ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ | ಲೋಕಾಯುಕ್ತ ಬಲೆಗೆ ಗ್ರಾ.ಪಂ ಕಾರ್ಯದರ್ಶಿ

Published 25 ಮೇ 2023, 6:35 IST
Last Updated 25 ಮೇ 2023, 6:35 IST
ಅಕ್ಷರ ಗಾತ್ರ

ಮಂಡ್ಯ: ನೀವೇಶನ ದಾಖಲೆ ನೀಡಲು ಲಂಚ ಪಡೆಯುತ್ತಿದ್ದ ತಾಲ್ಲೂಕಿನ ಬೇಲೂರು ಗ್ರಾಮ ಪಂಚಾಯಿತಿ ಗ್ರೇಡ್‌–1 ಕಾರ್ಯದರ್ಶಿ ದಯಾನಂದ ಅವರನ್ನು ಲೋಕಾಯುಕ್ತ ಪೊಲೀಸರು  ಬುಧವಾರ ಬಂಧಿಸಿದರು.

ಶ್ರೀರಾಮ ಬಡಾವಣೆಯಲ್ಲಿ 30X40 ಅಳತೆಯ ನಿವೇಶನ ಖರೀದಿಸಿದ್ದ ಮಂಜುನಾಥ್ ಎಂಬುವವರು ಪತ್ನಿ ಹಾಗೂ ಅತ್ತೆ ಹೆಸರಿಗೆ ಜಂಟಿ ಖಾತೆ ಮಾಡಿಸಲು ಅಗತ್ಯವಿದ್ದ ದಾಖಲೆಗಳನ್ನು ನೀಡಲು ಕಾರ್ಯದರ್ಶಿ ₹40 ಸಾವಿರ ಲಂಚ ಕೇಳಿದ್ದರು. ನಂತರ ₹35 ಸಾವಿರಕ್ಕೆ ಒಪ್ಪಿದ್ದರು.

ಮುಂಗಡವಾಗಿ ₹5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಕಾರ್ಯಾಚರಣೆ  ನಡೆಸಿ ಆರೋಪಿಯನ್ನು ಬಂಧಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಗ್ರಾಮದ ಕೆಲವರು ದೂರುದಾರರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿ, ಅಧಿಕಾರಿಯನ್ನು ಬಂಧಿಸಬಾರದು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT