<p><strong>ಮಂಡ್ಯ:</strong> ‘ಗ್ರಂಥಾಲಯಗಳು ಜ್ಞಾನ ಸಾಗರವಾದರೆ, ಗ್ರಂಥಪಾಲಕರು ಜ್ಞಾನ ಸಾಗರದ ನಾವಿಕರಂತೆ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಅವರು ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕಿವಿಮಾತು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಂಥಪಾಲಕರ ದಿನಾಚರಣೆ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಗ್ರಂಥಾಲಯಗಳನ್ನು ಸ್ಥಾಪನೆ ಮಾಡುವಷ್ಟೇ ಮುಖ್ಯವಾದುದು ಗ್ರಂಥಾಲಯಗಳನ್ನು ನಿರ್ವಹಣೆ ಮಾಡುವುದಾಗಿರುತ್ತದೆ. ಈ ನಿಟ್ಟಿನಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ವೇತನ ಮತ್ತು ಇತರ ಭತ್ಯೆಗಳನ್ನು ಕಾಲಕಾಲಕ್ಕೆ ಬಿಡುಗಡೆ ಮಾಡಲು ಕ್ರಮವಹಿಸಲಾಗುತ್ತಿದೆ. ಹೊಸ ಗ್ರಂಥಾಲಯಗಳನ್ನು ಸ್ಥಾಪಿಸಿ ಅವುಗಳಿಗೆ ಅಗತ್ಯ ಪೀಠೋಪಕರಣಗಳನ್ನು ಒದಗಿಸಲಾಗಿದೆ. ಗ್ರಂಥಾಲಯಗಳಿಗೆ ಅಗತ್ಯವಿರುವ ಪುಸ್ತಕಗಳನ್ನು ನೀಡಲಾಗಿದ್ದು, ಗ್ರಂಥಾಲಯಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಲು ಸಹ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.</p>.<h2>ಗ್ರಂಥಪಾಲಕರ ದಿನಾಚರಣೆ:</h2>.<p>ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಆಚರಿಸಲು ಉದ್ದೇಶಿಸಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಜಿಲ್ಲೆಯ ಕೆಲವು ಗ್ರಂಥಾಲಯ ಮೇಲ್ವಿಚಾರಕರಿಗೆ ತರಬೇತಿ ಇದ್ದ ಕಾರಣ ಇಂದು ಗ್ರಂಥಪಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಂದಿನಿ ತಿಳಿಸಿದರು.</p>.<p>ಬೇಸಿಗೆ ಶೀಬಿರ ಆಯೋಜನೆ ಮತ್ತು ಗ್ರಂಥಾಲಯಗಳಲ್ಲಿ ವಿವಿಧ ವಿನೂತನ ಕಾರ್ಯಕ್ರಮಗಳ ಆಯೋಜನೆ ಆಧಾರದಲ್ಲಿ ಪ್ರತಿ ತಾಲ್ಲೂಕಿನ 3 ಗ್ರಂಥಪಾಲಕರಿಗೆ ಅಭಿನಂದನಾ ಪತ್ರವನ್ನು ವಿತರಿಸಲಾಯಿತು.</p>.<p>ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಮಿ ಪಿ, ಸಹಾಯಕ ಕಾರ್ಯದರ್ಶಿಗಳಾದ ಚಂದ್ರು, ರವೀಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಷ್ಮಾ, ವೀಣಾ, ಶ್ರೀನಿವಾಸ್, ಲೋಕೇಶ್ ಮೂರ್ತಿ, ವೇಣು ಹಾಜರಿದ್ದರು.</p>.<h2> ‘ವಿನೂತನ ಚಟುವಟಿಕೆ ಆಯೋಜಿಸಿ’</h2><h2></h2><p> ಎಲ್ಲ ಗ್ರಂಥಪಾಲಕರು ಈ ಹಿಂದೆ ನಡೆದ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದ್ದು ಅದರಂತೆ ಪ್ರತೀ ತಿಂಗಳು ವಿನೂತನ ಚಟುವಟಿಕೆಗಳನ್ನು ಆಯೋಜಿಸಿ ಅನುಷ್ಠಾನಗೊಳಿಸುವಂತೆ ಸಿಇಒ ನಂದಿನಿ ಕೆ.ಆರ್. ಸೂಚಿಸಿದರು. ಸೆಪ್ಟೆಂಬರ್ನಲ್ಲಿ ಮಾದಕ ಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು ಈ ಅಭಿಯಾನದಲ್ಲಿ ಗ್ರಂಥಪಾಲಕರು ಗ್ರಾಮ ಪಂಚಾಯಿತಿಗಳಿಗೆ ಸಹಕರಿಸಿ ಅಭಿಯಾನವನ್ನು ಯಶಸ್ವಿಗೊಳಿಸಲು ಸೂಚಿಸಿದರು. ನಿರುದ್ಯೋಗಿ ಯುವಕ– ಯುವತಿಯರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳ್ಳಲು ಹಾಗೂ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ ಗ್ರಂಥಾಲಯಗಳು ಕಾರ್ಯನಿರ್ವಹಿಸಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಗ್ರಂಥಾಲಯಗಳು ಜ್ಞಾನ ಸಾಗರವಾದರೆ, ಗ್ರಂಥಪಾಲಕರು ಜ್ಞಾನ ಸಾಗರದ ನಾವಿಕರಂತೆ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಅವರು ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕಿವಿಮಾತು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಂಥಪಾಲಕರ ದಿನಾಚರಣೆ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಗ್ರಂಥಾಲಯಗಳನ್ನು ಸ್ಥಾಪನೆ ಮಾಡುವಷ್ಟೇ ಮುಖ್ಯವಾದುದು ಗ್ರಂಥಾಲಯಗಳನ್ನು ನಿರ್ವಹಣೆ ಮಾಡುವುದಾಗಿರುತ್ತದೆ. ಈ ನಿಟ್ಟಿನಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ವೇತನ ಮತ್ತು ಇತರ ಭತ್ಯೆಗಳನ್ನು ಕಾಲಕಾಲಕ್ಕೆ ಬಿಡುಗಡೆ ಮಾಡಲು ಕ್ರಮವಹಿಸಲಾಗುತ್ತಿದೆ. ಹೊಸ ಗ್ರಂಥಾಲಯಗಳನ್ನು ಸ್ಥಾಪಿಸಿ ಅವುಗಳಿಗೆ ಅಗತ್ಯ ಪೀಠೋಪಕರಣಗಳನ್ನು ಒದಗಿಸಲಾಗಿದೆ. ಗ್ರಂಥಾಲಯಗಳಿಗೆ ಅಗತ್ಯವಿರುವ ಪುಸ್ತಕಗಳನ್ನು ನೀಡಲಾಗಿದ್ದು, ಗ್ರಂಥಾಲಯಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಲು ಸಹ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.</p>.<h2>ಗ್ರಂಥಪಾಲಕರ ದಿನಾಚರಣೆ:</h2>.<p>ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಆಚರಿಸಲು ಉದ್ದೇಶಿಸಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಜಿಲ್ಲೆಯ ಕೆಲವು ಗ್ರಂಥಾಲಯ ಮೇಲ್ವಿಚಾರಕರಿಗೆ ತರಬೇತಿ ಇದ್ದ ಕಾರಣ ಇಂದು ಗ್ರಂಥಪಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಂದಿನಿ ತಿಳಿಸಿದರು.</p>.<p>ಬೇಸಿಗೆ ಶೀಬಿರ ಆಯೋಜನೆ ಮತ್ತು ಗ್ರಂಥಾಲಯಗಳಲ್ಲಿ ವಿವಿಧ ವಿನೂತನ ಕಾರ್ಯಕ್ರಮಗಳ ಆಯೋಜನೆ ಆಧಾರದಲ್ಲಿ ಪ್ರತಿ ತಾಲ್ಲೂಕಿನ 3 ಗ್ರಂಥಪಾಲಕರಿಗೆ ಅಭಿನಂದನಾ ಪತ್ರವನ್ನು ವಿತರಿಸಲಾಯಿತು.</p>.<p>ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಮಿ ಪಿ, ಸಹಾಯಕ ಕಾರ್ಯದರ್ಶಿಗಳಾದ ಚಂದ್ರು, ರವೀಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಷ್ಮಾ, ವೀಣಾ, ಶ್ರೀನಿವಾಸ್, ಲೋಕೇಶ್ ಮೂರ್ತಿ, ವೇಣು ಹಾಜರಿದ್ದರು.</p>.<h2> ‘ವಿನೂತನ ಚಟುವಟಿಕೆ ಆಯೋಜಿಸಿ’</h2><h2></h2><p> ಎಲ್ಲ ಗ್ರಂಥಪಾಲಕರು ಈ ಹಿಂದೆ ನಡೆದ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದ್ದು ಅದರಂತೆ ಪ್ರತೀ ತಿಂಗಳು ವಿನೂತನ ಚಟುವಟಿಕೆಗಳನ್ನು ಆಯೋಜಿಸಿ ಅನುಷ್ಠಾನಗೊಳಿಸುವಂತೆ ಸಿಇಒ ನಂದಿನಿ ಕೆ.ಆರ್. ಸೂಚಿಸಿದರು. ಸೆಪ್ಟೆಂಬರ್ನಲ್ಲಿ ಮಾದಕ ಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು ಈ ಅಭಿಯಾನದಲ್ಲಿ ಗ್ರಂಥಪಾಲಕರು ಗ್ರಾಮ ಪಂಚಾಯಿತಿಗಳಿಗೆ ಸಹಕರಿಸಿ ಅಭಿಯಾನವನ್ನು ಯಶಸ್ವಿಗೊಳಿಸಲು ಸೂಚಿಸಿದರು. ನಿರುದ್ಯೋಗಿ ಯುವಕ– ಯುವತಿಯರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳ್ಳಲು ಹಾಗೂ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ ಗ್ರಂಥಾಲಯಗಳು ಕಾರ್ಯನಿರ್ವಹಿಸಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>