<p>ನಾಗಮಂಗಲ: ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ ನೀಡಿದರು.</p>.<p>ತಾಲ್ಲೂಕಿನ ತುಪ್ಪದಮಡು ಗ್ರಾಮದಲ್ಲಿ ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗುರುವಾರ ನಡೆದ ಮತ್ಸ್ಯ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮತ್ಸ್ಯ ಸಂಜೀವಿನಿ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಮಹಿಳೆಯರ ಆರ್ಥಿಕ ಅಭಿವೃದ್ಧಿ ಮತ್ತು ಕುಟುಂಬ ನಿರ್ವಹಣೆಗೆ ಮತ್ಸ್ಯ ಸಂಜೀವಿನಿ ಯೋಜನೆ ಸಹಕಾರಿಯಾಗಲಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಒಟ್ಟು 250 ಮಹಿಳಾ ಸದಸ್ಯರನ್ನೊಳಗೊಂಡ 49 ಸ್ವಸಹಾಯ ಗುಂಪುಗಳು ಮತ್ತು 49 ಕೆರೆಗಳನ್ನು ಮತ್ಸ್ಯ ಸಂಜೀವಿನಿ ಯೋಜನೆಗೆ ಆಯ್ಕೆ ಮಾಡಿ ಒಟ್ಟು 9 ಲಕ್ಷ ಮೀನು ಮರಿಗಳನ್ನು ಕರೆಗಳಿಗೆ ಬಿಟ್ಟು ಸಾಕಾಣಿಕೆ ಮಾಡಿಸುವ ಗುರಿ ಹೊಂದಲಾಗಿದೆ. ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ತುಪ್ಪದಮಡು, ಕಾಳಿಂಗನಹಳ್ಳಿ, ದೇವರಮಲ್ಲನಾಯ್ಕನಹಳ್ಳಿ, ಭೀಮನಹಳ್ಳಿ ಹಾಗೂ ದೊಡ್ಡಾಬಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 5 ಕೆರೆಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ತುಪ್ಪದಮಡು ಗ್ರಾಮದ ಚಿಕ್ಕಕೆರೆಗೆ ಯೋಜನೆಯ ಹತ್ತು ಸಾವಿರ ಮೀನು ಮರಿಗಳನ್ನು ಸಚಿವರು ಕೆರೆಗೆ ಬಿಟ್ಟರು. ಗ್ರಾಮದ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ತಯಾರಿಸುವ ಆಹಾರ ಉತ್ಪನ್ನಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕೃತ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಿ.ಎಚ್.ಬಾಬಾಸಾಬ್, ತಾ.ಪಂ. ಇಒ ಬಿ.ಎಸ್.ಸತೀಶ್, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್, ಮುಖಂಡರಾದ ಎಂ.ರಾಘವೇಂದ್ರ, ಚಿಕ್ಕಮ್ಮ, ಗೀತಾ, ಕಾಂತ, ಪುಟ್ಟಸ್ವಾಮಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಮಂಗಲ: ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ ನೀಡಿದರು.</p>.<p>ತಾಲ್ಲೂಕಿನ ತುಪ್ಪದಮಡು ಗ್ರಾಮದಲ್ಲಿ ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗುರುವಾರ ನಡೆದ ಮತ್ಸ್ಯ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮತ್ಸ್ಯ ಸಂಜೀವಿನಿ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಮಹಿಳೆಯರ ಆರ್ಥಿಕ ಅಭಿವೃದ್ಧಿ ಮತ್ತು ಕುಟುಂಬ ನಿರ್ವಹಣೆಗೆ ಮತ್ಸ್ಯ ಸಂಜೀವಿನಿ ಯೋಜನೆ ಸಹಕಾರಿಯಾಗಲಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಒಟ್ಟು 250 ಮಹಿಳಾ ಸದಸ್ಯರನ್ನೊಳಗೊಂಡ 49 ಸ್ವಸಹಾಯ ಗುಂಪುಗಳು ಮತ್ತು 49 ಕೆರೆಗಳನ್ನು ಮತ್ಸ್ಯ ಸಂಜೀವಿನಿ ಯೋಜನೆಗೆ ಆಯ್ಕೆ ಮಾಡಿ ಒಟ್ಟು 9 ಲಕ್ಷ ಮೀನು ಮರಿಗಳನ್ನು ಕರೆಗಳಿಗೆ ಬಿಟ್ಟು ಸಾಕಾಣಿಕೆ ಮಾಡಿಸುವ ಗುರಿ ಹೊಂದಲಾಗಿದೆ. ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ತುಪ್ಪದಮಡು, ಕಾಳಿಂಗನಹಳ್ಳಿ, ದೇವರಮಲ್ಲನಾಯ್ಕನಹಳ್ಳಿ, ಭೀಮನಹಳ್ಳಿ ಹಾಗೂ ದೊಡ್ಡಾಬಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 5 ಕೆರೆಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ತುಪ್ಪದಮಡು ಗ್ರಾಮದ ಚಿಕ್ಕಕೆರೆಗೆ ಯೋಜನೆಯ ಹತ್ತು ಸಾವಿರ ಮೀನು ಮರಿಗಳನ್ನು ಸಚಿವರು ಕೆರೆಗೆ ಬಿಟ್ಟರು. ಗ್ರಾಮದ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ತಯಾರಿಸುವ ಆಹಾರ ಉತ್ಪನ್ನಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕೃತ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಿ.ಎಚ್.ಬಾಬಾಸಾಬ್, ತಾ.ಪಂ. ಇಒ ಬಿ.ಎಸ್.ಸತೀಶ್, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್, ಮುಖಂಡರಾದ ಎಂ.ರಾಘವೇಂದ್ರ, ಚಿಕ್ಕಮ್ಮ, ಗೀತಾ, ಕಾಂತ, ಪುಟ್ಟಸ್ವಾಮಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>