<p><strong>ಭಾರತಿನಗರ (ಮಂಡ್ಯ ಜಿಲ್ಲೆ):</strong> ಮಂಡ್ಯ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ತೊರೆಚಾಕನಹಳ್ಳಿ ಪುಟ್ಟಸ್ವಾಮಿ ಅವರಿಗೆ ಸೇರಿದ ಮೂರು ಮನೆಗಳ ಮೇಲೆ ಏಕಕಾಲಕ್ಕೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದ್ದಾರೆ.</p><p>ಸಿ.ಪುಟ್ಟಸ್ವಾಮಿ ಅವರಿಗೆ ಸೇರಿದ ಮಂಡ್ಯದಲ್ಲಿನ ಮನೆ, ತೊರೆಚಾಕನಹಳ್ಳಿಯಲ್ಲಿನ ಮನೆ, ಸಂಬಂಧಿಕರ ಎರಡು ಮನೆಗಳು ಹಾಗೂ ಫಾರ್ಮ್ ಹೌಸ್, ಸೇರಿದಂತೆ ಐದು ಕಡೆ ಪ್ರತ್ಯೇಕ ತಂಡಗಳಾಗಿ ದಾಳಿ ನಡೆಸಲಾಗಿದೆ.</p><p>ಎಲ್ಲೆಡೆಯೂ ದಾಖಲೆಗಳ, ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.</p><p>ರಾಜ್ಯಾದ್ಯಂತ ಹಲವು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿಗಾಗಿ ನಿಯೋಜಿಸಲಾಗಿದ್ದ ಲೋಕಾಯುಕ್ತರ ಒಂದು ತಂಡ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.</p><p>ಈ ಹಿಂದೆ ಈತ ಚನ್ನಪಟ್ಟಣ, ಮದ್ದೂರು ಸೇರಿ ಹಲವು ಕಡೆ ಪುರಸಭೆ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇಲ್ಲಿಯೂ ಕೂಡ ಇವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತೆಂದು ಮೂಲಗಳು ತಿಳಿಸಿವೆ.</p><p>ಲೋಕಾಯುಕ್ತ ಪೊಲೀಸ್ ಇನ್ ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.</p>.Lokayukta Raid: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ.ಮಡಿಕೇರಿ: ಲೋಕೋಪಯೋಗಿ ಇಲಾಖೆಯ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ.ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿ.ದಾವಣಗೆರೆ: ಎಪಿಎಂಸಿ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ.ಬೀದರ್: ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರ ಶೋಧ.ಶಿವಮೊಗ್ಗ: ಸಿಮ್ಸ್ ನಿರ್ದೇಶಕರ ಆಪ್ತ ಸಹಾಯಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತಿನಗರ (ಮಂಡ್ಯ ಜಿಲ್ಲೆ):</strong> ಮಂಡ್ಯ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ತೊರೆಚಾಕನಹಳ್ಳಿ ಪುಟ್ಟಸ್ವಾಮಿ ಅವರಿಗೆ ಸೇರಿದ ಮೂರು ಮನೆಗಳ ಮೇಲೆ ಏಕಕಾಲಕ್ಕೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದ್ದಾರೆ.</p><p>ಸಿ.ಪುಟ್ಟಸ್ವಾಮಿ ಅವರಿಗೆ ಸೇರಿದ ಮಂಡ್ಯದಲ್ಲಿನ ಮನೆ, ತೊರೆಚಾಕನಹಳ್ಳಿಯಲ್ಲಿನ ಮನೆ, ಸಂಬಂಧಿಕರ ಎರಡು ಮನೆಗಳು ಹಾಗೂ ಫಾರ್ಮ್ ಹೌಸ್, ಸೇರಿದಂತೆ ಐದು ಕಡೆ ಪ್ರತ್ಯೇಕ ತಂಡಗಳಾಗಿ ದಾಳಿ ನಡೆಸಲಾಗಿದೆ.</p><p>ಎಲ್ಲೆಡೆಯೂ ದಾಖಲೆಗಳ, ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.</p><p>ರಾಜ್ಯಾದ್ಯಂತ ಹಲವು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿಗಾಗಿ ನಿಯೋಜಿಸಲಾಗಿದ್ದ ಲೋಕಾಯುಕ್ತರ ಒಂದು ತಂಡ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.</p><p>ಈ ಹಿಂದೆ ಈತ ಚನ್ನಪಟ್ಟಣ, ಮದ್ದೂರು ಸೇರಿ ಹಲವು ಕಡೆ ಪುರಸಭೆ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇಲ್ಲಿಯೂ ಕೂಡ ಇವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತೆಂದು ಮೂಲಗಳು ತಿಳಿಸಿವೆ.</p><p>ಲೋಕಾಯುಕ್ತ ಪೊಲೀಸ್ ಇನ್ ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.</p>.Lokayukta Raid: ಬೆಂಗಳೂರು ಸೇರಿ ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ.ಮಡಿಕೇರಿ: ಲೋಕೋಪಯೋಗಿ ಇಲಾಖೆಯ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ.ಕರ್ನಾಟಕ ವಿಶ್ವವಿದ್ಯಾಲಯದ ಪ್ರೊ ಸುಭಾಷ್ ನಾಟಿಕರ್ ಮನೆಗೆ ಲೋಕಾಯುಕ್ತ ದಾಳಿ.ದಾವಣಗೆರೆ: ಎಪಿಎಂಸಿ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ.ಬೀದರ್: ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರ ಶೋಧ.ಶಿವಮೊಗ್ಗ: ಸಿಮ್ಸ್ ನಿರ್ದೇಶಕರ ಆಪ್ತ ಸಹಾಯಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>