ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಷ್ಟ: ರೇಷ್ಮೆ ಬೆಳೆ ನಾಶ ಮಾಡಿದ ರೈತ

Last Updated 21 ಮೇ 2021, 4:22 IST
ಅಕ್ಷರ ಗಾತ್ರ

ಕೊಪ್ಪ: ರೇಷ್ಮೆ ಬೆಳೆಗೆ ಸೂಕ್ತ ಬೆಲೆ ಸಿಗದೆ ನಷ್ಟವಾದ ಕಾರಣ ಇಲ್ಲಿಯ ರೈತರೊಬ್ಬರು ಮನನೊಂದು ಗುರುವಾರ 1 ಎಕರೆಯಲ್ಲಿ
ಬೆಳೆದಿದ್ದ ರೇಷ್ಮೆ ಬೆಳೆಯನ್ನು ಟ್ರಾಕ್ಟರ್‌ನಲ್ಲಿ ಉಳುಮೆ ಮಾಡಿ ನಾಶಪಡಿಸಿದ್ದಾರೆ.

ಸಮೀಪದ ಹರಳಕೆರೆ ಗ್ರಾಮದ ರೈತ ಗಿರೀಶ್ ರೇಷ್ಮೆ ನಾಶ ಮಾಡಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ರೇಷ್ಮೆ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಮೂರು ವರ್ಷಗಳ ಹಿಂದೆ ಕೆ.ಜಿ ರೇಷ್ಮೆಗೆ ಸರ್ಕಾರ ₹ 40 ಪ್ರೋತ್ಸಾಹ ಧನ ನೀಡುತ್ತಿತ್ತು. ಆದರೆ ಈಗ ಅದನ್ನು ನಿಲ್ಲಿಸಲಾಗಿದೆ. ರೆಷ್ಮೆ ಬೆಳೆಯಿಂದ ಲಾಭಕ್ಕಿಂತ ಖರ್ಚು ಜಾಸ್ತಿಯಾಗಿದೆ. ಹೀಗಾಗಿ ಬೆಳೆ ನಾಶ ಮಾಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

‘₹ 3 ಲಕ್ಷ ಸಾಲ ಮಾಡಿ ರೇಷ್ಮೆ ಬೇಸಾಯ ಮಾಡಿದ್ದೆ, ಹುಳುವಿನ ಮನೆ ನಿರ್ಮಾಣ ಮಾಡಿ, ಕೊಳವೆ ಬಾವಿ ಕೊರೆಸಿದ್ದೆ. ಹಾಕಿದ್ದ ಹಣವೂ
ಬಾರದೆ ನಷ್ಟವಾಗಿದ್ದು ರೇಷ್ಮೆ ಬೆಳೆ ನಿರ್ವಹಣೆ ಮಾಡಲು ಸಾಧ್ಯವಾಗದೇ ನೋವಿನಿಂದ ಬೆಳೆ ನಾಶ ಮಾಡಿದ್ದೇನೆ’ ಎಂದು ರೈತ ಗಿರೀಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT