<p>ತಾಲ್ಲೂಕಿನ ಬಿಜಿಪುರ ಹೋಬಳಿಯ ಕಗ್ಗಲೀಪುರ ಹಾಗೂ ಬಣವೆ ಗ್ರಾಮಗಳ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.</p>.<p>ಚಿರತೆ ಸೆರೆಹಿಡಿಯಲು ಬೋನ್ ಇಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಆಸೀಫ್ ಅಹ್ಮದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ:</strong> ಜಮೀನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಮಧ್ಯರಾತ್ರಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಬಿಜಿಪುರ ಹೋಬಳಿಯ ಉತ್ತೂರು ಗ್ರಾಮದಲ್ಲಿ ಗುರುವಾರ ನಡೆದಿದೆ.</p>.<p>ಗ್ರಾಮದ ಹೊರ ಭಾಗದ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಜೋಳದ ತೆನೆಯನ್ನು ಕಾಯಲು ಗುರುವಾರ ರಾತ್ರಿ ತಂದೆ ವೆಂಕಟಯ್ಯ ಜತೆ ಚರಣ್ ಮಲಗಿದ್ದರು. ಮಧ್ಯರಾತ್ರಿ ಚಿರತೆಯೊಂದು ಚರಣ್ ಮೇಲೆ ದಾಳಿ ಮಾಡಿದೆ. ಕೂಡಲೇ ವೆಂಕಟಯ್ಯ ಮತ್ತು ಚರಣ್ ಪ್ರತಿರೋಧ ತೋರಿದಾಗ ಚಿರತೆ ಪರಾರಿಯಾಗಿದೆ. ಚರಣ್ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೀವಕ್ಕೆ ಏನು ಅಪಾಯವಿಲ್ಲ ಎಂದು ವೈದ್ಯಾಧಿಕಾರಿ ಡಾ.ವರ್ಣಿತ ತಿಳಿಸಿದ್ದಾರೆ.</p>.<p>ತಾಲ್ಲೂಕಿನ ಬಿಜಿಪುರ ಹೋಬಳಿಯ ಕಗ್ಗಲೀಪುರ ಹಾಗೂ ಬಣವೆ ಗ್ರಾಮಗಳ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.</p>.<p>ಚಿರತೆ ಸೆರೆಹಿಡಿಯಲು ಬೋನ್ ಇಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಆಸೀಫ್ ಅಹ್ಮದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>