<p><strong>ಮಂಡ್ಯ:</strong> ಜಿಲ್ಲೆಯ ಏಳು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು, ಡಿಎಚ್ಒ ಕಚೇರಿ ಹಾಗೂ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ ಸೆಂಟರ್ಗಳ ಮೇಲೆ ಶುಕ್ರವಾರ ಏಕಕಾಲಕ್ಕೆ 9 ಕಡೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. </p><p>ತಾಲ್ಲೂಕು ಆಸ್ಪತ್ರೆಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳ ಬಳಕೆಯಾಗದೆ ದೂಳು ಹಿಡಿಯುತ್ತಿವೆ. ಸರ್ಕಾರಿ ವೈದ್ಯರು ಖಾಸಗಿ ಸಂಸ್ಥೆಗಳ ಜೊತೆ ಕೈಜೋಡಿಸಿ ಹೊರಗಡೆ ಸ್ಕ್ಯಾನಿಂಗ್ ಮಾಡಿಸಿಕೊಂಡು ಬರುವಂತೆ ಚೀಟಿ ಬರೆದುಕೊಡುತ್ತಿದ್ದಾರೆ ಎಂದು ಕೆ.ಆರ್.ಪೇಟೆಯ ಕೆ.ಎನ್. ಮಂಜುನಾಥ್ ಎಂಬುವವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. </p><p>ದೂರಿನ ಮೇರೆಗೆ, ಉಪಲೋಕಾಯುಕ್ತ ಬಿ.ವೀರಪ್ಪ ಅವರು ಶೋಧ ಕಾರ್ಯ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದರು. ಆದೇಶದ ಮೇರೆಗೆ ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯ ಲೋಕಾಯುಕ್ತ ಪೊಲೀಸರು 9 ತಂಡಗಳನ್ನು ರಚಿಸಿಕೊಂಡು ಏಕಕಾಲಕ್ಕೆ ದಾಳಿ ನಡೆಸಿದರು. </p><p>ಖಾಸಗಿ ಸ್ಕ್ಯಾನಿಂಗ್ ಸೆಂಟರ್ನಲ್ಲಿ ಭ್ರೂಣಲಿಂಗ ಪತ್ತೆ, 18 ವರ್ಷದೊಳಗಿನವರು (ಬಾಲಕಿಯರು) ಸ್ಕ್ಯಾನಿಂಗ್ಗೆ ಬಂದರೂ ಮಾಹಿತಿ ಕೊಡದಿರುವುದು ಸೇರಿದಂತೆ ಹಲವಾರು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಲೋಕಾಯುಕ್ತ ಎಸ್ಪಿ ಲೋಕೇಶ್ ಬಾಬು ನೇತೃತ್ವದಲ್ಲಿ ನಾಗಮಂಗಲ, ಕೆ.ಆರ್.ಪೇಟೆ, ಪಾಂಡವಪುರ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 11ರಿಂದ ಆರಂಭವಾದ ಶೋಧ ಕಾರ್ಯ ತಡೆರಾತ್ರಿವರೆಗೂ ನಡೆಯಿತು. </p><p>‘ಆಸ್ಪತ್ರೆಗಳಲ್ಲಿ ಕಡತ, ದಾಖಲೆಗಳನ್ನು ಪರಿಶೀಲಿಸಿ, ಕಂಡುಬಂದ ನ್ಯೂನತೆಗಳನ್ನು ಪಟ್ಟಿ ಮಾಡಲಾಗುತ್ತಿದೆ. ಸಮಗ್ರ ವರದಿ ತಯಾರಿಸಿ ಉಪಲೋಕಾಯುಕ್ತರಿಗೆ ಸಲ್ಲಿಸಲಾಗುವುದು’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯ ಏಳು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು, ಡಿಎಚ್ಒ ಕಚೇರಿ ಹಾಗೂ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ ಸೆಂಟರ್ಗಳ ಮೇಲೆ ಶುಕ್ರವಾರ ಏಕಕಾಲಕ್ಕೆ 9 ಕಡೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. </p><p>ತಾಲ್ಲೂಕು ಆಸ್ಪತ್ರೆಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳ ಬಳಕೆಯಾಗದೆ ದೂಳು ಹಿಡಿಯುತ್ತಿವೆ. ಸರ್ಕಾರಿ ವೈದ್ಯರು ಖಾಸಗಿ ಸಂಸ್ಥೆಗಳ ಜೊತೆ ಕೈಜೋಡಿಸಿ ಹೊರಗಡೆ ಸ್ಕ್ಯಾನಿಂಗ್ ಮಾಡಿಸಿಕೊಂಡು ಬರುವಂತೆ ಚೀಟಿ ಬರೆದುಕೊಡುತ್ತಿದ್ದಾರೆ ಎಂದು ಕೆ.ಆರ್.ಪೇಟೆಯ ಕೆ.ಎನ್. ಮಂಜುನಾಥ್ ಎಂಬುವವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. </p><p>ದೂರಿನ ಮೇರೆಗೆ, ಉಪಲೋಕಾಯುಕ್ತ ಬಿ.ವೀರಪ್ಪ ಅವರು ಶೋಧ ಕಾರ್ಯ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದರು. ಆದೇಶದ ಮೇರೆಗೆ ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯ ಲೋಕಾಯುಕ್ತ ಪೊಲೀಸರು 9 ತಂಡಗಳನ್ನು ರಚಿಸಿಕೊಂಡು ಏಕಕಾಲಕ್ಕೆ ದಾಳಿ ನಡೆಸಿದರು. </p><p>ಖಾಸಗಿ ಸ್ಕ್ಯಾನಿಂಗ್ ಸೆಂಟರ್ನಲ್ಲಿ ಭ್ರೂಣಲಿಂಗ ಪತ್ತೆ, 18 ವರ್ಷದೊಳಗಿನವರು (ಬಾಲಕಿಯರು) ಸ್ಕ್ಯಾನಿಂಗ್ಗೆ ಬಂದರೂ ಮಾಹಿತಿ ಕೊಡದಿರುವುದು ಸೇರಿದಂತೆ ಹಲವಾರು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಲೋಕಾಯುಕ್ತ ಎಸ್ಪಿ ಲೋಕೇಶ್ ಬಾಬು ನೇತೃತ್ವದಲ್ಲಿ ನಾಗಮಂಗಲ, ಕೆ.ಆರ್.ಪೇಟೆ, ಪಾಂಡವಪುರ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 11ರಿಂದ ಆರಂಭವಾದ ಶೋಧ ಕಾರ್ಯ ತಡೆರಾತ್ರಿವರೆಗೂ ನಡೆಯಿತು. </p><p>‘ಆಸ್ಪತ್ರೆಗಳಲ್ಲಿ ಕಡತ, ದಾಖಲೆಗಳನ್ನು ಪರಿಶೀಲಿಸಿ, ಕಂಡುಬಂದ ನ್ಯೂನತೆಗಳನ್ನು ಪಟ್ಟಿ ಮಾಡಲಾಗುತ್ತಿದೆ. ಸಮಗ್ರ ವರದಿ ತಯಾರಿಸಿ ಉಪಲೋಕಾಯುಕ್ತರಿಗೆ ಸಲ್ಲಿಸಲಾಗುವುದು’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>