<p><strong>ಮಂಡ್ಯ</strong>: ‘ಉಪಲೋಕಾಯುಕ್ತರ ಹೆಸರಲ್ಲಿ ಸರ್ಕಾರಿ ಅಧಿಕಾರಿ ಮತ್ತು ನೌಕರರಿಂದ ಹಣ ಸಂಗ್ರಹಿಸಲಾಗುತ್ತಿದೆ’ ಎಂಬ ಆರೋಪ ಮಾಡಿದ್ದ ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. </p><p>‘ಈ ಆರೋಪಗಳಿಗೆ ಪೂರಕವಾದ ದಾಖಲೆ ಒದಗಿಸದೇ, ಕೇವಲ ನಿರಾಧಾರವಾಗಿ ಸುಳ್ಳು ಹೇಳಿಕೆ ನೀಡಿ, ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಅಧಿಕಾರಿಗಳ ಶಾಸನಬದ್ಧ ಕರ್ತವ್ಯಗಳಿಗೆ ಅಡಚಣೆ ಉಂಟು ಮಾಡಿದ್ದಾರೆ. ದೂರು ಅರ್ಜಿಯಲ್ಲಿ ಸಂಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರ ಅಡಗಿದೆ’ ಎಂದು ಆದೇಶದಲ್ಲಿ ತಿಳಸಲಾಗಿದೆ.</p><p>‘ಲೋಕಾಯುಕ್ತ ಸಂಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ಅಪನಂಬಿಕೆ ಉಂಟು ಮಾಡಲು ಈ ಕೃತ್ಯ ಮಾಡಲಾಗಿದೆ ಎಂದು ಭಾವಿಸಿ, ಲೋಕಾಯುಕ್ತ ಕಾಯ್ದೆ 1984ರ ಸೆಕ್ಷನ್ 17ರ ಅಡಿಯಲ್ಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಉಪಲೋಕಾಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. </p><p>ಈ ಪ್ರಕರಣದ ವಿಚಾರಣೆಯನ್ನು ಜೂನ್ 1ರಂದು ನಿಗದಿಪಡಿಸಲಾಗಿದೆ. ಆದೇಶ ಪ್ರತಿಯನ್ನು ಗೃಹಸಚಿವ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಗೆ ಕಳುಹಿಸಲಾಗಿದೆ. </p><p>ಮಂಡ್ಯ ಮತ್ತು ಮಳವಳ್ಳಿ ತಾಲ್ಲೂಕುಗಳ ಬಾಕಿ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿಗೆ ಉಪಲೋಕಾಯುಕ್ತರು ಮಂಡ್ಯ ನಗರಕ್ಕೆ ಮೇ 20ರಿಂದ 22ರವರೆಗೆ ಭೇಟಿ ನೀಡಿದ್ದರು.</p><p>ಈ ಸಂದರ್ಭ ‘ಉಪಲೋಕಾಯುಕ್ತರ ಮುಂದೆ ದಾಖಲಾಗಿರುವ ಪ್ರಕರಣಗಳಲ್ಲಿ ಕ್ಲೀನ್ ಚಿಟ್ ಕೊಡಿಸುವುದು ಇಲ್ಲವೇ ಆದಷ್ಟು ಕಡಿಮೆ ಪ್ರಮಾಣದ ಕ್ರಮಕ್ಕೆ ವ್ಯವಸ್ಥೆ ಮಾಡುವ ಆಮಿಷ ಒಡ್ಡಿ ಸುಮಾರು ₹2 ಕೋಟಿ ಹಣ ಸಂಗ್ರಹಿಸಲಾಗಿದೆ’ ಎಂದು ನಾಗಣ್ಣಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.</p><p><strong>ಎಸ್ಪಿಗೆ ದೂರು</strong></p><p>‘ಹಣ ವಸೂಲಾತಿಯಲ್ಲಿ ವಕೀಲರೊಬ್ಬರು ಭಾಗಿಯಾಗಿದ್ದಾರೆ’ ಎಂದು ಸುಳ್ಳು ಆರೋಪ ಮಾಡಲಾಗಿದ್ದು, ಆರೋಪ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರು ನೀಡಲಾಗಿದೆ. </p><p>‘ಆಧಾರರಹಿತ ಆರೋಪವನ್ನು ಪ್ರಸಾರ ಮಾಡಿದ್ದ ಸಾಮಾಜಿಕ ಮಾಧ್ಯಮಗಳಿಗೂ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ’ ಎಂಬ ಮಾಹಿತಿ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಉಪಲೋಕಾಯುಕ್ತರ ಹೆಸರಲ್ಲಿ ಸರ್ಕಾರಿ ಅಧಿಕಾರಿ ಮತ್ತು ನೌಕರರಿಂದ ಹಣ ಸಂಗ್ರಹಿಸಲಾಗುತ್ತಿದೆ’ ಎಂಬ ಆರೋಪ ಮಾಡಿದ್ದ ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. </p><p>‘ಈ ಆರೋಪಗಳಿಗೆ ಪೂರಕವಾದ ದಾಖಲೆ ಒದಗಿಸದೇ, ಕೇವಲ ನಿರಾಧಾರವಾಗಿ ಸುಳ್ಳು ಹೇಳಿಕೆ ನೀಡಿ, ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಅಧಿಕಾರಿಗಳ ಶಾಸನಬದ್ಧ ಕರ್ತವ್ಯಗಳಿಗೆ ಅಡಚಣೆ ಉಂಟು ಮಾಡಿದ್ದಾರೆ. ದೂರು ಅರ್ಜಿಯಲ್ಲಿ ಸಂಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರ ಅಡಗಿದೆ’ ಎಂದು ಆದೇಶದಲ್ಲಿ ತಿಳಸಲಾಗಿದೆ.</p><p>‘ಲೋಕಾಯುಕ್ತ ಸಂಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ಅಪನಂಬಿಕೆ ಉಂಟು ಮಾಡಲು ಈ ಕೃತ್ಯ ಮಾಡಲಾಗಿದೆ ಎಂದು ಭಾವಿಸಿ, ಲೋಕಾಯುಕ್ತ ಕಾಯ್ದೆ 1984ರ ಸೆಕ್ಷನ್ 17ರ ಅಡಿಯಲ್ಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಉಪಲೋಕಾಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. </p><p>ಈ ಪ್ರಕರಣದ ವಿಚಾರಣೆಯನ್ನು ಜೂನ್ 1ರಂದು ನಿಗದಿಪಡಿಸಲಾಗಿದೆ. ಆದೇಶ ಪ್ರತಿಯನ್ನು ಗೃಹಸಚಿವ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಗೆ ಕಳುಹಿಸಲಾಗಿದೆ. </p><p>ಮಂಡ್ಯ ಮತ್ತು ಮಳವಳ್ಳಿ ತಾಲ್ಲೂಕುಗಳ ಬಾಕಿ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿಗೆ ಉಪಲೋಕಾಯುಕ್ತರು ಮಂಡ್ಯ ನಗರಕ್ಕೆ ಮೇ 20ರಿಂದ 22ರವರೆಗೆ ಭೇಟಿ ನೀಡಿದ್ದರು.</p><p>ಈ ಸಂದರ್ಭ ‘ಉಪಲೋಕಾಯುಕ್ತರ ಮುಂದೆ ದಾಖಲಾಗಿರುವ ಪ್ರಕರಣಗಳಲ್ಲಿ ಕ್ಲೀನ್ ಚಿಟ್ ಕೊಡಿಸುವುದು ಇಲ್ಲವೇ ಆದಷ್ಟು ಕಡಿಮೆ ಪ್ರಮಾಣದ ಕ್ರಮಕ್ಕೆ ವ್ಯವಸ್ಥೆ ಮಾಡುವ ಆಮಿಷ ಒಡ್ಡಿ ಸುಮಾರು ₹2 ಕೋಟಿ ಹಣ ಸಂಗ್ರಹಿಸಲಾಗಿದೆ’ ಎಂದು ನಾಗಣ್ಣಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.</p><p><strong>ಎಸ್ಪಿಗೆ ದೂರು</strong></p><p>‘ಹಣ ವಸೂಲಾತಿಯಲ್ಲಿ ವಕೀಲರೊಬ್ಬರು ಭಾಗಿಯಾಗಿದ್ದಾರೆ’ ಎಂದು ಸುಳ್ಳು ಆರೋಪ ಮಾಡಲಾಗಿದ್ದು, ಆರೋಪ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರು ನೀಡಲಾಗಿದೆ. </p><p>‘ಆಧಾರರಹಿತ ಆರೋಪವನ್ನು ಪ್ರಸಾರ ಮಾಡಿದ್ದ ಸಾಮಾಜಿಕ ಮಾಧ್ಯಮಗಳಿಗೂ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ’ ಎಂಬ ಮಾಹಿತಿ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>