ಗ್ರಾಮದ ಶ್ರೀನಿವಾಸ್ ಎಂಬುವವರ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಕಾಣಿಸಿಕೊಂಡವು. ಮೂರು ಮರಿಗಳಲ್ಲಿ ಒಂದು ಚಿರತೆ ಮರಿ ಗ್ರಾಮಸ್ಥರಿಗೆ ಸಿಕ್ಕಿದ್ದು ಅದನ್ನು ರಕ್ಷಣೆ ಮಾಡಿದ್ದಾರೆ. ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಯ ಸುಪರ್ದಿಗೆ ನೀಡಿದ್ದಾರೆ. ಇನ್ನೆರಡು ಮರಿಗಳನ್ನು ತಾಯಿ ಚಿರತೆ ಕಚ್ಚಿಕೊಂಡು ಹೋಗಿದೆ. ಚಿರತೆಗಳು ಗದ್ದೆಯಲ್ಲೇ ಇರುವ ಕಾರಣ ಗ್ರಾಮಸ್ಥರು ಭಯಭೀತರಾಗಿದ್ದಾರೆ.