<p><strong>ಮಂಡ್ಯ:</strong> ‘ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರೆಯುವ ವಿಶ್ವಾಸವಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯ ಆಶೀರ್ವಾದ ಪಡೆದು, ತಾಲ್ಲೂಕು ಕೇಂದ್ರಗಳಿಂದ ಪ್ರಚಾರ ಆರಂಭಿಸುವೆ’ ಎಂದು ಸಂಸದೆ ಸುಮಲತಾ ಗುರುವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಕಳೆದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿದ್ದೆ, ಈ ಬಾರಿ ಪರಿಸ್ಥಿತಿ ಬದಲಾಗಿದ್ದು, ಪಕ್ಷದ ವರಿಷ್ಠರ ಸಲಹೆ, ಸೂಚನೆಯಂತೆ ನಡೆದುಕೊಳ್ಳುವೆ. ಪ್ರತಿ ತಾಲ್ಲೂಕಿನಲ್ಲೂ ಬೆಂಬಲಿಗರ ಸಭೆ ನಡೆಸುವೆ. ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಒಂದು ಸುತ್ತಿನ ಪ್ರವಾಸವನ್ನೂ ಪೂರ್ಣಗೊಳಿಸುವೆ’ ಎಂದರು.</p>.<p>‘ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಎಲ್ಲವನ್ನೂ ಸ್ಪಷ್ಟಪಡಿಸಿದ್ದೇನೆ. ಸಮಾಧಾನದಿಂದ ಇರುವಂತೆ ಬೆಂಬಲಿಗರಿಗೆ ತಿಳಿಸಿದ್ದೇನೆ. ಜಿಲ್ಲೆಯಾದ್ಯಂತ ಪ್ರವಾಸ ಮಾಡಿ, ಐದು ವರ್ಷಗಳಲ್ಲಿ ಮಾಡಿರುವ ಕೆಲಸಗಳನ್ನು ಜನರ ಮುಂದಿಡುವೆ’ ಎಂದರು.</p>.<p>‘ಎಚ್.ಡಿ.ಕುಮಾರಸ್ವಾಮಿಯವರನ್ನು ಯಾವತ್ತೂ ದ್ವೇಷಿಸಿಲ್ಲ. ವೈಯಕ್ತಿಕವಾಗಿ ಯಾರನ್ನೂ ಟೀಕಿಸುವುದೂ ಇಲ್ಲ. ನನ್ನೆಲ್ಲಾ ಹೇಳಿಕೆಗಳ ರೆಕಾರ್ಡಿಂಗ್ ತೆರೆದು ನೋಡಿ, ಯಾರ ವಿರುದ್ಧವೂ ನಾನು ಕೆಟ್ಟದಾಗಿ ಮಾತನಾಡಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರೆಯುವ ವಿಶ್ವಾಸವಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯ ಆಶೀರ್ವಾದ ಪಡೆದು, ತಾಲ್ಲೂಕು ಕೇಂದ್ರಗಳಿಂದ ಪ್ರಚಾರ ಆರಂಭಿಸುವೆ’ ಎಂದು ಸಂಸದೆ ಸುಮಲತಾ ಗುರುವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಕಳೆದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿದ್ದೆ, ಈ ಬಾರಿ ಪರಿಸ್ಥಿತಿ ಬದಲಾಗಿದ್ದು, ಪಕ್ಷದ ವರಿಷ್ಠರ ಸಲಹೆ, ಸೂಚನೆಯಂತೆ ನಡೆದುಕೊಳ್ಳುವೆ. ಪ್ರತಿ ತಾಲ್ಲೂಕಿನಲ್ಲೂ ಬೆಂಬಲಿಗರ ಸಭೆ ನಡೆಸುವೆ. ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಒಂದು ಸುತ್ತಿನ ಪ್ರವಾಸವನ್ನೂ ಪೂರ್ಣಗೊಳಿಸುವೆ’ ಎಂದರು.</p>.<p>‘ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಎಲ್ಲವನ್ನೂ ಸ್ಪಷ್ಟಪಡಿಸಿದ್ದೇನೆ. ಸಮಾಧಾನದಿಂದ ಇರುವಂತೆ ಬೆಂಬಲಿಗರಿಗೆ ತಿಳಿಸಿದ್ದೇನೆ. ಜಿಲ್ಲೆಯಾದ್ಯಂತ ಪ್ರವಾಸ ಮಾಡಿ, ಐದು ವರ್ಷಗಳಲ್ಲಿ ಮಾಡಿರುವ ಕೆಲಸಗಳನ್ನು ಜನರ ಮುಂದಿಡುವೆ’ ಎಂದರು.</p>.<p>‘ಎಚ್.ಡಿ.ಕುಮಾರಸ್ವಾಮಿಯವರನ್ನು ಯಾವತ್ತೂ ದ್ವೇಷಿಸಿಲ್ಲ. ವೈಯಕ್ತಿಕವಾಗಿ ಯಾರನ್ನೂ ಟೀಕಿಸುವುದೂ ಇಲ್ಲ. ನನ್ನೆಲ್ಲಾ ಹೇಳಿಕೆಗಳ ರೆಕಾರ್ಡಿಂಗ್ ತೆರೆದು ನೋಡಿ, ಯಾರ ವಿರುದ್ಧವೂ ನಾನು ಕೆಟ್ಟದಾಗಿ ಮಾತನಾಡಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>