<p><strong>ಮಂಡ್ಯ:</strong> ‘ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ’ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಅವರು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲೆಯ ನ್ಯಾಯಾಂಗ ಅಧಿಕಾರಿಗಳು, ವಕೀಲರು ಮತ್ತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಯಾಂಗವನ್ನು ಪಾಲಿಸುವುದು ಅಧಿಕಾರಿಗಳ ಕರ್ತವ್ಯ. ಅಧಿಕಾರಿಗಳು ತಮಗೆ ನೀಡುವ ಸಂಬಳವನ್ನು ಹೇಗೆ ಪ್ರೀತಿಸುತ್ತಾರೋ ಹಾಗೆಯೇ ತಮಗೆ ನೀಡುವ ಕರ್ತವ್ಯಗಳನ್ನು ಸಹ ಪ್ರೀತಿಸಬೇಕಿದೆ. ಪಡೆಯುವ ಸಂಬಳಕ್ಕಾದರೂ ನ್ಯಾಯ ಒದಗಿಸಿವಂತೆ ಕಾರ್ಯನಿರ್ವಹಿಸಿ ಎಂದರು.</p>.<p>ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಅದರೊಟ್ಟಿಗೆ ಪತ್ರಿಕಾ ರಂಗಗಳು ನಿಸ್ವಾರ್ಥದಿಂದ ಕೆಲಸ ನಿರ್ವಹಿಸಬೇಕಿದೆ. ವಕೀಲರು ನ್ಯಾಯಾಂಗದ ಒಂದು ಭಾಗವಾಗಿದ್ದು, ನ್ಯಾಯಾಂಗವನ್ನು ಬಲಿಷ್ಠಪಡಿಸುವಲ್ಲಿ ವಕೀಲರ ಪಾತ್ರ ಪ್ರಮುಖವಾಗಿರುತ್ತದೆ. ಆಗಾಗಿ ವಕೀಲರು ಆತ್ಮಸ್ಥೈರ್ಯದಿಂದ ಕೆಲಸ ನಿರ್ವಹಿಸಿ ಎಂದು ಹೇಳಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಭೃಂಗೇಶ್, ಕರ್ನಾಟಕ ಲೋಕಾಯುಕ್ತದ ಉಪ ನಿಬಂಧಕರಾದ ಅರವಿಂದ್, ಮಿಲನ, ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಜೇಂದ್ರ ಇದ್ದರು. </p>.<p> <strong>ಕಲುಷಿತ ನೀರು; ಗ್ರಾಮಸ್ಥರ ದೂರು</strong></p><p> ಉಪಲೋಕಾಯುಕ್ತ ಬಿ. ವೀರಪ್ಪ ಅವರು ಮಂಡ್ಯ ನಗರದ ಯತ್ತಗದನಹಳ್ಳಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಸಂಸ್ಕರಣಾ ಘಟಕದಲ್ಲಿ ನೀರು ಸಂಪೂರ್ಣವಾಗಿ ಶುದ್ಧೀಕರಣವಾಗದೆ ರಾಜ ಕಾಲುವೆಗೆ ಹರಿಯುತ್ತಿದೆ. ಇದರೊಂದಿಗೆ ಕೊಳಚೆ ನೀರು ಸಹ ಸೇರಿ ಕಾಲುವೆ ನೀರು ಮಲಿನಗೊಂಡಿದೆ. ಇದರಿಂದ ಮನೆಗಳ ಹತ್ತಿರವಿರುವ ಕೊಳವೆಬಾವಿಗಳಲ್ಲಿ ಕಲುಷಿತ ನೀರು ಬರುತ್ತಿದ್ದು ಇದರ ಸೇವನೆಯಿಂದ ಚರ್ಮ ಕಾಯಿಲೆ ಉಂಟಾಗುತ್ತಿದೆ’ ಎಂದು ಗ್ರಾಮಸ್ಥರು ದೂರಿದರು. ಉಪಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಪರಿಸರ ಮಾಲಿನ್ಯ ಅಧಿಕಾರಿ ಪಿ.ಡಿ.ಒ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಅವರು ಕೆರೆ ನೀರು ಮಲಿನವಾಗದಂತೆ ಕ್ರಮ ಕೈಗೊಂಡು ವರದಿ ನೀಡಬೇಕು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ’ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಅವರು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲೆಯ ನ್ಯಾಯಾಂಗ ಅಧಿಕಾರಿಗಳು, ವಕೀಲರು ಮತ್ತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಯಾಂಗವನ್ನು ಪಾಲಿಸುವುದು ಅಧಿಕಾರಿಗಳ ಕರ್ತವ್ಯ. ಅಧಿಕಾರಿಗಳು ತಮಗೆ ನೀಡುವ ಸಂಬಳವನ್ನು ಹೇಗೆ ಪ್ರೀತಿಸುತ್ತಾರೋ ಹಾಗೆಯೇ ತಮಗೆ ನೀಡುವ ಕರ್ತವ್ಯಗಳನ್ನು ಸಹ ಪ್ರೀತಿಸಬೇಕಿದೆ. ಪಡೆಯುವ ಸಂಬಳಕ್ಕಾದರೂ ನ್ಯಾಯ ಒದಗಿಸಿವಂತೆ ಕಾರ್ಯನಿರ್ವಹಿಸಿ ಎಂದರು.</p>.<p>ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಅದರೊಟ್ಟಿಗೆ ಪತ್ರಿಕಾ ರಂಗಗಳು ನಿಸ್ವಾರ್ಥದಿಂದ ಕೆಲಸ ನಿರ್ವಹಿಸಬೇಕಿದೆ. ವಕೀಲರು ನ್ಯಾಯಾಂಗದ ಒಂದು ಭಾಗವಾಗಿದ್ದು, ನ್ಯಾಯಾಂಗವನ್ನು ಬಲಿಷ್ಠಪಡಿಸುವಲ್ಲಿ ವಕೀಲರ ಪಾತ್ರ ಪ್ರಮುಖವಾಗಿರುತ್ತದೆ. ಆಗಾಗಿ ವಕೀಲರು ಆತ್ಮಸ್ಥೈರ್ಯದಿಂದ ಕೆಲಸ ನಿರ್ವಹಿಸಿ ಎಂದು ಹೇಳಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಭೃಂಗೇಶ್, ಕರ್ನಾಟಕ ಲೋಕಾಯುಕ್ತದ ಉಪ ನಿಬಂಧಕರಾದ ಅರವಿಂದ್, ಮಿಲನ, ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಜೇಂದ್ರ ಇದ್ದರು. </p>.<p> <strong>ಕಲುಷಿತ ನೀರು; ಗ್ರಾಮಸ್ಥರ ದೂರು</strong></p><p> ಉಪಲೋಕಾಯುಕ್ತ ಬಿ. ವೀರಪ್ಪ ಅವರು ಮಂಡ್ಯ ನಗರದ ಯತ್ತಗದನಹಳ್ಳಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಸಂಸ್ಕರಣಾ ಘಟಕದಲ್ಲಿ ನೀರು ಸಂಪೂರ್ಣವಾಗಿ ಶುದ್ಧೀಕರಣವಾಗದೆ ರಾಜ ಕಾಲುವೆಗೆ ಹರಿಯುತ್ತಿದೆ. ಇದರೊಂದಿಗೆ ಕೊಳಚೆ ನೀರು ಸಹ ಸೇರಿ ಕಾಲುವೆ ನೀರು ಮಲಿನಗೊಂಡಿದೆ. ಇದರಿಂದ ಮನೆಗಳ ಹತ್ತಿರವಿರುವ ಕೊಳವೆಬಾವಿಗಳಲ್ಲಿ ಕಲುಷಿತ ನೀರು ಬರುತ್ತಿದ್ದು ಇದರ ಸೇವನೆಯಿಂದ ಚರ್ಮ ಕಾಯಿಲೆ ಉಂಟಾಗುತ್ತಿದೆ’ ಎಂದು ಗ್ರಾಮಸ್ಥರು ದೂರಿದರು. ಉಪಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಪರಿಸರ ಮಾಲಿನ್ಯ ಅಧಿಕಾರಿ ಪಿ.ಡಿ.ಒ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಅವರು ಕೆರೆ ನೀರು ಮಲಿನವಾಗದಂತೆ ಕ್ರಮ ಕೈಗೊಂಡು ವರದಿ ನೀಡಬೇಕು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>