<p><strong>ಮಂಡ್ಯ: </strong>ನಾಗಮಂಗಲ ಹೊರವಲಯ ಎಂ.ಹೊಸೂರು ಗೇಟ್ ಬಳಿ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ನಾಗಮಂಗಲ ತಾಲ್ಲೂಕು ಬೀರೇಶ್ವರಪುರದ ದೇವರಾಜು (42), ಪಾಂಡವಪುರ ತಾಲ್ಲೂಕಿನ ವದೇಸಮುದ್ರ ಗ್ರಾಮದ ನಿವಾಸಿ, ಕನಗನಮರಡಿ ವೃತ್ತದ ಗ್ರಾಮ ಸಹಾಯಕ ಮಂಜುನಾಥ್ (55), ಕೆನ್ನಾಳು ಗ್ರಾಮದ ರೈತ ಮಂಜುನಾಥ್ (64) ಮೃತಪಟ್ಟಿದ್ದಾರೆ.</p>.<p>ಪಾಂಡವಪುರ ತಾಲ್ಲೂಕಿನ ಎಲೆಕೆರೆ ಗ್ರಾಮದ ನಿವಾಸಿ ದಾಮರಹಳ್ಳಿ ವೃತ್ತದ ಗ್ರಾಮ ಸಹಾಯಕ ಸ್ವಾಮಿ (50) ತೀವ್ರವಾಗಿ ಗಾಯಗೊಂಡಿದ್ದು, ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<p>ದೇವರಾಜು ಪಾಂಡವಪುರದಲ್ಲಿ ಗ್ರಾಮ ಲೆಕ್ಕಿಗನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶನಿವಾರ ಕಚೇರಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸಹಾಯಕರೊಂದಿಗೆ ಸ್ವಗ್ರಾಮದ ಜಮೀನಿನ ಕೆಲಸದ ಉದ್ದೇಶದಿಂದ ಗ್ರಾಮಕ್ಕೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಸ್ಯಾಂಟ್ರೊ ಕಾರಿನಲ್ಲಿ ನಾಗಮಂಗಲ ಕಡೆಯಿಂದ ಪಾಂಡವಪುರದ ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ.</p>.<p>ಎಂ.ಹೊಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಾವಿ ಕಡೆಗೆ ಸಂಚರಿಸುತ್ತಿದ್ದ ಮದ್ಯ ತುಂಬಿದ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.</p>.<p>ಮೃತ ದೇಹಗಳನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.</p>.<p>ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ನಾಗಮಂಗಲ ಹೊರವಲಯ ಎಂ.ಹೊಸೂರು ಗೇಟ್ ಬಳಿ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ನಾಗಮಂಗಲ ತಾಲ್ಲೂಕು ಬೀರೇಶ್ವರಪುರದ ದೇವರಾಜು (42), ಪಾಂಡವಪುರ ತಾಲ್ಲೂಕಿನ ವದೇಸಮುದ್ರ ಗ್ರಾಮದ ನಿವಾಸಿ, ಕನಗನಮರಡಿ ವೃತ್ತದ ಗ್ರಾಮ ಸಹಾಯಕ ಮಂಜುನಾಥ್ (55), ಕೆನ್ನಾಳು ಗ್ರಾಮದ ರೈತ ಮಂಜುನಾಥ್ (64) ಮೃತಪಟ್ಟಿದ್ದಾರೆ.</p>.<p>ಪಾಂಡವಪುರ ತಾಲ್ಲೂಕಿನ ಎಲೆಕೆರೆ ಗ್ರಾಮದ ನಿವಾಸಿ ದಾಮರಹಳ್ಳಿ ವೃತ್ತದ ಗ್ರಾಮ ಸಹಾಯಕ ಸ್ವಾಮಿ (50) ತೀವ್ರವಾಗಿ ಗಾಯಗೊಂಡಿದ್ದು, ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<p>ದೇವರಾಜು ಪಾಂಡವಪುರದಲ್ಲಿ ಗ್ರಾಮ ಲೆಕ್ಕಿಗನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶನಿವಾರ ಕಚೇರಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸಹಾಯಕರೊಂದಿಗೆ ಸ್ವಗ್ರಾಮದ ಜಮೀನಿನ ಕೆಲಸದ ಉದ್ದೇಶದಿಂದ ಗ್ರಾಮಕ್ಕೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಸ್ಯಾಂಟ್ರೊ ಕಾರಿನಲ್ಲಿ ನಾಗಮಂಗಲ ಕಡೆಯಿಂದ ಪಾಂಡವಪುರದ ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ.</p>.<p>ಎಂ.ಹೊಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಾವಿ ಕಡೆಗೆ ಸಂಚರಿಸುತ್ತಿದ್ದ ಮದ್ಯ ತುಂಬಿದ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.</p>.<p>ಮೃತ ದೇಹಗಳನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.</p>.<p>ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>