ಇಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ತಾನು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡಿಯೇ ಇಲ್ಲ ಎಂದು ಅವರು ಪ್ರಮಾಣ ಮಾಡಲಿ. ಧರ್ಮಸ್ಥಳ ಸೇರಿದಂತೆ ಯಾವುದೇ ದೇವಾಲಯಕ್ಕೆ ಬರಲಿ, ನಾವೂ ಪ್ರಮಾಣಕ್ಕೆ ಸಿದ್ಧರಿದ್ದೇವೆ. ಕುಮಾರಸ್ವಾಮಿಗೆ ಬೇರೆ ಕೆಲಸವಿಲ್ಲ; ಹೀಗಾಗಿ ಬೇಡದ ವಿಚಾರಗಳನ್ನು ಮಾತನಾಡುತ್ತಿದ್ದಾರೆ’ ಎಂದರು.