<p><strong>ಮಂಡ್ಯ:</strong> ‘ಕೆರೆ ಕಟ್ಟೆಗಳು ರೈತರ ಜೀವನಾಡಿ, ಕೆರೆಗಳು ತುಂಬಿದರೆ ರೈತರು ತಮ್ಮ ಕೃಷಿ ಪದ್ಧತಿಗಳನ್ನು ನಡೆಸಲು ಅನುಕೂಲವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಶನಿವಾರ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಕೆರೆಗಳ ಸುತ್ತ ಒತ್ತುವರಿ ತೆರವುಗೊಳಿಸಿದ ನಂತರ ಅದರ ಸುತ್ತ ಗಿಡಗಳನ್ನು ನೆಡಿ, ಪಕ್ಷಿಗಳು ಗೂಡು ಕಟ್ಟಿ ಆಹಾರ ಪಡೆಯುವ ಗಿಡಗಳನ್ನು ನೆಟ್ಟಿ ಬಳಸಿ ಎಂದರು.</p>.<p>ಉತ್ತಮ ಮಳೆಯ ಹಿನ್ನೆಲೆಯಲ್ಲಿ ಬಿತ್ತನೆ ಕೂಡ ಚೆನ್ನಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗದಂತೆ ನೋಡಿಕೊಳ್ಳಿ. ಜಿಲ್ಲೆಯಲ್ಲಿ ಕೃಷಿ ಸರ್ವೆ ನಡೆಸಲು ಯಾವುದೇ ತೊಂದರೆಗಳಿಲ್ಲ. ಬೆಳೆ ಸರ್ವೆ ಶೇ 100ರಷ್ಟು ಆಗಬೇಕು ಎಂದರು.</p>.<p>ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಾವುದೇ ತೊಂದರೆಯಾಗದಂತೆ ಅನುಷ್ಠಾನಗೊಳ್ಳಬೇಕು. ಈ ಯೋಜನೆಯ ಕಾಮಗಾರಿಯ ನಿರಂತರ ಪರಿಶೀಲನೆಗೆ ಅಧಿಕಾರಿಗಳನ್ನು ನಿಯೋಜಿಸಿ. ಕುಡಿಯುವ ನೀರು ಎಲ್ಲೂ ಕಲುಷಿತವಾಗದಂತೆ ನೋಡಿಕೊಳ್ಳಬೇಕು ಎಂದರು.</p>.<p>ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸಲು ಯೋಜನೆ ರೂಪಿಸಿ. ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಲು ಸಜ್ಜುಗೊಳಿಸಿ ಎಂದರು.</p>.<p>ವಸತಿ ಯೋಜನೆಗೆ ಸಂಬಂಧಿಸಿದಂತೆ ರಾಜೀವ್ ಗಂಧಿ ವಸತಿ ಯೋಜನೆಯಡಿ ಅನುದಾನ ಲಭ್ಯವಿದ್ದು, ಪ್ರಗತಿಯಾಗಬೇಕಿದೆ. ಕಡಿಮೆ ಸಾಧನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಟ್ಟಿ ಮಾಡಿಕೊಂಡು ಪ್ರತಿ ದಿನ ಆನ್ ಲೈನ್ ಸಭೆ ನಡೆಸಿ ನಿಗದಿತ ಗುರಿ ಸಾಧಿಸುವಂತೆ ಮಾಡಿ ಎಂದರು.</p>.<p>ಜಿಲ್ಲಾಧಿಕಾರಿ ಕುಮಾರ ಅವರು ಲ್ಯಾಂಡ್ ಬೀಟ್, ಆಧಾರ್ ಸೀಡಿಂಗ್, ಬಗರ್ ಹುಕಂ, ಗೃಹಲಕ್ಷ್ಮಿ , ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕೋಟ್೯ಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ಇತರೆ ಯೋಜನೆಯ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ನರೇಗಾ, ಸ್ವಚ್ಛ ಭಾರತ್ ಮಿಷನ್, ಬಹುಗ್ರಾಮ ಕುಡಿಯುವ ನೀರು, ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಎಚ್.ಎಲ್. ನಾಗರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಕೆರೆ ಕಟ್ಟೆಗಳು ರೈತರ ಜೀವನಾಡಿ, ಕೆರೆಗಳು ತುಂಬಿದರೆ ರೈತರು ತಮ್ಮ ಕೃಷಿ ಪದ್ಧತಿಗಳನ್ನು ನಡೆಸಲು ಅನುಕೂಲವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಶನಿವಾರ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಕೆರೆಗಳ ಸುತ್ತ ಒತ್ತುವರಿ ತೆರವುಗೊಳಿಸಿದ ನಂತರ ಅದರ ಸುತ್ತ ಗಿಡಗಳನ್ನು ನೆಡಿ, ಪಕ್ಷಿಗಳು ಗೂಡು ಕಟ್ಟಿ ಆಹಾರ ಪಡೆಯುವ ಗಿಡಗಳನ್ನು ನೆಟ್ಟಿ ಬಳಸಿ ಎಂದರು.</p>.<p>ಉತ್ತಮ ಮಳೆಯ ಹಿನ್ನೆಲೆಯಲ್ಲಿ ಬಿತ್ತನೆ ಕೂಡ ಚೆನ್ನಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗದಂತೆ ನೋಡಿಕೊಳ್ಳಿ. ಜಿಲ್ಲೆಯಲ್ಲಿ ಕೃಷಿ ಸರ್ವೆ ನಡೆಸಲು ಯಾವುದೇ ತೊಂದರೆಗಳಿಲ್ಲ. ಬೆಳೆ ಸರ್ವೆ ಶೇ 100ರಷ್ಟು ಆಗಬೇಕು ಎಂದರು.</p>.<p>ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಾವುದೇ ತೊಂದರೆಯಾಗದಂತೆ ಅನುಷ್ಠಾನಗೊಳ್ಳಬೇಕು. ಈ ಯೋಜನೆಯ ಕಾಮಗಾರಿಯ ನಿರಂತರ ಪರಿಶೀಲನೆಗೆ ಅಧಿಕಾರಿಗಳನ್ನು ನಿಯೋಜಿಸಿ. ಕುಡಿಯುವ ನೀರು ಎಲ್ಲೂ ಕಲುಷಿತವಾಗದಂತೆ ನೋಡಿಕೊಳ್ಳಬೇಕು ಎಂದರು.</p>.<p>ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸಲು ಯೋಜನೆ ರೂಪಿಸಿ. ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಲು ಸಜ್ಜುಗೊಳಿಸಿ ಎಂದರು.</p>.<p>ವಸತಿ ಯೋಜನೆಗೆ ಸಂಬಂಧಿಸಿದಂತೆ ರಾಜೀವ್ ಗಂಧಿ ವಸತಿ ಯೋಜನೆಯಡಿ ಅನುದಾನ ಲಭ್ಯವಿದ್ದು, ಪ್ರಗತಿಯಾಗಬೇಕಿದೆ. ಕಡಿಮೆ ಸಾಧನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಟ್ಟಿ ಮಾಡಿಕೊಂಡು ಪ್ರತಿ ದಿನ ಆನ್ ಲೈನ್ ಸಭೆ ನಡೆಸಿ ನಿಗದಿತ ಗುರಿ ಸಾಧಿಸುವಂತೆ ಮಾಡಿ ಎಂದರು.</p>.<p>ಜಿಲ್ಲಾಧಿಕಾರಿ ಕುಮಾರ ಅವರು ಲ್ಯಾಂಡ್ ಬೀಟ್, ಆಧಾರ್ ಸೀಡಿಂಗ್, ಬಗರ್ ಹುಕಂ, ಗೃಹಲಕ್ಷ್ಮಿ , ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕೋಟ್೯ಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ಇತರೆ ಯೋಜನೆಯ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ನರೇಗಾ, ಸ್ವಚ್ಛ ಭಾರತ್ ಮಿಷನ್, ಬಹುಗ್ರಾಮ ಕುಡಿಯುವ ನೀರು, ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಎಚ್.ಎಲ್. ನಾಗರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>