<p><strong>ಶ್ರೀರಂಗಪಟ್ಟಣ</strong>: ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ದೊಡ್ಡ ಖಾತೆ ಹೊಂದಿದ್ದು, ಜಿಲ್ಲೆಯ ಅಭಿವೃದ್ಧಿ ಮತ್ತು ಕಾವೇರಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಅವರಿಗೆ ಸುದೀರ್ಘ ಪತ್ರ ಬರೆಯುತ್ತೇನೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಕೆಆರ್ಎಸ್ನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾವೇರಿ ನದಿ ನೀರಿನ ವಿಷಯ ಮೂರ್ನಾಲ್ಕು ದಶಕಗಳಿಂದ ನನೆಗುದಿಗೆ ಬಿದ್ದಿದೆ ಎಂದು ಅವರೇ ಹೇಳಿದ್ದಾರೆ. ಈ ವಿಷಯದಲ್ಲಿ ನನಗೆ ಗೊತ್ತಿರುವ ಮಾಹಿತಿ ಸಂಗ್ರಹಿಸಿ ಅವರಿಗೆ ಕೊಡುತ್ತೇನೆ. ಕಾವೇರಿ ನದಿ ನೀರಿನ ಸಮಸ್ಯೆಗೆ ಅವರು ಪರಿಹಾರ ಹುಡಕಬೇಕು. ಮೇಕೆದಾಟು ಯೋಜನೆಗೆ ಅವರು ನಾಳೆ ಅನುಮತಿ ಕೊಡಿಸಿದರೆ ಸರ್ಕಾರ ನಾಡಿದ್ದೇ ಟೆಂಡರ್ ಕರೆಯುತ್ತದೆ ಎಂದು ಹೇಳಿದರು.</p>.<p>ಮಂಡ್ಯದ ಮೈಷುಗರ್ ಕಾರ್ಖಾನೆಗೆ ಕುಮಾರಸ್ವಾಮಿ ಅವರು ಕೇಂದ್ರದಿಂದ ಅನುದಾನ ಕೊಡಿಸಿದರೆ ಅವರನ್ನು ಅಭಿನಂದಿಸುತ್ತೇನೆ. ಜಿಲ್ಲೆಯಲ್ಲಿ, ಕಾವೇರಿ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅದಕ್ಕಾಗಿ ಕೇಂದ್ರ ಸರ್ಕಾರದಿಂದ ₹5 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿಸುವಂತೆ ಕುಮಾರಸ್ವಾಮಿ ಹಾಗೂ ಕೇಂದ್ರದ ಜಲ ಸಂಪನ್ಮೂಲ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರದಿಂದ ಆಗಬೇಕಾದ ಕಾರ್ಯಗಳ ಬಗ್ಗೆ ಕುಮಾರಸ್ವಾಮಿ ಅವರು ಪತ್ರ ಬರೆದರೆ ಅಥವಾ ಮಾಧ್ಯಮದ ಮೂಲಕ ತಿಳಿಸಿದರೂ ಸ್ಪಂದಿಸುತ್ತೇನೆ. ಅವರ ಎಲ್ಲ ಜನಪರ ಕಾರ್ಯಗಳಿಗೆ ನನ್ನ ಮತ್ತು ಜಿಲ್ಲೆಯ ಶಾಸಕರ ಸಹಕಾರ ಇರುತ್ತದೆ ಎಂದು ಸಚಿವರು ಹೇಳಿದರು.</p>.<p>ಎಚ್ಎಎಲ್, ಬಿಇಎಲ್ ಇನ್ನಿತರ ಕೇಂದ್ರ ಸರ್ಕಾರದ ಉದ್ಯಮಗಳಲ್ಲಿ 10 ಸಾವಿರ ಮಂದಿಗೆ ಕುಮಾರಸ್ವಾಮಿ ಅವರು ಕೆಲವೇ ದಿನಗಳಲ್ಲಿ ಕೆಲಸ ಕೊಡಿಸಲಿದ್ದು, ಪಟ್ಟಿ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಡೆಯವರು ಹೇಳುತ್ತಿದ್ದಾರೆ. ಹಾಗಾದರೆ ನಮಗೂ ಸಂತೋಷ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ದೊಡ್ಡ ಖಾತೆ ಹೊಂದಿದ್ದು, ಜಿಲ್ಲೆಯ ಅಭಿವೃದ್ಧಿ ಮತ್ತು ಕಾವೇರಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಅವರಿಗೆ ಸುದೀರ್ಘ ಪತ್ರ ಬರೆಯುತ್ತೇನೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಕೆಆರ್ಎಸ್ನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾವೇರಿ ನದಿ ನೀರಿನ ವಿಷಯ ಮೂರ್ನಾಲ್ಕು ದಶಕಗಳಿಂದ ನನೆಗುದಿಗೆ ಬಿದ್ದಿದೆ ಎಂದು ಅವರೇ ಹೇಳಿದ್ದಾರೆ. ಈ ವಿಷಯದಲ್ಲಿ ನನಗೆ ಗೊತ್ತಿರುವ ಮಾಹಿತಿ ಸಂಗ್ರಹಿಸಿ ಅವರಿಗೆ ಕೊಡುತ್ತೇನೆ. ಕಾವೇರಿ ನದಿ ನೀರಿನ ಸಮಸ್ಯೆಗೆ ಅವರು ಪರಿಹಾರ ಹುಡಕಬೇಕು. ಮೇಕೆದಾಟು ಯೋಜನೆಗೆ ಅವರು ನಾಳೆ ಅನುಮತಿ ಕೊಡಿಸಿದರೆ ಸರ್ಕಾರ ನಾಡಿದ್ದೇ ಟೆಂಡರ್ ಕರೆಯುತ್ತದೆ ಎಂದು ಹೇಳಿದರು.</p>.<p>ಮಂಡ್ಯದ ಮೈಷುಗರ್ ಕಾರ್ಖಾನೆಗೆ ಕುಮಾರಸ್ವಾಮಿ ಅವರು ಕೇಂದ್ರದಿಂದ ಅನುದಾನ ಕೊಡಿಸಿದರೆ ಅವರನ್ನು ಅಭಿನಂದಿಸುತ್ತೇನೆ. ಜಿಲ್ಲೆಯಲ್ಲಿ, ಕಾವೇರಿ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅದಕ್ಕಾಗಿ ಕೇಂದ್ರ ಸರ್ಕಾರದಿಂದ ₹5 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿಸುವಂತೆ ಕುಮಾರಸ್ವಾಮಿ ಹಾಗೂ ಕೇಂದ್ರದ ಜಲ ಸಂಪನ್ಮೂಲ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರದಿಂದ ಆಗಬೇಕಾದ ಕಾರ್ಯಗಳ ಬಗ್ಗೆ ಕುಮಾರಸ್ವಾಮಿ ಅವರು ಪತ್ರ ಬರೆದರೆ ಅಥವಾ ಮಾಧ್ಯಮದ ಮೂಲಕ ತಿಳಿಸಿದರೂ ಸ್ಪಂದಿಸುತ್ತೇನೆ. ಅವರ ಎಲ್ಲ ಜನಪರ ಕಾರ್ಯಗಳಿಗೆ ನನ್ನ ಮತ್ತು ಜಿಲ್ಲೆಯ ಶಾಸಕರ ಸಹಕಾರ ಇರುತ್ತದೆ ಎಂದು ಸಚಿವರು ಹೇಳಿದರು.</p>.<p>ಎಚ್ಎಎಲ್, ಬಿಇಎಲ್ ಇನ್ನಿತರ ಕೇಂದ್ರ ಸರ್ಕಾರದ ಉದ್ಯಮಗಳಲ್ಲಿ 10 ಸಾವಿರ ಮಂದಿಗೆ ಕುಮಾರಸ್ವಾಮಿ ಅವರು ಕೆಲವೇ ದಿನಗಳಲ್ಲಿ ಕೆಲಸ ಕೊಡಿಸಲಿದ್ದು, ಪಟ್ಟಿ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಡೆಯವರು ಹೇಳುತ್ತಿದ್ದಾರೆ. ಹಾಗಾದರೆ ನಮಗೂ ಸಂತೋಷ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>