<p><strong>ಮಂಡ್ಯ:</strong> ಜಿಲ್ಲೆಯ ಶ್ರೀರಂಗಪಟ್ಟಣದ ಉಪನೋಂದಣಾಧಿಕಾರಿ ಜಿ.ಮಂಜುದರ್ಶಿನಿ ಅವರು ‘ಅಕ್ರಮ ಆಸ್ತಿ ನೋಂದಣಿ’ ಮಾಡಿ ಸರ್ಕಾರದ ಬೊಕ್ಕಸಕ್ಕೆ ₹17.70 ಲಕ್ಷ ನಷ್ಟ ಉಂಟು ಮಾಡಿದ್ದಾರೆ ಎಂಬುದು ತನಿಖಾ ವರದಿಯಲ್ಲಿ ಸಾಬೀತಾಗಿದೆ. </p>.<p>ದಸ್ತಾವೇಜುಗಳ ನೋಂದಣಿಯಲ್ಲಿ ಕ್ರಮಬದ್ಧವಲ್ಲದ ನೋಂದಣಿ ಮಾಡಿದ್ದಾರೆ ಹಾಗೂ ನೋಂದಣಿ ಶುಲ್ಕ ಮತ್ತು ಮುದ್ರಾಂಕ ಶುಲ್ಕ ಕಡಿಮೆ ಪಡೆದಿರುವುದು ಕರ್ತವ್ಯಲೋಪ ಎಂಬುದನ್ನು ತನಿಖಾ ತಂಡ ಪತ್ತೆ ಹಚ್ಚಿದೆ. ಈ ತನಿಖಾ ವರದಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p><strong>ಏನಿದು ದೂರು?: </strong>‘ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ (ಕೆ.ಆರ್.ಎಸ್) ಗ್ರಾಮದ ಸ.ನಂ. 6/1, ಹೊಸಹಳ್ಳಿ ಗ್ರಾಮದ ಸ.ನಂ. 60/1, 60/8, ಶ್ರೀರಂಗಪಟ್ಟಣ ಟೌನ್ ಮುನ್ಸಿಪಲ್ ಸ್ವತ್ತಿನ ಸಂಖ್ಯೆ 18–505–136, ಎಸ್– 14–21–12 ಹಾಗೂ 12–10–73 ಇವುಗಳಿಗೆ ಸಂಬಂಧಿಸಿ ಅಧಿಕಾರಿಯು ಆಸ್ತಿಗಳ ಅಕ್ರಮ ನೋಂದಣಿ ಮಾಡಿದ್ದಾರೆ’ ಎಂದು ಮಂಡ್ಯ ತಾಲ್ಲೂಕು ತೂಬಿನಕೆರೆಯ ಟಿ.ಎಲ್. ಶ್ರೀಧರ್ ಎಂಬುವರು ಜೂನ್ 21ರಂದು ದೂರು ನೀಡಿದ್ದರು.</p>.<p><strong>ತನಿಖಾ ತಂಡ ರಚನೆ: </strong>ದೂರಿನ ಮೇರೆಗೆ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯು ತನಿಖಾ ತಂಡ ರಚಿಸಿದ್ದರು. ತಂಡವು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕಡತಗಳನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸಿದೆ. 3 ಪ್ರಕರಣಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. </p>.<p>ಮೊದಲನೇ ಪ್ರಕರಣದಲ್ಲಿ, ಮಾಲೀಕತ್ವಕ್ಕೆ ಸಂಬಂಧಿಸಿ ಆರ್ಟಿಸಿ ಕಾಲಂ 9ರಲ್ಲಿ ‘ಮನೆಜಾಗ’ ಎಂದು ನಮೂದಾಗಿದ್ದರೂ ದಾಖಲೆಗಳನ್ನು ಪರಿಶೀಲಿಸದೆ, ದಸ್ತಾವೇಜು ನೋಂದಣಿಗೆ ಸಂಬಂಧಿಸಿ ನೀಡಲಾದ ಮಾರ್ಗಸೂಚಿಗಳನ್ನು ಪಾಲಿಸಿಲ್ಲ. ಮಾರ್ಗಸೂಚಿ ಬೆಲೆಗಿಂತ ಕಡಿಮೆ ಮೌಲ್ಯವನ್ನು ನಮೂದಿಸಿ ₹12.09 ಲಕ್ಷ ರಾಜಸ್ವ ನಷ್ಟ ಉಂಟು ಮಾಡಿದ್ದಾರೆ ಎಂದು ತಿಳಿಸಲಾಗಿದೆ. </p>.<p>ಎರಡನೇ ಪ್ರಕರಣದಲ್ಲಿ, ಜಂಟಿ ಮಾಲೀಕತ್ವದ ಆಸ್ತಿಯನ್ನು ಕ್ರಯ ಮಾಡುವಾಗ, ಸೂಕ್ತ ಮಾಲೀಕತ್ವದ ಬಗ್ಗೆ ದಾಖಲೆಗಳನ್ನು ಪರಿಶೀಲಿಸದೆ ನೋಂದಣಿ ಮಾಡಲಾಗಿದೆ. ಕರಾರಿನ ಮೌಲ್ಯಕ್ಕಿಂತ ಕಡಿಮೆ ಮೊತ್ತ ನಮೂದಿಸಿ ₹3.24 ಲಕ್ಷ ರಾಜಸ್ವ ನಷ್ಟ ಉಂಟು ಮಾಡಿದ್ದಾರೆ. ಮೂರನೇ ಪ್ರಕರಣದಲ್ಲಿ, ಕ್ರಯದ ಕರಾರು ಮೌಲ್ಯಕ್ಕನುಗುಣವಾಗಿ ಕ್ರಯ ನೋಂದಣಿ ಮಾಡುವಾಗ, ಕಡಿಮೆ ಮೊತ್ತ ನಮೂದಿಸಿ ₹2.37 ಲಕ್ಷ ರಾಜಸ್ವ ನಷ್ಟ ಉಂಟು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.</p>.<p>ಈ ಅಧಿಕಾರಿಯು, 2024ನೇ ಸಾಲಿನಲ್ಲಿ ಅಂಗವಿಕಲರ ಸಬಲೀಕರಣಕ್ಕಾಗಿ ಶ್ರಮಿಸಿದ ಕಾರಣಕ್ಕಾಗಿ, ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಡಿ.3ರಂದು ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.</p>.<div><blockquote>ತನಿಖಾ ವರದಿಯ ಜೊತೆ ಅಗತ್ಯ ಮಾಹಿತಿಯನ್ನೊಳಗೊಂಡ ದಾಖಲೆಗಳನ್ನು ಲಗತ್ತಿಸಿ ಮುಂದಿನ ಕ್ರಮಕ್ಕಾಗಿ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯಕ್ತರಿಗೆ ಸಲ್ಲಿಸಿದ್ದೇವೆ </blockquote><span class="attribution">–ಕುಮಾರ, ಜಿಲ್ಲಾಧಿಕಾರಿ ಮಂಡ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯ ಶ್ರೀರಂಗಪಟ್ಟಣದ ಉಪನೋಂದಣಾಧಿಕಾರಿ ಜಿ.ಮಂಜುದರ್ಶಿನಿ ಅವರು ‘ಅಕ್ರಮ ಆಸ್ತಿ ನೋಂದಣಿ’ ಮಾಡಿ ಸರ್ಕಾರದ ಬೊಕ್ಕಸಕ್ಕೆ ₹17.70 ಲಕ್ಷ ನಷ್ಟ ಉಂಟು ಮಾಡಿದ್ದಾರೆ ಎಂಬುದು ತನಿಖಾ ವರದಿಯಲ್ಲಿ ಸಾಬೀತಾಗಿದೆ. </p>.<p>ದಸ್ತಾವೇಜುಗಳ ನೋಂದಣಿಯಲ್ಲಿ ಕ್ರಮಬದ್ಧವಲ್ಲದ ನೋಂದಣಿ ಮಾಡಿದ್ದಾರೆ ಹಾಗೂ ನೋಂದಣಿ ಶುಲ್ಕ ಮತ್ತು ಮುದ್ರಾಂಕ ಶುಲ್ಕ ಕಡಿಮೆ ಪಡೆದಿರುವುದು ಕರ್ತವ್ಯಲೋಪ ಎಂಬುದನ್ನು ತನಿಖಾ ತಂಡ ಪತ್ತೆ ಹಚ್ಚಿದೆ. ಈ ತನಿಖಾ ವರದಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p><strong>ಏನಿದು ದೂರು?: </strong>‘ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ (ಕೆ.ಆರ್.ಎಸ್) ಗ್ರಾಮದ ಸ.ನಂ. 6/1, ಹೊಸಹಳ್ಳಿ ಗ್ರಾಮದ ಸ.ನಂ. 60/1, 60/8, ಶ್ರೀರಂಗಪಟ್ಟಣ ಟೌನ್ ಮುನ್ಸಿಪಲ್ ಸ್ವತ್ತಿನ ಸಂಖ್ಯೆ 18–505–136, ಎಸ್– 14–21–12 ಹಾಗೂ 12–10–73 ಇವುಗಳಿಗೆ ಸಂಬಂಧಿಸಿ ಅಧಿಕಾರಿಯು ಆಸ್ತಿಗಳ ಅಕ್ರಮ ನೋಂದಣಿ ಮಾಡಿದ್ದಾರೆ’ ಎಂದು ಮಂಡ್ಯ ತಾಲ್ಲೂಕು ತೂಬಿನಕೆರೆಯ ಟಿ.ಎಲ್. ಶ್ರೀಧರ್ ಎಂಬುವರು ಜೂನ್ 21ರಂದು ದೂರು ನೀಡಿದ್ದರು.</p>.<p><strong>ತನಿಖಾ ತಂಡ ರಚನೆ: </strong>ದೂರಿನ ಮೇರೆಗೆ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯು ತನಿಖಾ ತಂಡ ರಚಿಸಿದ್ದರು. ತಂಡವು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕಡತಗಳನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸಿದೆ. 3 ಪ್ರಕರಣಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. </p>.<p>ಮೊದಲನೇ ಪ್ರಕರಣದಲ್ಲಿ, ಮಾಲೀಕತ್ವಕ್ಕೆ ಸಂಬಂಧಿಸಿ ಆರ್ಟಿಸಿ ಕಾಲಂ 9ರಲ್ಲಿ ‘ಮನೆಜಾಗ’ ಎಂದು ನಮೂದಾಗಿದ್ದರೂ ದಾಖಲೆಗಳನ್ನು ಪರಿಶೀಲಿಸದೆ, ದಸ್ತಾವೇಜು ನೋಂದಣಿಗೆ ಸಂಬಂಧಿಸಿ ನೀಡಲಾದ ಮಾರ್ಗಸೂಚಿಗಳನ್ನು ಪಾಲಿಸಿಲ್ಲ. ಮಾರ್ಗಸೂಚಿ ಬೆಲೆಗಿಂತ ಕಡಿಮೆ ಮೌಲ್ಯವನ್ನು ನಮೂದಿಸಿ ₹12.09 ಲಕ್ಷ ರಾಜಸ್ವ ನಷ್ಟ ಉಂಟು ಮಾಡಿದ್ದಾರೆ ಎಂದು ತಿಳಿಸಲಾಗಿದೆ. </p>.<p>ಎರಡನೇ ಪ್ರಕರಣದಲ್ಲಿ, ಜಂಟಿ ಮಾಲೀಕತ್ವದ ಆಸ್ತಿಯನ್ನು ಕ್ರಯ ಮಾಡುವಾಗ, ಸೂಕ್ತ ಮಾಲೀಕತ್ವದ ಬಗ್ಗೆ ದಾಖಲೆಗಳನ್ನು ಪರಿಶೀಲಿಸದೆ ನೋಂದಣಿ ಮಾಡಲಾಗಿದೆ. ಕರಾರಿನ ಮೌಲ್ಯಕ್ಕಿಂತ ಕಡಿಮೆ ಮೊತ್ತ ನಮೂದಿಸಿ ₹3.24 ಲಕ್ಷ ರಾಜಸ್ವ ನಷ್ಟ ಉಂಟು ಮಾಡಿದ್ದಾರೆ. ಮೂರನೇ ಪ್ರಕರಣದಲ್ಲಿ, ಕ್ರಯದ ಕರಾರು ಮೌಲ್ಯಕ್ಕನುಗುಣವಾಗಿ ಕ್ರಯ ನೋಂದಣಿ ಮಾಡುವಾಗ, ಕಡಿಮೆ ಮೊತ್ತ ನಮೂದಿಸಿ ₹2.37 ಲಕ್ಷ ರಾಜಸ್ವ ನಷ್ಟ ಉಂಟು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.</p>.<p>ಈ ಅಧಿಕಾರಿಯು, 2024ನೇ ಸಾಲಿನಲ್ಲಿ ಅಂಗವಿಕಲರ ಸಬಲೀಕರಣಕ್ಕಾಗಿ ಶ್ರಮಿಸಿದ ಕಾರಣಕ್ಕಾಗಿ, ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಡಿ.3ರಂದು ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.</p>.<div><blockquote>ತನಿಖಾ ವರದಿಯ ಜೊತೆ ಅಗತ್ಯ ಮಾಹಿತಿಯನ್ನೊಳಗೊಂಡ ದಾಖಲೆಗಳನ್ನು ಲಗತ್ತಿಸಿ ಮುಂದಿನ ಕ್ರಮಕ್ಕಾಗಿ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯಕ್ತರಿಗೆ ಸಲ್ಲಿಸಿದ್ದೇವೆ </blockquote><span class="attribution">–ಕುಮಾರ, ಜಿಲ್ಲಾಧಿಕಾರಿ ಮಂಡ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>