<p><strong>ಮದ್ದೂರು:</strong> ತಾಲ್ಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನ್ನಲ್ಲಿ ಸೋಮವಾರ ರಾತ್ರಿ ಚಿರತೆ ಸೆರೆಯಾಗಿದೆ.</p>.<p>ಗ್ರಾಮದ ಹೊನ್ನೇಗೌಡ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಚಿರತೆ ಸಿಕ್ಕಿದೆ. ಹಲವು ದಿನಗಳಿಂದ ಚಿಕ್ಕದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿ ಮೇಕೆಗಳನ್ನು ತಿಂದು ಹಾಕಿತ್ತು. ಇದರಿಂದ ಈ ಭಾಗದ ಗ್ರಾಮಸ್ಥರು ಭೀತಿಗೊಳಗಾಗಿದ್ದರು.ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಬೋನ್ ಇಡಲಾಗಿತ್ತು.</p>.<p>ಚಿರತೆ ಸೆರೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಇನ್ನು ಹಲವಾರು ಚಿರತೆಗಳು ಇದ್ದು ಅವುಗಳನ್ನೂ ಹಿಡಿಯಲು ಅರಣ್ಯಾಧಿಕಾರಿಗಳು ಆಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<p>ಸ್ಥಳಕ್ಕೆ ತಾಲ್ಲೂಕು ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತಾ, ಗಸ್ತುಪಾಲಕ ಚಿನ್ನಪ್ಪ ಹಾಗೂ ಸಿಬ್ಬಂದಿ ಆಗಮಿಸಿ ಚಿರತೆ ಸೆರೆ ಹಿಡಿದು ಮೇಲಾಧಿಕಾರಿಗಳ ಆದೇಶ ಮೇರೆಗೆ ಚಿರತೆಯನ್ನು ಬಂಡಿಪುರ ಅರಣ್ಯ ಪ್ರದೇಶಕ್ಕೆ ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ತಾಲ್ಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನ್ನಲ್ಲಿ ಸೋಮವಾರ ರಾತ್ರಿ ಚಿರತೆ ಸೆರೆಯಾಗಿದೆ.</p>.<p>ಗ್ರಾಮದ ಹೊನ್ನೇಗೌಡ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಚಿರತೆ ಸಿಕ್ಕಿದೆ. ಹಲವು ದಿನಗಳಿಂದ ಚಿಕ್ಕದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿ ಮೇಕೆಗಳನ್ನು ತಿಂದು ಹಾಕಿತ್ತು. ಇದರಿಂದ ಈ ಭಾಗದ ಗ್ರಾಮಸ್ಥರು ಭೀತಿಗೊಳಗಾಗಿದ್ದರು.ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಬೋನ್ ಇಡಲಾಗಿತ್ತು.</p>.<p>ಚಿರತೆ ಸೆರೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಇನ್ನು ಹಲವಾರು ಚಿರತೆಗಳು ಇದ್ದು ಅವುಗಳನ್ನೂ ಹಿಡಿಯಲು ಅರಣ್ಯಾಧಿಕಾರಿಗಳು ಆಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<p>ಸ್ಥಳಕ್ಕೆ ತಾಲ್ಲೂಕು ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತಾ, ಗಸ್ತುಪಾಲಕ ಚಿನ್ನಪ್ಪ ಹಾಗೂ ಸಿಬ್ಬಂದಿ ಆಗಮಿಸಿ ಚಿರತೆ ಸೆರೆ ಹಿಡಿದು ಮೇಲಾಧಿಕಾರಿಗಳ ಆದೇಶ ಮೇರೆಗೆ ಚಿರತೆಯನ್ನು ಬಂಡಿಪುರ ಅರಣ್ಯ ಪ್ರದೇಶಕ್ಕೆ ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>