<p>ಮಂಡ್ಯ: ಸಾಲ ಮನ್ನಾ ಯೋಜನೆಯಡಿ ಸರ್ಕಾರದಿಂದ ಬರಬೇಕಾಗಿರುವ ₹ 15.37 ಕೋಟಿ ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ನೇತೃತ್ವದ ನಿಯೋಗ ಗುರುವಾರ ಸಹಕಾರ ಸಚಿವ ಎಚ್.ಟಿ.ಸೋಮಶೇಖರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.</p>.<p>ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಲ ಮನ್ನಾ ಯೋಜನೆ ಜಾರಿಗೊಳಿಸಲಾಗಿತ್ತು. ಸಹಕಾರ ಸಂಘಗಳ ಸಾಲ ಮನ್ನಾ ಯೋಜನೆಯಡಿ ಜಿಲ್ಲೆಯಲ್ಲಿ 1,09,294 ರೈತರಿಗೆ ಅನುಕೂಲವಾಗಿದ್ದು ₹ 509 ಕೋಟಿ ಹಣ ಮನ್ನಾ ಆಗಿದೆ. ಬಾಕಿ ಉಳಿದಿರುವ ₹ 15.37 ಕೋಟಿ ಹಣ ಬಿಡುಗಡೆಯಾದರೆ ಎಲ್ಲಾ ರೈತರಿಗೂ ಯೋಜನೆಯ ಲಾಭ ದೊರೆಯಲಿದೆ. ಆದಷ್ಟು ಬೇಗ ಬಾಕಿ ಹಣ ಬಿಡುಗಡೆ ಮಾಡುವಂತೆ ಕೋರಿದರು.</p>.<p>ಬ್ಯಾಂಕ್ನಿಂದ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ನೀಡಲಾಗಿದ್ದ ಸಾಲ ವಸೂಲಾತಿಯಲ್ಲಿ ವಿಳಂಬವಾಗಿದೆ. ಶೀಘ್ರ ಸಾಲ ಮರುಪಾವತಿಗೆ ಸೂಚನೆ ನೀಡಬೇಕು. ಒಟ್ಟಾರೆ ಸಾಲ ಹಾಗೂ ಬಡ್ಡಿ ಸೇರಿ ಬ್ಯಾಂಕ್ಗೆ ₹ 30 ಕೋಟಿ ಸಾಲ ಪಾವತಿಯಾಗಬೇಕಿದೆ ಎಂದು ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ತಿಳಿಸಿದರು.</p>.<p>‘ಸಹಕಾರ ಕಾಯ್ದೆಗೆ ತಿದ್ದುಪಡಿ ತಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಯದರ್ಶಿಗಳನ್ನು ಡಿಸಿಸಿ ಬ್ಯಾಂಕ್ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕು. ಶೀಘ್ರ ಈ ಬಗ್ಗೆ ಕಾರ್ಯೋನ್ಮುಖರಾಗಿ ಬ್ಯಾಂಕಿನ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ’ ಎಂದರು.</p>.<p>‘ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಗಿರಿಜಾ ಚಿತ್ರಮಂದಿರದ ಪಕ್ಕದಲ್ಲಿರುವ ಡಿಸಿಸಿ ಬ್ಯಾಂಕಿಗೆ ಸೇರಿದ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಂಕುಸ್ಥಾಪನೆಗಾಗಿ ಸಚಿವರನ್ನು ಆಹ್ವಾನಿಸಿದ್ದು, ಶೀಘ್ರ ದಿನಾಂಕ ತಿಳಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ’ಎಂದರು.</p>.<p>ಉಪಾಧ್ಯಕ್ಷ ಎಚ್.ಕೆ.ಅಶೋಕ್, ನಿರ್ದೇಶಕರಾದ ಪಿ.ಎಂ.ನರೇಂದ್ರಸ್ವಾಮಿ, ಸಿ. ಅಶ್ವಥ್, ಚಂದ್ರಶೇಖರ್, ಜೋಗಿಗೌಡ, ಕಾಳೇಗೌಡ, ಸಂದರ್ಶ, ಚಲುವರಾಜು, ಗುರುಸ್ವಾಮಿ, ಪಾಲಹಳ್ಳಿ ಚಂದ್ರಶೇಖರ್, ವ್ಯವಸ್ಥಾಪಕ ನಿರ್ದೇಶಕಿ ವನಜಾಕ್ಷಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಸಾಲ ಮನ್ನಾ ಯೋಜನೆಯಡಿ ಸರ್ಕಾರದಿಂದ ಬರಬೇಕಾಗಿರುವ ₹ 15.37 ಕೋಟಿ ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ನೇತೃತ್ವದ ನಿಯೋಗ ಗುರುವಾರ ಸಹಕಾರ ಸಚಿವ ಎಚ್.ಟಿ.ಸೋಮಶೇಖರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.</p>.<p>ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಲ ಮನ್ನಾ ಯೋಜನೆ ಜಾರಿಗೊಳಿಸಲಾಗಿತ್ತು. ಸಹಕಾರ ಸಂಘಗಳ ಸಾಲ ಮನ್ನಾ ಯೋಜನೆಯಡಿ ಜಿಲ್ಲೆಯಲ್ಲಿ 1,09,294 ರೈತರಿಗೆ ಅನುಕೂಲವಾಗಿದ್ದು ₹ 509 ಕೋಟಿ ಹಣ ಮನ್ನಾ ಆಗಿದೆ. ಬಾಕಿ ಉಳಿದಿರುವ ₹ 15.37 ಕೋಟಿ ಹಣ ಬಿಡುಗಡೆಯಾದರೆ ಎಲ್ಲಾ ರೈತರಿಗೂ ಯೋಜನೆಯ ಲಾಭ ದೊರೆಯಲಿದೆ. ಆದಷ್ಟು ಬೇಗ ಬಾಕಿ ಹಣ ಬಿಡುಗಡೆ ಮಾಡುವಂತೆ ಕೋರಿದರು.</p>.<p>ಬ್ಯಾಂಕ್ನಿಂದ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ನೀಡಲಾಗಿದ್ದ ಸಾಲ ವಸೂಲಾತಿಯಲ್ಲಿ ವಿಳಂಬವಾಗಿದೆ. ಶೀಘ್ರ ಸಾಲ ಮರುಪಾವತಿಗೆ ಸೂಚನೆ ನೀಡಬೇಕು. ಒಟ್ಟಾರೆ ಸಾಲ ಹಾಗೂ ಬಡ್ಡಿ ಸೇರಿ ಬ್ಯಾಂಕ್ಗೆ ₹ 30 ಕೋಟಿ ಸಾಲ ಪಾವತಿಯಾಗಬೇಕಿದೆ ಎಂದು ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ತಿಳಿಸಿದರು.</p>.<p>‘ಸಹಕಾರ ಕಾಯ್ದೆಗೆ ತಿದ್ದುಪಡಿ ತಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಯದರ್ಶಿಗಳನ್ನು ಡಿಸಿಸಿ ಬ್ಯಾಂಕ್ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕು. ಶೀಘ್ರ ಈ ಬಗ್ಗೆ ಕಾರ್ಯೋನ್ಮುಖರಾಗಿ ಬ್ಯಾಂಕಿನ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ’ ಎಂದರು.</p>.<p>‘ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಗಿರಿಜಾ ಚಿತ್ರಮಂದಿರದ ಪಕ್ಕದಲ್ಲಿರುವ ಡಿಸಿಸಿ ಬ್ಯಾಂಕಿಗೆ ಸೇರಿದ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಂಕುಸ್ಥಾಪನೆಗಾಗಿ ಸಚಿವರನ್ನು ಆಹ್ವಾನಿಸಿದ್ದು, ಶೀಘ್ರ ದಿನಾಂಕ ತಿಳಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ’ಎಂದರು.</p>.<p>ಉಪಾಧ್ಯಕ್ಷ ಎಚ್.ಕೆ.ಅಶೋಕ್, ನಿರ್ದೇಶಕರಾದ ಪಿ.ಎಂ.ನರೇಂದ್ರಸ್ವಾಮಿ, ಸಿ. ಅಶ್ವಥ್, ಚಂದ್ರಶೇಖರ್, ಜೋಗಿಗೌಡ, ಕಾಳೇಗೌಡ, ಸಂದರ್ಶ, ಚಲುವರಾಜು, ಗುರುಸ್ವಾಮಿ, ಪಾಲಹಳ್ಳಿ ಚಂದ್ರಶೇಖರ್, ವ್ಯವಸ್ಥಾಪಕ ನಿರ್ದೇಶಕಿ ವನಜಾಕ್ಷಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>