<p><strong>ಮಂಡ್ಯ:</strong> ತಾಲ್ಲೂಕಿನ ಕೆರಗೋಡು ಹೋಬಳಿಯ ಕೆ.ಗೌಡಗೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಇಟ್ಟಿದ್ದ ಬೋನಿನಲ್ಲಿ ಭಾನುವಾರ ಮುಂಜಾನೆ ಗಂಡು ಚಿರತೆ ಸೆರೆಯಾಗಿದೆ. </p><p>ಕೆ.ಗೌಡಗೆರೆ ಗ್ರಾಮದ ಪ್ರಕಾಶ್ ಎಂಬುವವರು ಕಬ್ಬಿನ ಗದ್ದೆಯಲ್ಲಿ ಚಿರತೆ ಸಂಚಾರ ಕಂಡುಬಂದಿದೆ ಎಂದು ಅರಣ್ಯ ಇಲಾಖೆಗೆ ಶುಕ್ರವಾರ ಮಾಹಿತಿ ನೀಡಿದ್ದರು. </p><p>ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಕಬ್ಬಿನ ಗದ್ದೆಯಲ್ಲಿ ಬೋನು ಇಟ್ಟು ನಾಯಿಯನ್ನು ಕಟ್ಟಿದ್ದರು. ನಾಯಿ ತಿನ್ನುವ ಆಸೆಯಿಂದ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. </p><p>ಚಿರತೆಗೆ ವೈದ್ಯಕೀಯ ತಪಾಸಣೆ ಮಾಡಿಸಿ, ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಬಂಡೀಪುರ ಅಥವಾ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಬಿಡಲಾಗುವುದು ಎಂದು ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. </p><p>ಮಂಡ್ಯ ತಾಲ್ಲೂಕಿನ ಕಬ್ಬಿನ ಗದ್ದೆಗಳಲ್ಲಿ ಚಿರತೆಗಳು ಮರಿಗಳನ್ನು ಹಾಕುವುದು ಹಾಗೂ ನಾಯಿ, ಜಾನುವಾರುಗಳ ಮೇಲೆ ದಾಳಿ ನಡೆಸುವ ಪ್ರಕರಣಗಳು ಜಾಸ್ತಿಯಾಗಿವೆ. ರಾತ್ರಿ ವೇಳೆ ರೈತರು ಹೊಲ, ಗದ್ದೆ, ತೋಟಗಳ ಕಡೆ ಹೋಗಲು ಭಯಪಡುತ್ತಿದ್ದಾರೆ. </p><p>‘ಚಿರತೆ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಮಾನವ–ವನ್ಯಜೀವಿ ಸಂಘರ್ಷ ಪ್ರಕರಣಗಳನ್ನು ನಿಯಂತ್ರಿಸಬೇಕು’ ಎಂದು ಕೆ.ಗೌಡಗೆರೆ ಗ್ರಾಮಸ್ಥರು ಮತ್ತು ರೈತ ಮುಖಂಡರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ತಾಲ್ಲೂಕಿನ ಕೆರಗೋಡು ಹೋಬಳಿಯ ಕೆ.ಗೌಡಗೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಇಟ್ಟಿದ್ದ ಬೋನಿನಲ್ಲಿ ಭಾನುವಾರ ಮುಂಜಾನೆ ಗಂಡು ಚಿರತೆ ಸೆರೆಯಾಗಿದೆ. </p><p>ಕೆ.ಗೌಡಗೆರೆ ಗ್ರಾಮದ ಪ್ರಕಾಶ್ ಎಂಬುವವರು ಕಬ್ಬಿನ ಗದ್ದೆಯಲ್ಲಿ ಚಿರತೆ ಸಂಚಾರ ಕಂಡುಬಂದಿದೆ ಎಂದು ಅರಣ್ಯ ಇಲಾಖೆಗೆ ಶುಕ್ರವಾರ ಮಾಹಿತಿ ನೀಡಿದ್ದರು. </p><p>ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಕಬ್ಬಿನ ಗದ್ದೆಯಲ್ಲಿ ಬೋನು ಇಟ್ಟು ನಾಯಿಯನ್ನು ಕಟ್ಟಿದ್ದರು. ನಾಯಿ ತಿನ್ನುವ ಆಸೆಯಿಂದ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. </p><p>ಚಿರತೆಗೆ ವೈದ್ಯಕೀಯ ತಪಾಸಣೆ ಮಾಡಿಸಿ, ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಬಂಡೀಪುರ ಅಥವಾ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಬಿಡಲಾಗುವುದು ಎಂದು ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. </p><p>ಮಂಡ್ಯ ತಾಲ್ಲೂಕಿನ ಕಬ್ಬಿನ ಗದ್ದೆಗಳಲ್ಲಿ ಚಿರತೆಗಳು ಮರಿಗಳನ್ನು ಹಾಕುವುದು ಹಾಗೂ ನಾಯಿ, ಜಾನುವಾರುಗಳ ಮೇಲೆ ದಾಳಿ ನಡೆಸುವ ಪ್ರಕರಣಗಳು ಜಾಸ್ತಿಯಾಗಿವೆ. ರಾತ್ರಿ ವೇಳೆ ರೈತರು ಹೊಲ, ಗದ್ದೆ, ತೋಟಗಳ ಕಡೆ ಹೋಗಲು ಭಯಪಡುತ್ತಿದ್ದಾರೆ. </p><p>‘ಚಿರತೆ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಮಾನವ–ವನ್ಯಜೀವಿ ಸಂಘರ್ಷ ಪ್ರಕರಣಗಳನ್ನು ನಿಯಂತ್ರಿಸಬೇಕು’ ಎಂದು ಕೆ.ಗೌಡಗೆರೆ ಗ್ರಾಮಸ್ಥರು ಮತ್ತು ರೈತ ಮುಖಂಡರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>