ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಬಾರ್‌ ಪಾತ್ರೆಗೆ ಹಲ್ಲಿ: 29 ಮಕ್ಕಳಿಗೆ ಚಿಕಿತ್ಸೆ

Last Updated 17 ಸೆಪ್ಟೆಂಬರ್ 2022, 4:18 IST
ಅಕ್ಷರ ಗಾತ್ರ

ಭಾರತೀನಗರ: ಸಾಂಬಾರ್‌ ಪಾತ್ರೆಗೆ ಹಲ್ಲಿ ಬಿದ್ದಿರುವುದನ್ನು ಗಮನಿಸದೆ, ಇಲ್ಲಿನ ಅಂಬರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿಬ್ಬಂದಿ ಬಡಿಸಿದ ಬಿಸಿಯೂಟ ಸೇವಿಸಿದ 29 ಮಕ್ಕಳು ಅಸ್ವಸ್ಥರಾಗಿ ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಕ್ಕಳು ವಾಂತಿ ಮಾಡಿಕೊಂಡ ಕೂಡಲೇ ಮುಖ್ಯಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಾಖಲಿಸಿದರು.

‘ಸಾಂಬಾರಿಗೆ ಹಲ್ಲಿ ಬಿದ್ದಿರುವುದು ಅರಿವಿಗೆ ಬರದೆ ಘಟನೆ ಜರುಗಿದೆ. ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆಂದು ವೈದ್ಯರು ಮಾಹಿತಿ ನೀಡಿದ್ದಾರೆ’ ಎಂದು ಶಿಕ್ಷಕ ಮಹೇಶ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT