<p><strong>ಮಂಡ್ಯ</strong>: ಲಕ್ಷ್ಮೀವೆಂಕಟೇಶ್ವರ ಪ್ರೊಡಕ್ಷನ್ ಬ್ಯಾನರ್ಡಿ ‘ಬೆಳಕು ನಮ್ಮ ಬದುಕು’ ಸಿನಿಮಾ ಟೈಟಲ್ ಅನ್ನು ಸಿನಿಮಾ ತಂಡವು ಶುಕ್ರವಾರ ಇಲ್ಲಿನ ಪ್ರೆಸ್ಕ್ಲಬ್ನಲ್ಲಿ ಬಿಡುಗಡೆ ಮಾಡಿತು.</p>.<p>‘ಎಂ.ಎಸ್.ರವೀಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಇದೊಂದು ಕಲಾತ್ಮಕ ಮತ್ತು ಕಮರ್ಷಿಯಲ್ ಸಿನಿಮಾವಾಗಿದೆ’ ಎಂದು ನಿರ್ಮಾಪಕಿ ಶ್ವೇತಾ ಸಿ.ಬೆಳವಾಡಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.</p>.<p>‘ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ ಸೇರಿದಂತೆ ಇತರೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾ ಮೂಲಕ ಹಲವು ಪ್ರತಿಭೆಗಳು ಬೆಳ್ಳಿ ತೆರೆಯಲ್ಲಿ ಮಿಂಚಲಿದ್ದಾರೆ. ಜೊತೆಗೆ ಅತ್ಯುತ್ತಮವಾಗಿ ಚಿತ್ರ ನಿರ್ಮಿಸಬೇಕೆಂಬ ಹಂಬಲದಿಂದಲೇ ಸಿನಿಮಾ ಟೈಟಲ್ ಬಿಡುಗಡೆ ಮಾಡಲು ಮುಂದಾಗಿದ್ದು, ಎಲ್ಲರೂ ಆಶೀರ್ವದಿಸಬೇಕು’ ಎಂದು ಮನವಿ ಮಾಡಿದರು.</p>.<p>ನಿರ್ದೇಶಕ ಎಂ.ಎಸ್.ರವೀಂದ್ರ ಮಾತನಾಡಿ, ‘ಕುಟುಂಬದವರೆಲ್ಲರೂ ಕುಳಿತು ನೋಡಬಹುದಾದ ಚಿತ್ರ ಇದಾಗಿದೆ ’ ಎಂದರು.</p>.<p>ಚಿತ್ರತಂಡದ ಜಗನ್ನಾಥ ಶೆಟ್ಟಿ, ನಿವೇದಿತಾ, ಉಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಲಕ್ಷ್ಮೀವೆಂಕಟೇಶ್ವರ ಪ್ರೊಡಕ್ಷನ್ ಬ್ಯಾನರ್ಡಿ ‘ಬೆಳಕು ನಮ್ಮ ಬದುಕು’ ಸಿನಿಮಾ ಟೈಟಲ್ ಅನ್ನು ಸಿನಿಮಾ ತಂಡವು ಶುಕ್ರವಾರ ಇಲ್ಲಿನ ಪ್ರೆಸ್ಕ್ಲಬ್ನಲ್ಲಿ ಬಿಡುಗಡೆ ಮಾಡಿತು.</p>.<p>‘ಎಂ.ಎಸ್.ರವೀಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಇದೊಂದು ಕಲಾತ್ಮಕ ಮತ್ತು ಕಮರ್ಷಿಯಲ್ ಸಿನಿಮಾವಾಗಿದೆ’ ಎಂದು ನಿರ್ಮಾಪಕಿ ಶ್ವೇತಾ ಸಿ.ಬೆಳವಾಡಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.</p>.<p>‘ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ ಸೇರಿದಂತೆ ಇತರೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾ ಮೂಲಕ ಹಲವು ಪ್ರತಿಭೆಗಳು ಬೆಳ್ಳಿ ತೆರೆಯಲ್ಲಿ ಮಿಂಚಲಿದ್ದಾರೆ. ಜೊತೆಗೆ ಅತ್ಯುತ್ತಮವಾಗಿ ಚಿತ್ರ ನಿರ್ಮಿಸಬೇಕೆಂಬ ಹಂಬಲದಿಂದಲೇ ಸಿನಿಮಾ ಟೈಟಲ್ ಬಿಡುಗಡೆ ಮಾಡಲು ಮುಂದಾಗಿದ್ದು, ಎಲ್ಲರೂ ಆಶೀರ್ವದಿಸಬೇಕು’ ಎಂದು ಮನವಿ ಮಾಡಿದರು.</p>.<p>ನಿರ್ದೇಶಕ ಎಂ.ಎಸ್.ರವೀಂದ್ರ ಮಾತನಾಡಿ, ‘ಕುಟುಂಬದವರೆಲ್ಲರೂ ಕುಳಿತು ನೋಡಬಹುದಾದ ಚಿತ್ರ ಇದಾಗಿದೆ ’ ಎಂದರು.</p>.<p>ಚಿತ್ರತಂಡದ ಜಗನ್ನಾಥ ಶೆಟ್ಟಿ, ನಿವೇದಿತಾ, ಉಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>